ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಡವರೊಂದಿಗೆ ನಂಟು ಕಳೆದುಕೊಂಡ ಬಿಜೆಪಿ: ಶಿವಸೇನಾ ಆರೋಪ

|
Google Oneindia Kannada News

ಮುಂಬೈ, ಜೂನ್ 25: ಬಡಜನರೊಂದಿಗಿನ ಸಂಪರ್ಕವನ್ನೇ ಬಿಜೆಪಿ ಕಳೆದುಕೊಂಡಿದೆ ಎಂದು ಶಿವಸೇನಾ ಆರೋಪಿಸಿದೆ.

ಬಿಜೆಪಿಯು ಕಳೆದ ತಿಂಗಳು ಆರಂಭಿಸಿರುವ 'ಸಂಪರ್ಕ್ ಸೇ ಸಮರ್ಥನ್' ಕಾರ್ಯಕ್ರಮ ವ್ಯಾಪಕವಾಗುತ್ತಿರುವ ಬೆನ್ನಲ್ಲೇ ಶಿವಸೇನಾ ನೀಡಿರುವ ಈ ಹೇಳಿಕೆ ಮಹತ್ವ ಪಡೆದಿದೆ.

ಮೋದಿ ಅನ್ಯಗ್ರಹಕ್ಕೂ ಹೋಗ್ತಾರೆ: ಶಿವಸೇನೆ ವ್ಯಂಗ್ಯಮೋದಿ ಅನ್ಯಗ್ರಹಕ್ಕೂ ಹೋಗ್ತಾರೆ: ಶಿವಸೇನೆ ವ್ಯಂಗ್ಯ

ಬೆಂಬಲಕ್ಕಾಗಿ ಜನರು ಮಾಧುರಿ ದೀಕ್ಷಿತ್, ಸಲ್ಮಾನ್ ಖಾನ್ಮ ರತನ್ ಟಾಟಾ, ಅಂಬಾನಿ, ಅದಾನಿ ಮುಂತಾದವರನ್ನು ಸಂಪರ್ಕಿಸುತ್ತಿದ್ದಾರೆ. ಆದರೆ, ಬಡವರೊಂದಿಗೆ ಸಂಪರ್ಕವನ್ನೇ ಕಳೆದುಕೊಂಡಿದ್ದಾರೆ ಎಂದು ಪಕ್ಷದ ಮುಖವಾಣಿ 'ಸಾಮ್ನಾ' ಪತ್ರಿಕೆಯಲ್ಲಿ ಶಿವಸೇನಾ ವ್ಯಂಗ್ಯವಾಡಿದೆ.

Shiv Sena accused bjp has lost its contact with poor

ಮಹಾರಾಷ್ಟ್ರದಾದ್ಯಂತ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆಯೂ ಶಿವಸೇನಾ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳನ್ನು ಟೀಕಿಸಿದೆ.

ರಾಜ್ಯವು ಹಸಿವು ಮತ್ತು ಬಡತನದಿಂದ ನರಳುತ್ತಿದೆ. ಈ ಕಾರಣದಿಮದ ಬದುಕಿನ ದಾರಿ ತಿಳಿಯದೆ ಕಂಗೆಟ್ಟ ಜನರು ಕುಟುಂಬದವರೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಬಿಜೆಪಿಗೆ ಬಹುಮತ ಬರದಿದ್ದರೆ ಪ್ರಣಬ್ ಪಿಎಂ? ಆರೆಸ್ಸೆಸ್ ತಂತ್ರಬಿಜೆಪಿಗೆ ಬಹುಮತ ಬರದಿದ್ದರೆ ಪ್ರಣಬ್ ಪಿಎಂ? ಆರೆಸ್ಸೆಸ್ ತಂತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗಾಗಿ ಏನನ್ನಾದರೂ ಮಾಡುತ್ತಾರೆ ಎಂಬ ಭ್ರಮೆಯಿಂದ ನಾವು ಹೊರಗೆ ಬರಬೇಕಾಗಿದೆ ಎಂದು ಸೇನಾ ಹೇಳಿದೆ.

ಬಿಜೆಪಿಯು ಬುಲೆಟ್ ಟ್ರೇನ್, ಮೆಟ್ರೋ ಮತ್ತು ಹೈಪರ್‌ ಸಿಟಿಯಂತಹ ಐಷಾರಾಮಿ ಯೋಜನೆಗಳ ಮೇಲೆ ಗಮನ ಹರಿಸುವಾಗ ರೈತರ ಅಭಿವೃದ್ಧಿಯನ್ನು ಕಡೆಗಣಿಸುತ್ತಿದೆ.

ವಿದೇಶಿ ಹೂಡಿಕೆದಾರರಿಂದ ಸಂಗ್ರಹಿಸಲಾದ ದೇಣಿಗೆ ರಾಜ್ಯದ ಬಡವರ ಪರಿಸ್ಥಿತಿಯನ್ನು ಇನ್ನಷ್ಟು ಹಾಳುಗೆಡವಿದೆ ಎಂದು ಶಿವಸೇನಾ ಆರೋಪಿಸಿದೆ.

English summary
Shiv Sena on Monday alleged that the ruling BJP has lost contact with poor people of the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X