ಕಾಶ್ಮೀರದ ರಕ್ತದೋಕುಳಿಗೆ ಕೇಂದ್ರ ಸರ್ಕಾರವೇ ಕಾರಣ: ಶಿವಸೇನಾ

ಮುಂಬೈ, ಜೂನ್ 16: "ಕಾಶ್ಮೀರದಲ್ಲಿ ಪವಿತ್ರ ರಂಜಾನ್ ಸಮಯದಲ್ಲಿ ನಡೆಯುತ್ತಿರುವ ರಕ್ತದೋಕುಳಿಗೆ ಕೇಮದ್ರ ಸರ್ಕಾರವೇ ಕಾರಣ" ಎಂದು ಶಿವಸೇನೆ ದೂರಿದೆ.

ಶಿವಸೇನಾ ಮುಖವಾಣಿ ಸಾಮ್ನಾದಲ್ಲಿನ ಸಂಪಾದಕೀಯದಲ್ಲಿ ಈ ಅಭಿಪ್ರಾಯ ಹೊರಬಂದಿದೆ. "ರಂಜಾನ್ ನ ಪವಿತ್ರ ಮಾಸವನ್ನು ಪಾಕಿಸ್ತಾನ ದುರುಪಯೋಗ ಪಡಿಸಿಕೊಳ್ಳುತ್ತಿದೆ. ನಮ್ಮ ಕೇಂದ್ರದ ಎನ್ ಡಿಎ ಸರ್ಕಾರ ಮಾತ್ರವೇ ರಂಜಾನ್ ಮಾಸಕ್ಕೆ ಗೌರವ ನೀಡುವಂತೆ ಹಿಂಸೆಯಲ್ಲಿ ಭಾಗಿಯಾಗದೆ ಸುಮ್ಮನಿದೆ. ಆದರೆ ಪಾಕಿಸ್ತಾನ ಮಾತ್ರ ಈ ಯಾವ ನಿಯಮವನ್ನೂ ಪಾಲಿಸುತ್ತಿಲ್ಲ. ಆದ್ದರಿಂದ ಕಾಶ್ಮೀರಿ ಕಣಿವೆಯಲ್ಲಿ ನಡೆಯುತ್ತಿರುವ ರಕ್ತದೋಕುಳಿಗೆ ಕೇಂದ್ರ ಸರ್ಕಾರವೇ ಕಾರಣವಾಗಿದೆ" ಎಮದು ಈ ಸಂಪಾದಕೀಯದಲ್ಲಿ ದೂರಲಾಗಿದೆ.

Shiv Sena accuses Center of bloodbath in Kashmir valley

"ಕಾಶ್ಮೀರ ಕಣಿವೆಯಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ವಿಶ್ವಸಂಸ್ಥೆ ವರದಿ ನೀಡಿರುವುದು ಅನರ್ಥವಾದುದು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ವ್ಯಕ್ತಿತ್ವಕ್ಕೆ ಪೆಟ್ಟು ನೀಡಿದೆ" ಎಂದು ಇದರಲ್ಲಿ ಬರೆಯಲಾಗಿದೆ.

ಮಾಜಿ ಪ್ರಧಾನಿ ದಿ.ಜವಹರಲಾಲ್ ನೆಹರು ಅವರ ಕಾಲದಲ್ಲಿ ಇದ್ದ ಪರಿಸ್ಥಿತಿಗಿಂತಲೂ ಹೀನಾಯ ಪರಿಸ್ಥಿತಿಯಲ್ಲಿ ಈಗ ಕಾಶ್ಮಿರವಿದೆ ಎಂದು ಅವರು ದೂರಿದ್ದಾರೆ.

ಜೂನ್ 15 ರಂದು ರೈಸಿಂಗ್ ಕಾಶ್ಮೀರ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಅವರನ್ನು ಗುಂಡಿಕ್ಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಅದೇ ದಿನ ಸೈನಿಕ ಔರಂಗಜೇಬ್ ರನ್ನು ಅಪಹರಿಸಿ ಕೊಲ್ಲಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+