ಸದೃಢ ಪಕ್ಷ ಕಟ್ಟಲು ಕಾಂಗ್ರೆಸ್ಗೆ ಶಿವಸೇನೆ ಸಲಹೆ
ಮುಂಬೈ, ಜೂನ್ 11: ಜಿತಿನ್ ಪ್ರಸಾದ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಶಿವಸೇನೆ ಕಾಂಗ್ರೆಸ್ನ್ನು ಅಣಕಿಸಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ತನ್ನ ಪಕ್ಷದೊಳಗೆ ಸದೃಢ ತಂಡವೊಂದನ್ನು ರಚಿಸಲಿದ್ದಾರೆ ಎಂದು ಹೇಳಿದೆ.
ಜಿತಿನ್ ಪ್ರಸಾದ, ಜೋತ್ಯಿರಾದಿತ್ಯ ಸಿಂಧಿಯಾ, ಸಚಿನ್ ಪೈಲಟ್ ಯುವ ಮುಖಂಡರಾಗಿದ್ದು, ಅವರಿಂದ ಹೆಚ್ಚಿನದ್ದನ್ನು ನಿರೀಕ್ಷಿಸಲಾಗುತ್ತದೆ. ಅಹ್ಮದ್ ಪಟೇಲ್, ರಾಜೀವ್ ಸತಾವ್ ನಿಧನದ ನಂತರ ಕಾಂಗ್ರೆಸ್ ನಲ್ಲಿ ಈಗಾಗಲೇ ನಿರ್ವಾತವಿದೆ. ಯುವ ಮುಖಂಡರು ಬಿಜೆಪಿ ಹಾದಿಯಲ್ಲಿ ಸಾಗುವುದು ಒಳ್ಳೆಯದಲ್ಲಾ ಎಂದು ಶಿವಸೇನೆ ಹೇಳಿದೆ.

ಯುವ ನಾಯಕರಾಗಿದ್ದ ಜಿತಿನ್ ಪ್ರಸಾದ ಕಾಂಗ್ರೆಸ್ ಪಕ್ಷಕ್ಕೆ ಪ್ರಯೋಜನಕಾರಿಯಾಗಿರಿಲಲ್ಲ, ಬಿಜೆಪಿಯಲ್ಲೂ ಅದೇ ರೀತಿಯಲ್ಲಿ ಇರಲಿದ್ದಾರೆ ಎಂದು ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.
ಪ್ರಸಾದ ಅವರ ಕುಟುಂಬಸ್ಥರು ಕಾಂಗ್ರೆಸ್ ಪಕ್ಷದ ನಂಬಿಕಸ್ತರು. ಮನ್ ಮೋಹನ್ ಸಿಂಗ್ ಅವರ ಮಂತ್ರಿ ಮಂಡಲದಲ್ಲಿ ಪ್ರಸಾದ ಕೂಡಾ ಮಂತ್ರಿಯಾಗಿದ್ದರು. ಆದಾಗ್ಯೂ, ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದರು.
ಇದೀಗ ಅವರನ್ನು ಸೇರ್ಪಡೆ ಮಾಡಿಕೊಂಡು ಬಿಜೆಪಿ ಸಂಭ್ರಮಿಸುತ್ತಿದೆ. ಜಾತಿ ರಾಜಕಾರಣ ಇದರ ಹಿಂದೆ ಇದೆ. ಉತ್ತರ ಪ್ರದೇಶದಲ್ಲಿನ ಬ್ರಾಹ್ಮಣ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಶಿವಸೇನೆ ಹೇಳಿದೆ.
ದೇಶ ಸ್ಥಾಪನೆಯಲ್ಲಿ ಕಾಂಗ್ರೆಸ್ ಕೊಡುಗೆ ನೀಡಿದೆ. ತಳಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕಾಗಿದೆ. ರಾಹುಲ್ ಗಾಂಧಿ ಈಗ ಪಕ್ಷದೊಳಗೆ ಸದೃಢ ತಂಡ ರಚಿಸಬೇಕಾಗಿದೆ ಎಂದು ಶಿವಸೇನೆ ಸಲಹೆ ನೀಡಿದೆ.
ಬಂಡಾಯ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸೀಮಿತವಾಗಿಲ್ಲ, ಮುಂದೆ ಏನು ಮಾಡಬೇಕು, ಹೇಗೆ ಪಕ್ಷದ ಆಸ್ತಿತ್ವ ಉಳಿಸಿಕೊಳ್ಳಬೇಕೆಂಬ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆ ನಡೆಯುತ್ತಿಲ್ಲ. ಮಹಾರಾಷ್ಟ್ರ, ಕೇರಳ, ಮತ್ತು ಕರ್ನಾಟಕ ಹೊರತುಪಡಿಸಿದಂತೆ ಉಳಿದ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಆಸ್ತಿತ್ವಕ್ಕಾಗಿ ಹೋರಾಡಬೇಕಾಗಿದೆ. ಈ ರಾಜಕೀಯ ಅಸಮಾತೋಲನ ಪ್ರಜಾಪ್ರಭುತ್ವಕ್ಕೆ ಹಾನಿಯಾಗಲಿದೆ ಎಂದು ಹೇಳಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications