ಸದೃಢ ಪಕ್ಷ ಕಟ್ಟಲು ಕಾಂಗ್ರೆಸ್ಗೆ ಶಿವಸೇನೆ ಸಲಹೆ
ಮುಂಬೈ, ಜೂನ್ 11: ಜಿತಿನ್ ಪ್ರಸಾದ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಶಿವಸೇನೆ ಕಾಂಗ್ರೆಸ್ನ್ನು ಅಣಕಿಸಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ತನ್ನ ಪಕ್ಷದೊಳಗೆ ಸದೃಢ ತಂಡವೊಂದನ್ನು ರಚಿಸಲಿದ್ದಾರೆ ಎಂದು ಹೇಳಿದೆ.
ಜಿತಿನ್ ಪ್ರಸಾದ, ಜೋತ್ಯಿರಾದಿತ್ಯ ಸಿಂಧಿಯಾ, ಸಚಿನ್ ಪೈಲಟ್ ಯುವ ಮುಖಂಡರಾಗಿದ್ದು, ಅವರಿಂದ ಹೆಚ್ಚಿನದ್ದನ್ನು ನಿರೀಕ್ಷಿಸಲಾಗುತ್ತದೆ. ಅಹ್ಮದ್ ಪಟೇಲ್, ರಾಜೀವ್ ಸತಾವ್ ನಿಧನದ ನಂತರ ಕಾಂಗ್ರೆಸ್ ನಲ್ಲಿ ಈಗಾಗಲೇ ನಿರ್ವಾತವಿದೆ. ಯುವ ಮುಖಂಡರು ಬಿಜೆಪಿ ಹಾದಿಯಲ್ಲಿ ಸಾಗುವುದು ಒಳ್ಳೆಯದಲ್ಲಾ ಎಂದು ಶಿವಸೇನೆ ಹೇಳಿದೆ.

ಯುವ ನಾಯಕರಾಗಿದ್ದ ಜಿತಿನ್ ಪ್ರಸಾದ ಕಾಂಗ್ರೆಸ್ ಪಕ್ಷಕ್ಕೆ ಪ್ರಯೋಜನಕಾರಿಯಾಗಿರಿಲಲ್ಲ, ಬಿಜೆಪಿಯಲ್ಲೂ ಅದೇ ರೀತಿಯಲ್ಲಿ ಇರಲಿದ್ದಾರೆ ಎಂದು ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.
ಪ್ರಸಾದ ಅವರ ಕುಟುಂಬಸ್ಥರು ಕಾಂಗ್ರೆಸ್ ಪಕ್ಷದ ನಂಬಿಕಸ್ತರು. ಮನ್ ಮೋಹನ್ ಸಿಂಗ್ ಅವರ ಮಂತ್ರಿ ಮಂಡಲದಲ್ಲಿ ಪ್ರಸಾದ ಕೂಡಾ ಮಂತ್ರಿಯಾಗಿದ್ದರು. ಆದಾಗ್ಯೂ, ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದರು.
ಇದೀಗ ಅವರನ್ನು ಸೇರ್ಪಡೆ ಮಾಡಿಕೊಂಡು ಬಿಜೆಪಿ ಸಂಭ್ರಮಿಸುತ್ತಿದೆ. ಜಾತಿ ರಾಜಕಾರಣ ಇದರ ಹಿಂದೆ ಇದೆ. ಉತ್ತರ ಪ್ರದೇಶದಲ್ಲಿನ ಬ್ರಾಹ್ಮಣ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಶಿವಸೇನೆ ಹೇಳಿದೆ.
ದೇಶ ಸ್ಥಾಪನೆಯಲ್ಲಿ ಕಾಂಗ್ರೆಸ್ ಕೊಡುಗೆ ನೀಡಿದೆ. ತಳಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕಾಗಿದೆ. ರಾಹುಲ್ ಗಾಂಧಿ ಈಗ ಪಕ್ಷದೊಳಗೆ ಸದೃಢ ತಂಡ ರಚಿಸಬೇಕಾಗಿದೆ ಎಂದು ಶಿವಸೇನೆ ಸಲಹೆ ನೀಡಿದೆ.
ಬಂಡಾಯ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸೀಮಿತವಾಗಿಲ್ಲ, ಮುಂದೆ ಏನು ಮಾಡಬೇಕು, ಹೇಗೆ ಪಕ್ಷದ ಆಸ್ತಿತ್ವ ಉಳಿಸಿಕೊಳ್ಳಬೇಕೆಂಬ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆ ನಡೆಯುತ್ತಿಲ್ಲ. ಮಹಾರಾಷ್ಟ್ರ, ಕೇರಳ, ಮತ್ತು ಕರ್ನಾಟಕ ಹೊರತುಪಡಿಸಿದಂತೆ ಉಳಿದ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಆಸ್ತಿತ್ವಕ್ಕಾಗಿ ಹೋರಾಡಬೇಕಾಗಿದೆ. ಈ ರಾಜಕೀಯ ಅಸಮಾತೋಲನ ಪ್ರಜಾಪ್ರಭುತ್ವಕ್ಕೆ ಹಾನಿಯಾಗಲಿದೆ ಎಂದು ಹೇಳಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications