ಭೀಮಾ-ಕೊರೆಗಾಂವ್ ದಾಳಿಯ ಹಿಂದೆ ರಾಜಕೀಯ ದುರುದ್ದೇಶ: ಶಿವಸೇನೆ
ಮುಂಬೈ, ಜನವರಿ 03: ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿರುವ ಭೀಮಾ-ಕೊರೆಗಾಂವ್ ದಾಳಿಯ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಶಿವಸೇನೆ ದೂರಿದೆ.
ವಿಡಿಯೋಗಳಲ್ಲಿ ನೋಡಿ ಮಹಾರಾಷ್ಟ್ರ ಬಂದ್ ಅಬ್ಬರ!
ಈ ಗಲಭೆಯನ್ನು ಕೆಲವರು ರಾಜಕೀಯ ದುರುದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವಂತಿದೆ. ಈ ಉತ್ಸವಕ್ಕೆ 200 ವರ್ಷಗಳ ಇತಿಹಾಸವಿದೆ. ಯಾವಾಗಲೂ ಇಂಥ ಘಟನೆ ನಡೆದಿರಲಿಲ್ಲ. ಆದರೆ ಈಗ ಇದ್ದಕ್ಕಿದ್ದಂತೆ ಗಲಭೆ ನಡೆಯುತ್ತಿರುವುದಕ್ಕೆ ಕಾರಣ, ಕೆಲವರು ಜಾತಿ ವಿಷಯವನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಶಿವಸೇನೆ ಮುಖ್ಯಸ್ಥ ಸಂಜಯ್ ರಾವತ್ ಹೇಳಿದ್ದಾರೆ.
LIVE: ಕರ್ನಾಟಕಕ್ಕೂ ತಟ್ಟಿದ ಮುಂಬೈ ಬಂದ್ ಬಿಸಿ: ಬಸ್ ಸೇವೆ ಸ್ಥಗಿತ
"ಇದು ಖಂಡಿತವಾಗಿಯೂ ಇಲ್ಲಿ ಸರ್ಕಾರದ ದೌರ್ಬಲ್ಯ. ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕಾಯ್ದುಕೊಳ್ಳುವುದು ಸರ್ಕಾರದ ಕರ್ತವ್ಯ. ರಾಜ್ಯಕ್ಕೆ ಹೊರ ರಾಜ್ಯದಿಂದ ಬಂದು, ಪ್ರಚೋದನಾಕಾರಿ ಭಾಷಣ ಮಾಡುವವರಿಗೆ ಅನುಮತಿ ನೀಡಿದ್ದೇ ತಪ್ಪು" ಎಂದವರು ಹೇಳಿದ್ದಾರೆ.
"ಯಾವುದೇ ನಾಯಕ, ತನ್ನ ರಾಜ್ಯವಲ್ಲದೆ ಬೇರೆ ರಾಜ್ಯಕ್ಕೆ ಹೋಗಿ ಭಾಷಣ ಮಾಡುವುದಾದರೆ ಕೆಲವು ಶಿಷ್ಟಾಚಾರ ಅನುಸರಿಸಬೇಕು. ಆ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕದಡುವ ಹಕ್ಕು ಆತನಿಗೆ ಎಂದಿಗೂ ಇಲ್ಲ. ಉರಿವ ಬೆಂಕಿಗೆ ತುಪ್ಪ ಸುರಿವ ಕೆಲಸವನ್ನು ಮಾಡಬಾರದು" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಭೀಮಾ ಕೊರೆಗಾಂವ್ ದಲಿತರ ಪ್ರತಿರೋಧದ ಸಂಕೇತ: ರಾಹುಲ್ ಗಾಂಧಿ
"ಭಾರತದ ವಾಣಿಜ್ಯ ರಾಜಧಾನಿಯಾದ ಮಹಾರಾಷ್ಟ್ರದಲ್ಲಿ ಇಂಥ ಘಟನೆ ನಡೆದಿದ್ದು ದುರದೃಷ್ಟ. ಇಂಥ ಘಟನೆಗಳು ಕೇವಲ ಮಹಾರಾಷ್ಟ್ರದ ಹಿತದ ದೃಷ್ಟಿಯಿಂದ ಮಾತ್ರವಲ್ಲ, ಇಡೀ ದೇಶದ ಹಿತದೃಷ್ಟಿಯಿಂದಲೂ ಉತ್ತಮ ಬೆಳವಣಿಗೆಯಲ್ಲ" ಎಂದಿದ್ದಾರೆ.