ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೀಮಾ-ಕೊರೆಗಾಂವ್ ದಾಳಿಯ ಹಿಂದೆ ರಾಜಕೀಯ ದುರುದ್ದೇಶ: ಶಿವಸೇನೆ

|
Google Oneindia Kannada News

ಮುಂಬೈ, ಜನವರಿ 03: ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿರುವ ಭೀಮಾ-ಕೊರೆಗಾಂವ್ ದಾಳಿಯ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಶಿವಸೇನೆ ದೂರಿದೆ.

ವಿಡಿಯೋಗಳಲ್ಲಿ ನೋಡಿ ಮಹಾರಾಷ್ಟ್ರ ಬಂದ್ ಅಬ್ಬರ! ವಿಡಿಯೋಗಳಲ್ಲಿ ನೋಡಿ ಮಹಾರಾಷ್ಟ್ರ ಬಂದ್ ಅಬ್ಬರ!

ಈ ಗಲಭೆಯನ್ನು ಕೆಲವರು ರಾಜಕೀಯ ದುರುದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವಂತಿದೆ. ಈ ಉತ್ಸವಕ್ಕೆ 200 ವರ್ಷಗಳ ಇತಿಹಾಸವಿದೆ. ಯಾವಾಗಲೂ ಇಂಥ ಘಟನೆ ನಡೆದಿರಲಿಲ್ಲ. ಆದರೆ ಈಗ ಇದ್ದಕ್ಕಿದ್ದಂತೆ ಗಲಭೆ ನಡೆಯುತ್ತಿರುವುದಕ್ಕೆ ಕಾರಣ, ಕೆಲವರು ಜಾತಿ ವಿಷಯವನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಶಿವಸೇನೆ ಮುಖ್ಯಸ್ಥ ಸಂಜಯ್ ರಾವತ್ ಹೇಳಿದ್ದಾರೆ.

LIVE: ಕರ್ನಾಟಕಕ್ಕೂ ತಟ್ಟಿದ ಮುಂಬೈ ಬಂದ್ ಬಿಸಿ: ಬಸ್ ಸೇವೆ ಸ್ಥಗಿತLIVE: ಕರ್ನಾಟಕಕ್ಕೂ ತಟ್ಟಿದ ಮುಂಬೈ ಬಂದ್ ಬಿಸಿ: ಬಸ್ ಸೇವೆ ಸ್ಥಗಿತ

"ಇದು ಖಂಡಿತವಾಗಿಯೂ ಇಲ್ಲಿ ಸರ್ಕಾರದ ದೌರ್ಬಲ್ಯ. ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕಾಯ್ದುಕೊಳ್ಳುವುದು ಸರ್ಕಾರದ ಕರ್ತವ್ಯ. ರಾಜ್ಯಕ್ಕೆ ಹೊರ ರಾಜ್ಯದಿಂದ ಬಂದು, ಪ್ರಚೋದನಾಕಾರಿ ಭಾಷಣ ಮಾಡುವವರಿಗೆ ಅನುಮತಿ ನೀಡಿದ್ದೇ ತಪ್ಪು" ಎಂದವರು ಹೇಳಿದ್ದಾರೆ.

Shiv Sena alleges political vendetta behind Bhima-Koregaon violence

"ಯಾವುದೇ ನಾಯಕ, ತನ್ನ ರಾಜ್ಯವಲ್ಲದೆ ಬೇರೆ ರಾಜ್ಯಕ್ಕೆ ಹೋಗಿ ಭಾಷಣ ಮಾಡುವುದಾದರೆ ಕೆಲವು ಶಿಷ್ಟಾಚಾರ ಅನುಸರಿಸಬೇಕು. ಆ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕದಡುವ ಹಕ್ಕು ಆತನಿಗೆ ಎಂದಿಗೂ ಇಲ್ಲ. ಉರಿವ ಬೆಂಕಿಗೆ ತುಪ್ಪ ಸುರಿವ ಕೆಲಸವನ್ನು ಮಾಡಬಾರದು" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭೀಮಾ ಕೊರೆಗಾಂವ್ ದಲಿತರ ಪ್ರತಿರೋಧದ ಸಂಕೇತ: ರಾಹುಲ್ ಗಾಂಧಿಭೀಮಾ ಕೊರೆಗಾಂವ್ ದಲಿತರ ಪ್ರತಿರೋಧದ ಸಂಕೇತ: ರಾಹುಲ್ ಗಾಂಧಿ

"ಭಾರತದ ವಾಣಿಜ್ಯ ರಾಜಧಾನಿಯಾದ ಮಹಾರಾಷ್ಟ್ರದಲ್ಲಿ ಇಂಥ ಘಟನೆ ನಡೆದಿದ್ದು ದುರದೃಷ್ಟ. ಇಂಥ ಘಟನೆಗಳು ಕೇವಲ ಮಹಾರಾಷ್ಟ್ರದ ಹಿತದ ದೃಷ್ಟಿಯಿಂದ ಮಾತ್ರವಲ್ಲ, ಇಡೀ ದೇಶದ ಹಿತದೃಷ್ಟಿಯಿಂದಲೂ ಉತ್ತಮ ಬೆಳವಣಿಗೆಯಲ್ಲ" ಎಂದಿದ್ದಾರೆ.

English summary
In wake of the ongoing protests and bandh across Maharashtra against the Bhima-Koregaon violence, the Shiv Sena on Wednesday alleged that someone is trying to gain political advantage by creating all such nuisance across the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X