'ಕರಾಚಿ ಬೇಕರಿ' ಹೆಸರನ್ನು ಮರಾಠಿಗೆ ಬದಲಾಯಿಸಲು ಶಿವಸೇನೆಯಿಂದ ಒತ್ತಡ
ಮುಂಬೈ, ನವೆಂಬರ್ 19: ಕರಾಚಿ ಬೇಕರಿ ಹೆಸರನ್ನು ಮರಾಠಿಗೆ ಬದಲಾಯಿಸುವಂತೆ ಶಿವಸೇನೆ ಒತ್ತಡ ಹಾಕಿದೆ.
ಈ ಕುರಿತು ಶಿವಸೇನಾ ನಾಯಕ ನಿತಿನ್ ನಂದಗಾಂವ್ಕರ್ ಎಂಬುವವರು ಕರಾಚಿ ಬೇಕರಿಗೆ ಬಂದು ಹೆಸರು ಬದಲಿಸುವಂತೆ ಕೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾವು ನಿಮಗೆ ಕಾಲಾವಕಾಶ ಕೊಡುತ್ತೇವೆ, ಅಷ್ಟೊರೊಳಗೆ ನೀವು ಕರಾಚಿ ಬೇಕರಿ ಹೆಸರನ್ನು ಬದಲಿಸಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2019ರಲ್ಲಿ ಬೆಂಗಳೂರಿನಲ್ಲಿ ಕರಾಚಿ ಬೇಕರಿ ಮಾಲೀಕರೊಬ್ಬರಿಗೆ 24 ಗಂಟೆಯಲ್ಲಿ ಬೇಕರಿ ಹೆಸರು ಬದಲಾಯಿಸುವಂತೆ ಭೂಗತ ಪಾತಕಿ ಮಿಕ್ಕಿಶೆಟ್ಟಿ ಎಂಬ ಹೆಸರಿನಲ್ಲಿ ಬೆದರಿಕೆ ಕರೆ ಬಂದಿತ್ತು.1953ರಲ್ಲಿ ಖಾನ್ಚಂದ್ ರಮ್ನಾನಿ ಎಂಬ ಸಿಂಧಿ ವಲಸಿಗ ಉದ್ಯಮಿ ಹೈದರಾಬಾದ್ನಲ್ಲಿ ಕರಾಚಿ ಬೇಕರಿಯನ್ನು ಆರಂಭಿಸಿದರು.
1947 ರ ಭಾರತ-ಪಾಕಿಸ್ತಾನ ವಿಭಜನೆ ಸಂದರ್ಭದಲ್ಲಿ ಹೈದರಾಬಾದ್ಗೆ ವಲಸೆ ಬಂದ ಖಾನ್ಚಂದ್ ರಮ್ನಾನಿ ಆರಂಭಿಸಿದ ಪ್ರಸಿದ್ಧ ಕರಾಚಿ ಬೇಕರಿ ಭಾರೀ ಜನಪ್ರಿಯತೆಯನ್ನು ಗಳಿಸಿದೆ.
ಸದ್ಯ ಕರಾಚಿ ಬೇಕರಿ ಭಾರತದ ಐದು ಪ್ರಮುಖ ನಗರಗಳಾದ ಹೈದರಾಬಾದ್, ಬೆಂಗಳೂರು, ಮುಂಬಯಿ, ದೆಹಲಿ ಹಾಗೂ ಚೆನ್ನೆ ನಗರಗಳಲ್ಲಿ ತನ್ನ ಶಾಖೆಗಳನ್ನು ಹೊಂದಿದೆ.
ಕರಾಚಿ ಸ್ವೀಟ್ಸ್ ಹೆಸರು ಬದಲಿಸಿ ಮರಾಠಿ ಭಾಷೆಯಲ್ಲಿ ಬೇರೆ ಹೆಸರು ಇಡುವಂತೆ ನಿತಿನ್ ನಂದಗಾಂವ್ಕರ್ ಒತ್ತಾಯಿಸಿದ್ದಾರೆ.
ಭಾರತದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪಾಕಿಸ್ತಾನದ ಕರಾಚಿ ನಗರದ ಹೆಸರು ಇಟ್ಟುಕೊಂಡು ವ್ಯಾಪಾರ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ನಿತಿನ್ ನಂದಗಾಂವ್ಕರ್ ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications