ಮದರ್ ತೆರೇಸಾ ಬಗ್ಗೆ ಭಾಗ್ವತ್ ಹೇಳಿಕೆಗೆ ಶಿವಸೇನೆ ಬೆಂಬಲ
ಮುಂಬೈ, ಫೆ.25: ನೊಬೆಲ್ ಶಾಂತಿ ಪಾರಿತೋಷಕ ಪುರಸ್ಕೃತೆ ಮದರ್ ತೆರೇಸಾ ಅವರ ನಿಸ್ವಾರ್ಥ ಸೇವೆ ಹಿಂದೆ ಮತಾಂತರ ಹುನ್ನಾರವಿತ್ತು ಎಂದು ಆರೆಸ್ಸೆಸ್ ಮುಖಂಡ ಮೋಹನ್ ಭಾಗ್ವತ್ ನೀಡಿದ ವಿವಾದಿತ ಹೇಳಿಕೆಗೆ ಶಿವಸೇನೆ ಬುಧವಾರ ಬೆಂಬಲ ವ್ಯಕ್ತಪಡಿಸಿದೆ.
ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ರ ವಿವಾದಾತ್ಮಕ ಹೇಳಿಕೆಯನ್ನು ಸಮರ್ಧಿಸಿಕೊಂಡಿರುವ ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಮದರ್ ತೆರೇಸಾ ಅಷ್ಟೇ ಅಲ್ಲ ಭಾರತಕ್ಕೆ ಬಂದಿರುವ ಎಲ್ಲಾ ಮಿಷನರಿಗಳ ಉದ್ದೇಶ ಮತಾಂತರವೇ ಆಗಿದೆ. ಹೀಗಾಗಿ ಮೋಹನ್ ಭಾಗ್ವತ್ ಅವರ ಹೇಳಿಕೆ ಸರಿಯಾಗಿದೆ. ಮುಸ್ಲಿಮರು ಕತ್ತಿ ಹಿಡಿದು ಬಲವಂತವಾಗಿ ಮತಾಂತರ ಮಾಡಿದರೆ, ಕ್ರೈಸ್ತ ಮಿಷನರಿಗಳು ಹಣದ ಆಮಿಷವೊಡ್ಡಿ ಈ ಕೆಲಸ ಪೂರೈಸಿಕೊಂಡಿವೆ ಎಂದು ಸಾಮ್ನಾದಲ್ಲಿ ಹೇಳಲಾಗಿದೆ.[ಮದರ್ ತೆರೇಸಾ ಭಾರತಕ್ಕೆ ಯಾಕೆ ಬಂದಿದ್ರು? ಆಸ್ಕ್ ಆರೆಸ್ಸೆಸ್]
ರಾಜಸ್ಥಾನದ ಭರತ್ಪುರ್ ದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಮದರ್ ತೆರೇಸಾ ಅವರ ಸೇವೆ ನಿಸ್ವಾರ್ಥವಾಗಿತ್ತು. ಆದರೆ, ಆ ಸೇವೆಯ ಹಿಂದಿನ ಉದ್ದೇಶ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದೇ ಆಗಿತ್ತು ಎಂದಿದ್ದರು.
ಮೋಹನ್ ಭಾಗ್ವತ್ ಅವರ ಹೇಳಿಕೆ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಚರ್ಚೆ ನಡೆದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಭಾಗ್ವತ್ ಹೇಳಿಕೆ ಖಂಡಿಸಿದ್ದಾರೆ. (ಪಿಟಿಐ)
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications