50:50 ಸೂತ್ರಕ್ಕೆ ಲಿಖಿತ ಭರವಸೆ ನೀಡಿ: ಬಿಜೆಪಿಗೆ ಶಿವಸೇನಾ ಪಟ್ಟು
ಮುಂಬೈ, ಅಕ್ಟೋಬರ್ 26: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ಉಂಟಾಗಿರುವ ಗೊಂದಲಕ್ಕೆ ಶನಿವಾರ ಪರಿಹಾರ ಸಿಕ್ಕಿಲ್ಲ. ಬಿಜೆಪಿ ಮತ್ತು ಶಿವಸೇನಾ ಜತೆಯಾಗಿ ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದ್ದರೂ ಅಧಿಕಾರ ಹಂಚಿಕೆಯ ಷರತ್ತುಗಳಿಗೆ ಸಹಮತ ವ್ಯಕ್ತವಾಗಿಲ್ಲ.
ಸಮ್ಮಿಶ್ರ ಸರ್ಕಾರ ರಚನೆಗೆ ಜಂಟಿಯಾಗಿ ರಾಜ್ಯಪಾಲರ ಮುಂದೆ ಹಕ್ಕು ಮಂಡನೆ ಮಾಡುವ ಮುನ್ನವೇ ಈ ಒಪ್ಪಂದ ಇತ್ಯರ್ಥ ಆಗಬೇಕು. ಅದಕ್ಕೆ ಲಿಖಿತ ಭರವಸೆ ನೀಡಿದೆ ಎಂದು ಶಿವಸೇನಾ ಪಟ್ಟು ಹಿಡಿದಿದೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಬಿಜೆಪಿಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತು ಶಿವಸೇನಾ 50:50ರ ಸಮಾನ ಅಧಿಕಾರ ಹಂಚಿಕೆ ಮಾಡುವ ಸೂತ್ರಕ್ಕೆ ಬದ್ಧರಾಗಬೇಕು. ಅದಕ್ಕೆ ಬಿಜೆಪಿ ಲಿಖಿತ ಭರವಸೆ ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಶನಿವಾರ ಉದ್ಧವ್ ಠಾಕ್ರೆ ನಿವಾಸಕ್ಕೆ ಭೇಟಿ ನೀಡಿದ ಶಿವಸೇನಾದ ನೂತನ 56 ಶಾಸಕರು, ಅವರ ಮಗ ಆದಿತ್ಯ ಠಾಕ್ರೆ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಆಗ್ರಹಿಸಿದರು. ತಮ್ಮ ಮುಂದೆ ಇತರೆ ಆಯ್ಕೆಗಳು ಮುಕ್ತವಾಗಿದ್ದರೂ ಬಿಜೆಪಿ ಹಾಗೂ ಶಿವಸೇನಾ 'ಹಿಂದುತ್ವ ಸಿದ್ಧಾಂತ'ಕ್ಕೆ ಅಂಟಿಕೊಂಡಿರುವುದರಿಂದ ಆ ಆಯ್ಕೆಗಳತ್ತ ಆಸಕ್ತಿ ತೋರಿಸುವುದಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದರು.
'ಚುನಾವಣೆಗೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ 50:50ರ ಅಧಿಕಾರ ಹಂಚಿಕೆಯ ಭರವಸೆ ನೀಡಿದ್ದರಿಂದ ಈ ಸೂತ್ರ ಆಗಲೇ ನಿರ್ಧರಿತವಾಗಿತ್ತು. ಹಾಗಾಗಿ ಎರಡೂ ಮಿತ್ರ ಪಕ್ಷಗಳು ತಲಾ 2.50 ವರ್ಷಗಳ ಕಾಲ ಸರ್ಕಾರ ನಡೆಸುವ ಅಧಿಕಾರ ಪಡೆದುಕೊಳ್ಳಬೇಕಿದೆ. ಇದರಿಂದ ಶಿವಸೇನಾಗೂ ಮುಖ್ಯಮಂತ್ರಿ ಸ್ಥಾನ ನೀಡಲೇಬೇಕು. ಬಿಜೆಪಿಯಿಂದ ಈ ಬಗ್ಗೆ ಲಿಖಿತ ಭರವಸೆ ಪಡೆದುಕೊಳ್ಳಬೇಕು' ಎಂದು ಸೇನಾ ಮುಖಂಡ ಪ್ರತಾಪ್ ಸರ್ನಾಯಕ್ ಹೇಳಿದರು.
ಅಮಿತ್ ಶಾ ಅಥವಾ ದೇವೇಂದ್ರ ಫಡ್ನವಿಸ್ ಈ ಬಗ್ಗೆ ಖಾತರಿ ನೀಡಬೇಕು. ಅವರು ನಮ್ಮೊಂದಿಗೆ ಮಾತನಾಡಿ ಸೂತ್ರಕ್ಕೆ ಒಪ್ಪಿಕೊಳ್ಳಲಿ ಎಂದು ಶಿವಸೇನಾ ಆಗ್ರಹಿಸಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications