ಶಿವಸೇನಾ 'ಮಹಾ' ಮೈತ್ರಿ ಉಳಿಸಿದ 'ಬಿಜೆಪಿ' ಶಾ
ಮುಂಬೈ, ಸೆ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವೆ ಸೀಟು ಹಂಚಿಕೆ ವಿವಾದ ತಾರಕಕ್ಕೇರಿ ಇನ್ನೇನು 'ಮಹಾ' ಮೈತ್ರಿ ಮುರಿದುಬೀಳಲಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದರೆ, ಕೊನೆ ಹಂತದಲ್ಲಿ ಅಂಗಳಕ್ಕಿಳಿದ ಬಿಜೆಪಿ ಅಧ್ಯಕ್ಷ ಅಮಿತ್ ಸಾ ಅವರು ಬಿಕ್ಕಟ್ಟು ಶಮನಗೊಳಿಸಿ ಶಿವಸೇನೆಯ 'ಹುಲಿ' ಉದ್ಧವ್ ಠಾಕ್ರೆ ಕೋಪವನ್ನು ತಣ್ಣಗೆ ಮಾಡಿದ್ದಾರೆ.
ಮಂಗಳವಾರ ಇತ್ಯರ್ಥವಾದ ಮಂಗಳಕರ ಒಪ್ಪಂದದಂತೆ ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ 151 ಕ್ಷೇತ್ರಗಳಲ್ಲಿ ಶಿವಸೇನಾ ಮತ್ತು ಬಿಜೆಪಿ 130 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದ ಸ್ಥಾನಗಳನ್ನು ಮಿಕ್ಕ ಮಿತ್ರ ಪಕ್ಷಗಳಿಗೆ ಹಂಚಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಣತಿಯಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸಂಧಾನ ನಡೆಸಿ ಎರಡೂವರೆ ದಶಕದ ಮೈತ್ರಿಯನ್ನು ಭದ್ರಪಡಿಸಿದ್ದಾರೆ.
ಅಸೆಂಬ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಈ ಹಂತದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಬೇಡ. ಇದರಿಂದ ಮತದಾರರದಲ್ಲಿ ಗೊಂದಲ ಸೃಷ್ಟಿಯಾಗುತ್ತದೆ ಎಂದು ಶಾ ಕಿವಿಮಾತು ಹೇಳಿದ್ದಾರೆ.[ನಾನೇ ಸಿಎಂ ಎಂದ ಉದ್ದವ್]

ಹೀಗಾಗಿ ಸೀಟು ಹಂಚಿಕೆ ಸಂಬಂಧ ಇಂದು ಮುಂಬೈನಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಉಭಯ ನಾಯಕರು ಚರ್ಚಿಸಿದ್ದು, ಬಿಜೆಪಿ ಪಕ್ಷಕ್ಕೆ 130 ಸ್ಥಾನಗಳನ್ನು ಬಿಟ್ಟು ಕೊಡಲು ಶಿವಸೇನೆ ಸಿದ್ಧವಿದೆ. ಅಂತೆಯೇ ತಾನು 151 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಶಿವಸೇನೆ ಸ್ಪಷ್ಟಪಡಿಸಿದ್ದು, ಉಳಿದ 7 ಸ್ಥಾನಗಳಲ್ಲಿ ಮೈತ್ರಿಕೂಟದ ಸಣ್ಣ ಪಕ್ಷಗಳ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಬಿಜೆಪಿಗೆ 119 ಸ್ಥಾನ, ಮೈತ್ರಿಕೂಟದಲ್ಲಿರುವ ಇತರೆ ಪಕ್ಷಗಳಿಗೆ 18 ಸ್ಥಾನ ಮತ್ತು ತನಗೆ 151 ಸ್ಥಾನ ಬೇಕು ಎಂದು ಶೀವಸೇನಾ ಈ ಮುಂಚೆ ಒತ್ತಡ ಹೇರಿತ್ತು. ಈ ಸೂತ್ರಕ್ಕೆ ಒಪ್ಪದೇ ಇದ್ದರೆ ತಾನು ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧ ಎಂದು ಶಿವಸೇನೆ ಖಾರವಾಗಿ ಪ್ರತಿಕ್ರಿಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
2009ರಲ್ಲಿ ಶಿವಸೇನೆ 169 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ 44 ಸ್ಥಾನ ಗೆದ್ದಿತ್ತು. ಅದೇ ರೀತಿ ಬಿಜೆಪಿ 119 ಸ್ಥಾನಗಳಲ್ಲಿ ಸ್ಪರ್ಧಿಸಿ 46 ಕ್ಷೇತ್ರಗಳಲ್ಲಿ ವಿಜೇತರಾಗಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 23 ಸ್ಥಾನಗಳನ್ನು ಹಾಗೂ ಶಿವಸೇನೆ 18 ಕ್ಷೇತ್ರಗಳಲ್ಲಿ ಗೆದ್ದಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇರುವುದರಿಂದ ಹೆಚ್ಚು ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications