ಬಿಜೆಪಿ ಜತೆಗಿನ ದೋಸ್ತಿ ಮುಗಿಸುವ ಸುಳಿವು ನೀಡಿದ ಶಿವಸೇನೆ
ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗಿನ ದೋಸ್ತಿಯನ್ನು ಶಿವಸೇನೆ ಮುರಿದುಕೊಳ್ಳುವ ಸೂಚನೆ ನೀಡಿದೆ. ತೈಲ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿರುವ ಶಿವಸೇನೆಯ ಸಂಸದ ಸಂಜಯ್ ರಾವತ್, ಬಿಜೆಪಿ ಜತೆಗಿನ ಮೈತ್ರಿ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿ ಜತೆಗೆ ನಿಂತು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿಚಾರಗಳಲ್ಲಿ ಜನರ ಆಕ್ರೋಶ ಎದುರಿಸಲು ನಾವು ಸಿದ್ಧರಿಲ್ಲ. ಬಿಜೆಪಿಯ ನೀತಿಗಳಿಂದಾಗಿ ಜನರನ್ನು ಎದುರಿಸುವುದೇ ಕಷ್ಟವಾಗಿದೆ ಎಂದು ರಾವತ್ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.
ಶಿವಸೇನೆಯ ಕೇಂದ್ರಸ್ಥಾನ ಮಾತೋಶ್ರೀಯಲ್ಲಿ ಸಭೆಯ ನಂತರ ಸಂಜಯ್ ಟ್ವೀಟ್ ಗಳನ್ನು ಮಾಡಿದ್ದಾರೆ. ಕಾದು, ನೋಡಿ ಎಂದು ಸಂದೇಶವನ್ನು ಜನರಿಗೂ ಹಾಗೂ ಬಿಜೆಪಿಗೂ ಅವರು ನೀಡಿದ್ದಾರೆ. ರೈತರ ಸಾಲ ಮನ್ನಾ ಸೇರಿದಂತೆ ಹಲವು ವಿಚಾರಗಳಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರಕಾರ ನಡೆದುಕೊಂಡ ರೀತಿ ಬಗ್ಗೆ ಶಿವಸೇನೆ ಟೀಕಿಸಿದೆ.

ಬಿಜೆಪಿ ಜತೆಗೆ ಮೈತ್ರಿಯೇ ಇದ್ದರೂ ಮಹಾರಾಷ್ಟ್ರ ಹಾಗೂ ಕೇಂದ್ರ ಸರಕಾರದ ವಿರುದ್ಧ ಶಿವಸೇನಾದ ಮುಖವಾಣಿ ಸಾಮ್ನಾದಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳಲಾಗಿದೆ. ಶಿವಸೇನೆ ಮೇಲಿಂದ ಮೇಲೆ ಚುನಾವಣೆಗಳನ್ನು ಸೋಲುತ್ತಿದೆ. ಅದರಲ್ಲೂ ಸ್ಥಳೀಯ ಸಂಸ್ಥೆಗಳಲ್ಲಿನ ಸೋಲಿನಿಂದ ಕಂಗೆಟ್ಟಿದೆ.
ಜತೆಗೆ ಎನ್ ಸಿಪಿ ಜತೆಗೆ ಬಿಜೆಪಿ ನಿಕಟವಾಗುತ್ತಿದೆ ಎಂಬ ಬಗ್ಗೆ ಕೂಡ ಶಿವಸೇನೆಗೆ ಆಕ್ಷೇಪವಿದೆ. ಆದ್ದರಿಂದ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ನೀಡಿದ ಬೆಂಬಲ ಹಿಂಪಡೆಯುವ ಮಾತನಾಡುತ್ತಿದೆ ಶಿವಸೇನೆ.
2014ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 122 ಸ್ಥಾನಗಳನ್ನು ಗೆದ್ದಿತ್ತು. ಆಗ 63 ಸ್ಥಾನಗಳಲ್ಲಿ ಗೆದ್ದಿದ್ದ ಶಿವಸೇನೆ ಜತೆಗೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿತ್ತು. ಸರಳ ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿತ್ತು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications