ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಅಧಿಕಾರದ ದುರಹಂಕಾರ ತೋರಿಸಿದರೆ...' ಬಿಜೆಪಿಗೆ ಶಿವಸೇನೆ ಎಚ್ಚರಿಕೆ!

|
Google Oneindia Kannada News

ಮುಂಬೈ, ಅಕ್ಟೋಬರ್ 15: "ಅಧಿಕಾರವಿದೆ ಎಂದು ದುರಹಂಕಾರ ತೋರಿಸಿದರೆ ಪರಿಣಾಮ ಏನಾಗುತ್ತದೆ ಎಂಬ ಪಾಠವನ್ನು ಮಹಾರಾಷ್ಟ್ರದ ಮತದಾರರು ತೋರಿಸಿದ್ದಾರೆ" ಎಂದು ಶಿವಸೇನೆ ಬಿಜೆಪಿಗೆ ಎಚ್ಚರಿಕೆ ನೀಡಿದೆ.

2014 ರ ವಿಧಾನಸಬೆ ಚುನಾವಣೆಯಲ್ಲಿ 122(288)ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ, ಈ ಬಾರಿ ಕೇವಲ 105 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಷ್ಟೇ ಶಕ್ತವಾಯಿತು. ಕಳೆದ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಒಟ್ಟು 17 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ಬಿಜೆಪಿ 105, ಶಿವಸೇನೆ 56, ಕಾಂಗ್ರೆಸ್ 44, ಎನ್ ಸಿಪಿ 50, ಇತರರು 22 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

Shiv Sena Indirectly Slams BJP Quotes, Arrogance Of Power

ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೆ ಸೇರಿ 200 ಕ್ಕೂ ಎಹಚ್ಚು ಕ್ಷೇತ್ರಗಳಲ್ಲಿ ಜಯಗಳಿಸುವ ವಿಶ್ವಾಸದಲ್ಲಿದ್ದ ಬಿಜೆಪಿಗೆ ತೀವ್ರ ಆಘಾತವಾಗಿದೆ. ಆದರೆ ಅಧಿಕಾರದಲ್ಲಿದ್ದಾಗ ದುರಹಂಕಾರ ಪ್ರದರ್ಶಿಸಿದರೆ ಜನ ಹೀಗೆಯೇ ಪಾಠ ಕಲಿಸುತ್ತಾರೆ. "ನೀವು ಅಹಂಕಾರ ಪ್ರದರ್ಶಿಸಿದರೆ ಬುದ್ಧಿ ಕಲಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಜನ ಈ ಮೂಲಕ ನೀಡಿದ್ದಾರೆ" ಎಮದು ಶಿವ ಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.

English summary
Shiv Sena Indirectly Slams BJP Quotes, "Arrogance Of Power"
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X