'ಅಧಿಕಾರದ ದುರಹಂಕಾರ ತೋರಿಸಿದರೆ...' ಬಿಜೆಪಿಗೆ ಶಿವಸೇನೆ ಎಚ್ಚರಿಕೆ!
ಮುಂಬೈ, ಅಕ್ಟೋಬರ್ 15: "ಅಧಿಕಾರವಿದೆ ಎಂದು ದುರಹಂಕಾರ ತೋರಿಸಿದರೆ ಪರಿಣಾಮ ಏನಾಗುತ್ತದೆ ಎಂಬ ಪಾಠವನ್ನು ಮಹಾರಾಷ್ಟ್ರದ ಮತದಾರರು ತೋರಿಸಿದ್ದಾರೆ" ಎಂದು ಶಿವಸೇನೆ ಬಿಜೆಪಿಗೆ ಎಚ್ಚರಿಕೆ ನೀಡಿದೆ.
2014 ರ ವಿಧಾನಸಬೆ ಚುನಾವಣೆಯಲ್ಲಿ 122(288)ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ, ಈ ಬಾರಿ ಕೇವಲ 105 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಷ್ಟೇ ಶಕ್ತವಾಯಿತು. ಕಳೆದ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಒಟ್ಟು 17 ಕ್ಷೇತ್ರಗಳನ್ನು ಕಳೆದುಕೊಂಡಿದೆ.
ಬಿಜೆಪಿ 105, ಶಿವಸೇನೆ 56, ಕಾಂಗ್ರೆಸ್ 44, ಎನ್ ಸಿಪಿ 50, ಇತರರು 22 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೆ ಸೇರಿ 200 ಕ್ಕೂ ಎಹಚ್ಚು ಕ್ಷೇತ್ರಗಳಲ್ಲಿ ಜಯಗಳಿಸುವ ವಿಶ್ವಾಸದಲ್ಲಿದ್ದ ಬಿಜೆಪಿಗೆ ತೀವ್ರ ಆಘಾತವಾಗಿದೆ. ಆದರೆ ಅಧಿಕಾರದಲ್ಲಿದ್ದಾಗ ದುರಹಂಕಾರ ಪ್ರದರ್ಶಿಸಿದರೆ ಜನ ಹೀಗೆಯೇ ಪಾಠ ಕಲಿಸುತ್ತಾರೆ. "ನೀವು ಅಹಂಕಾರ ಪ್ರದರ್ಶಿಸಿದರೆ ಬುದ್ಧಿ ಕಲಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಜನ ಈ ಮೂಲಕ ನೀಡಿದ್ದಾರೆ" ಎಮದು ಶಿವ ಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.