ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಬಗ್ಗೆ ಆದಿತ್ಯ ಠಾಕ್ರೆ ಹೇಳಿದ್ದೇನು?
ಮುಂಬೈ, ಜುಲೈ 19: 'ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಬಗ್ಗೆ ಏನು ಹೇಳುತ್ತೀರಿ? ಯಾರಾಗಬಹುದು ಮುಖ್ಯಮಂತ್ರಿ?' ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಿವಸೇನಾ ನಾಯಕ ಆದಿತ್ಯ ಠಾಕ್ರೆ, 'ಈ ಯಾತ್ರೆ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸುವುದಕ್ಕಲ್ಲ,ಜನರೊಂದಿಗೆ ಸಂಪರ್ಕ ಸಾಧಿಸುವುದಕ್ಕೆ, ಅವರಿಗೆ ಧನ್ಯವಾದ ಅರ್ಪಿಸುವುದಕ್ಕೆ' ಎಂದು ಜಾಣತನದ ಉತ್ತರ ನೀಡಿದರು.
ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಶಿವಸೇನೆಯವರೇ, ಠಾಕ್ರೆ ಕುಟುಂಬಕ್ಕೆ ಉಪಮುಖ್ಯಮಂತ್ರಿಯ ಪಟ್ಟ ಪಡೆದು ಗೊತ್ತಿಲ್ಲ, ಏನಿದ್ದರೂ ಮುಖ್ಯಮಂತ್ರಿಯ ಪಟ್ಟ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಇತ್ತೀಚೆಗೆ ಹೇಳಿದ್ದರು. ಅದೂ ಅಲ್ಲದೆ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರನ್ನು ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಎಂದು ಬಿಂಬಿಸಲಾಗಿತ್ತು. ಆದರೆ ಈ ಬಗ್ಗೆ ಕೇಳಿದ ಪ್ರಶ್ನೆಗಳನ್ನು ಜಾಣತನದಿಂದ ತೇಲಿಸಿದ ಆದಿತ್ಯ ಠಾಕ್ರೆ, 'ಚುನಾವಣೆಗೆ ಇನ್ನೂ ಕನಿಷ್ಠ ಮೂರು ತಿಂಗಳು ಬಾಕಿ ಇದೆ. ಆ ಬಗ್ಗೆ ಯೋಚಿಸೋದಕ್ಕೆ ಸಮಯವಿದೆ' ಎಂದರು.

ಲೋಕಸಭೆ ಚುನಾವಣೆಯಲ್ಲಿ ಶಿವಸೇನೆಯನ್ನು ಅಶಿರ್ವದಿಸಿದ ಜನರಿಗೆ ಕೃತಜ್ಞತೆ ಅರ್ಪಿಸುವ ಜೊತೆಗೆ, ವಿಧಾನಸಭೆ ಚುನಾವಣೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದಕ್ಕೆ ಶಿವಸೇನೆ 5 ದಿನಗಳ ಜನ ಆಶೀರ್ವಾದ ಯಾತ್ರೆ ಕೈಗೊಂಡಿದೆ. ಈ ಯಾತ್ರೆಯ ಸಂದರ್ಭದಲ್ಲಿ ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಆದಿತ್ಯ ಠಾಕ್ರೆ ತಾವು ಚುನಾವಣೆಗೆ ನಿಲ್ಲುವ ಬಗ್ಗೆ ಮಾತನಾಡಿದರು.
"ಜನರು ಇಷ್ಟಪಟ್ಟರೆ ನಾನು ಚುನಾವಣೆಗೆ ನಿಲ್ಲುತ್ತೇನೆ. ಠಾಕ್ರೆ ಕುಟುಂಬದ ಸಾಮಾಜಿಕ ಸೇವೆಯ ಕನಸು ಈಡೇರಿಸಲು ಪ್ರಯತ್ನಿಸುತ್ತೇನೆ" ಎಂದು ಆದಿತ್ಯ ಠಾಕ್ರೆ ಹೇಳಿದರು. ಆದಿತ್ಯ ಠಾಕ್ರೆ ಚುನಾವಣೆಗೆ ಸ್ಪರ್ಧಿಸಿದರೆ ಠಾಕ್ರೆ ಕುಟುಂಬದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊದಲ ಅಭ್ಯರ್ಥಿಯಾಗಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications