ಶಿವಸೇನೆ ಮುಖಂಡ ಸಂಜಯ್ ರಾವತ್ ಅನಾರೋಗ್ಯ, ಆಸ್ಪತ್ರೆಗೆ ದಾಖಲು
Recommended Video
Shiv Sena leader Sanjay Raut is admitted to hospital | Oneindia Kannada
ಮುಂಬೈ, ನವೆಂಬರ್ 11: ಮಹಾರಾಷ್ಟ್ರ ರಾಜಕೀಯದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮುಂಬೈಯ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಅವರಿಗೆ ಏನಾಗಿತ್ತು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಆದರೆ ಅವರು ಒತ್ತಡದಲ್ಲಿದ್ದು, ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಬೆಳಿಗ್ಗೆಯಷ್ಟೇ ಶಿವಸೇನೆ -ಬಿಜೆಪಿ ಮೈತ್ರಿಯ ಬಗ್ಗೆ ಮಾತನಾಡಿದ್ದ ಸಂಜಯ್ ರಾವತ್, "ಜನಾದೇಶಕ್ಕೆ ತಲೆಬಾಗಿ 50:50 ಸೂತ್ರಕ್ಕೆ ಒಪ್ಪಿಗೆ ನೀಡದೆ ಬಿಜೆಪಿ ದುರಹಂಕಾರ ಪ್ರದರ್ಶಿಸಿದೆ. ನಾವೂ ಬಗ್ಗುವುದಿಲ್ಲ" ಎಂದಿದ್ದರು.

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಎನ್ ಸಿಪಿ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿದೆ ಎನ್ನಲಾಗಿದೆ.












Click it and Unblock the Notifications