ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಆಪ್ತನನ್ನು ಬಂಧಿಸಿದ ಇಡಿ
ಮುಂಬೈ,ನವೆಂಬರ್ 26: ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ಆಪ್ತ ಅಮಿತ್ ಚಾಂಡೋಲೆ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಸರ್ನಾಯಕ್ ಅವರ ವ್ಯವಹಾರದಲ್ಲಿ ಅಮಿತ್ ಪಾತ್ರ ಇರುವ ಕುರಿತು ವಿಚಾರಣೆ ನಡೆದಿದೆ. ಸರ್ನಾಯಕ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಇಡಿ ಅಧಿಕಾರಿಗಳು ನವೆಂಬರ್ 24 ರಂದು ದಾಳಿ ನಡೆಸಿದ್ದರು.
ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ವಿಚಾರಣೆಗಾಗಿ ತಮ್ಮ ವಶಕ್ಕೆ ಒಪ್ಪಿಸುವಂತೆ ಕೋರುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರತಾಪ್ ಕ್ವಾರಂಟೈನ್ನಲ್ಲಿರುವ ಕಾರಣ ಸಮನ್ಸ್ಗೆ ಉತ್ತರಿಸಿಲ್ಲ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

'ಜಾರಿ ನಿರ್ದೇಶಾನಲಯವು ಭದ್ರತಾ ಪೂರೈಕೆದಾರ ಟಾಪ್ಸ್ ಗ್ರೂಪ್ ಪ್ರವರ್ತಕರಿಗೆ ಮತ್ತು ಕೆಲವು ರಾಜಕಾರಣಿಗಳು ಸೇರಿದಂತೆ ಅದಕ್ಕೆ ಸಂಬಂಧಿಸಿದ ಸದಸ್ಯರಿಗೆ ಸೇರಿದ ಜಾಗಗಳಲ್ಲಿ ತಪಾಸಣೆ ನಡೆಸಿದೆ. ಮುಂಬೈ ಮತ್ತು ಥಾಣೆಗಳಲ್ಲಿ ಹತ್ತು ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ' ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.
ಥಾಣೆಯ ಒವಾಲ-ಮಜಿವಾಡ ಕ್ಷೇತ್ರದ ಶಿವಸೇನಾ ಶಾಸಕರಾಗಿರುವ ಪ್ರತಾಪ್ ಸರ್ನಾಯಕ್, ಮುಂಬೈ ಅನ್ನು ಪಾಕಿಸ್ತಾನ ಆಕ್ರಮಿಕ ಕಾಶ್ಮೀರಕ್ಕೆ ಹೋಲಿಸಿದ್ದ ನಟಿ ಕಂಗನಾ ರಣಾವತ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸುವ ಮೂಲಕ ಇತ್ತೀಚೆಗೆ ಸುದ್ದಿಯಾಗಿದ್ದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications