ಸಚಿನ್ ವಾಜೆ ಬಗ್ಗೆ ಮೊದಲೇ ತಿಳಿದಿತ್ತು, ಮುಖಂಡರಿಗೆ ಎಚ್ಚರಿಕೆಯನ್ನೂ ನೀಡಿದ್ದೆ: ಸಂಜಯ್ ರಾವತ್
ಮುಂಬೈ, ಮಾರ್ಚ್ 29: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಮುಂದೆ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಗ್ಗೆ ಮೊದಲೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾಗಿ ಶಿವಸೇನಾ ಮುಖಂಡ ಸಂಜಯ್ ರಾವತ್ ತಿಳಿಸಿದ್ದಾರೆ.
ಸಚಿನ್ ವಾಜೆ ಬಗ್ಗೆ ತಮಗೆ ತಿಳಿದಿತ್ತು. ಹೀಗಾಗಿ ಆತ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಸಮಸ್ಯೆಗಳನ್ನು ಸೃಷ್ಟಿಸಬಹುದು ಎಂದು ಈ ಮೊದಲೇ ತಿಳಿಸಿದ್ದಾಗಿ ಅವರು ಹೇಳಿದ್ದಾರೆ. ವಾಜೆ ಪ್ರಕರಣವು ಉದ್ಧವ್ ಠಾಕ್ರೆ ಸರ್ಕಾರಕ್ಕೆ ಕೆಲವು ಪಾಠಗಳನ್ನು ಕಳುಹಿಸಿದೆ ಎಂದಿದ್ದಾರೆ.
'ಮಹಾರಾಷ್ಟ್ರ ಪೊಲೀಸ್ ಪಡೆಗೆ ವಾಜೆ ಅವರನ್ನು ಮರಳಿ ಸೇರಿಸುವಾಗ, ಅವರು ನಮಗೆ ಸಮಸ್ಯೆಗಳನ್ನು ಸೃಷ್ಟಿಸಬಹುದು ಎಂದು ನಾನು ಕೆಲವು ನಾಯಕರಿಗೆ ಮಾಹಿತಿ ನೀಡಿದ್ದೆ. ಆತನ ನಡವಳಿಕೆ ಮತ್ತು ಕೆಲಸದ ರೀತಿ ಸರ್ಕಾರಕ್ಕೆ ತೊಂದರೆಗಳನ್ನು ತಂದೊಡ್ಡಬಹುದು ಎಂದು ಅನಿಸಿತ್ತು. ಆ ನಾಯಕರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ನಾನು ಹೇಳಿದ ಮಾತುಗಳು ಅವರಿಗೆ ಚೆನ್ನಾಗಿ ನೆನಪಿರುತ್ತದೆ' ಎಂದು ಹೇಳಿದ್ದಾರೆ.

ತಾವು ಹಲವು ದಶಕಗಳ ಕಾಲ ಪತ್ರಕರ್ತರಾಗಿದ್ದು, ವಾಜೆ ಬಗ್ಗೆ ತಿಳಿದಿತ್ತು. ಆ ವ್ಯಕ್ತಿ ಕೆಟ್ಟವರಲ್ಲ. ಆದರೆ ಕೆಲವು ನಿರ್ದಿಷ್ಟ ಸನ್ನಿವೇಶಗಳು ಅವರನ್ನು ಹಾಗೆ ಮಾಡಿವೆ. ವಾಜೆಯ ಚಟುವಟಿಕೆಗಳು ಮತ್ತು ವಿವಾದಗಳ ಸಂಪೂರ್ಣ ಘಟನೆ ಎಂವಿಎ ಸರ್ಕಾರಕ್ಕೆ ಪಾಠ ಕಲಿಸಿದೆ. ಅದು ಹಾಗೆ ಆಗಿದ್ದು ಒಳ್ಳೆಯದೇ ಆಯಿತು. ನಮಗೆ ಕೆಲವು ಪಾಠಗಳನ್ನು ಕಲಿಸಿತು ಎಂದು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications