ರಾಜ್ಯಪಾಲರನ್ನು ಭೇಟಿಯಾಗಲಿರುವ ಸೇನೆ, ಕಾಂಗ್ರೆಸ್, ಎನ್ಸಿಪಿ ನಾಯಕರು
ಮಹಾರಾಷ್ಟ್ರ ನವೆಂಬರ್ 16 : ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಗೊಂದಲ ಮುಂದುವರೆದಿದೆ. ಇವತ್ತು ಶಿವಸೇನೆ, ಎನ್ಸಿಪಿ, ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಮಧ್ಯಾಹ್ನ 4ಗಂಟೆಯ ವೇಳೆಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಲಿದ್ದಾರೆ.
ಸರ್ಕಾರ ರಚನೆಗೆ ಎಲ್ಲಾ ಪಕ್ಷಗಳಿಗೆ ಆಹ್ವಾನ ನೀಡಿದರೂ ಬಹುಮತ ಸಾಭೀತು ಪಡಿಸಲು ಯಾವುದೇ ಪಕ್ಷಕ್ಕೂ ಸಾಧ್ಯವಾಗಿರಲಿಲ್ಲ. ಹೀಗಾಗಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಹೀಗಾಗಿ ಇವತ್ತಿನ ರಾಜ್ಯಪಾಲರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.
ರಾಜ್ಯಪಾಲರನ್ನು ಮೂರೂ ಪಕ್ಷಗಳ ನಿಯೋಗ ಭೇಟಿಯಾಗುತ್ತಿದ್ದರೂ ಬೇರೆಯದೇ ಕಾರಣವನ್ನು ನೀಡುತ್ತಿದ್ದಾರೆ. ಭಾರೀ ಮಳೆಯಿಂದ ನಿರಾಶ್ರಿತರಾದವರಿಗೆ ತಕ್ಷಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಡ ಹೇರುವ ಹಿನ್ನೆಲೆಯಲ್ಲಿ ಈ ಭೇಟಿ ಎಂದು ಈ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ.

ಮತ್ತೊಂದೆಡೆ ಮೈತ್ರಿಗೆ ಎನ್ಸಿಪಿ ಶಿವಸೇನೆ ಕಾಂಗ್ರೆಸ್ ಸಾಕಷ್ಟು ಸಿದ್ಧತೆಗಳು ನಡೆಯುತ್ತದೆ. ಗುರುವಾರ ಮೂರೂ ಪಕ್ಷಗಳ ನಾಯಕರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಸಾಮಾನ್ಯಾ ಕನಿಷ್ಠ ಕಾರ್ಯಕ್ರಮಗಳ ಕರುಡು ಪ್ರತಿಯೂ ಸಿದ್ಧಪಡಿಸಲಾಯಿತು. ಅನುಮೋದನೆಗಾಗಿ ಮೂರೂ ಪಕ್ಷಗಳ ನಾಯಕರಿಗೆ ಕರುಡು ಪ್ರತಿ ಕಳುಹಿಸಲಾಗಿದೆ. ಶಿವಸೇನೆ ಮೈತ್ರಿಯ ನೇತೃತ್ವವಹಿಸಿಕೊಳ್ಳಲಿದೆ ಎಂದು ಎನ್ಸಿಪಿ ವಕ್ತಾರ ಹೇಳಿಕೆಯನ್ನು ನೀಡಿದ್ದಾರೆ. ಮೈತ್ರಿ ಸರ್ಕಾರ ರಚನೆಯ ವಿಶ್ವಾಸವನ್ನು ಎನ್ಸಿಪಿ ನಾಯಕ ಶರದ್ ಪವಾರ್ ವ್ಯಕ್ತಪಡಿಸಿದ್ದರು.
ಕಳೆದ 24ನೇ ತಾರೀಕಿನಂದು ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು. ಯಾವುದೇ ಪಕ್ಷಕ್ಕೂ ಬಹುಮತ ಬಾರದೆ ಮೈತ್ರಿಯೂ ಸಾಧ್ಯವಾಗದ ಕಾರಣ ರಾಜ್ಯಪಾಲರು ಕಳೆದೆಡು ದಿನಗಳ ಹಿಂದೆಯಷ್ಟೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸನ್ನು ಮಾಡಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications