ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶನಿವಾರ ರಾಜ್ಯಪಾಲರಿಗೆ ಪತ್ರ ನೀಡಲಿರುವ ಶಿವಸೇನೆ-ಕಾಂಗ್ರೆಸ್-NCP

|
Google Oneindia Kannada News

ಮುಂಬೈ, ನವೆಂಬರ್ 21: ಇದೇ ವಾರಾಂತ್ಯದಲ್ಲಿ ಮಹಾರಾಷ್ಟ್ರದ ಸರ್ಕಾರ ರಚನೆಯ ಪ್ರಹಸನಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.

Recommended Video

BJP leaders fighting with CM B S Yeddyurappa in yesterday meeting | Oneindia kannada

ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಸೇರಿ ರಾಜ್ಯಪಾಲರನ್ನು ಭೇಟಿ ಮಾಡಿ ಪತ್ರ ನೀಡಲು ನಿರ್ಧರಿಸಿವೆ. ಗುರುವಾರ ದೆಹಲಿಯಲ್ಲಿ ನಡೆದ ಸರಣಿ ಸಭೆಯ ನಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಪ್ರಹಸನದಲ್ಲಿ ಕೊನೆಗೆ ಗೆದ್ದಿದ್ದು ಕಾಂಗ್ರೆಸ್!ಮಹಾರಾಷ್ಟ್ರ ರಾಜಕೀಯ ಪ್ರಹಸನದಲ್ಲಿ ಕೊನೆಗೆ ಗೆದ್ದಿದ್ದು ಕಾಂಗ್ರೆಸ್!

ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆಯೂ ನಡೆದಿದ್ದು, ಸಭೆಯ ನಂಗತರ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್, "ಶುಕ್ರವಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ" ಎಂದಿದ್ದಾರೆ.

Shiv Sena-NCP-Congress Letter To Be Givern To Governor On Saturday

"ಮಹಾರಾಷ್ಟ್ರದಲ್ಲಿ ಶಿವಸೇನೆಯನ್ನು ಹೊರಗಿಟ್ಟು ಸರ್ಕಾರ ರಚಿಸುವುದಕ್ಕಂತೂ ಸಾಧ್ಯವಿಲ್ಲ. ಆದ್ದರಿಂದ ನಮ್ಮ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡು ಒಂದಾಗಿ ಹೆಜ್ಜೆ ಇಡಬೇಕಾಗುತ್ತದೆ" ಎಂದು ಎನ್ ಸಿಪಿ ನಾಯಕ ನವಾಬ್ ಮಲೀಕ್ ಹೇಳಿದ್ದಾರೆ.

ಮಧ್ಯಂತರ ಚುನಾವಣೆ ಇಲ್ಲ: ಸ್ಥಿರ ಸರ್ಕಾರದ ಭರವಸೆ ನೀಡಿದ ಪವಾರ್ಮಧ್ಯಂತರ ಚುನಾವಣೆ ಇಲ್ಲ: ಸ್ಥಿರ ಸರ್ಕಾರದ ಭರವಸೆ ನೀಡಿದ ಪವಾರ್

ಮೂರು ಪಕ್ಷಗಳೂ ಒಂದಾಗಿ ಸರ್ಕಾರ ರಚಿಸಲು ಸಿದ್ಧವಿವೆ. ಆದರೆ ಅಧಿಕಾರ ಹಂಚಿಕೆಯ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

English summary
Maharashtra Assembly Elections 2019: Shiv Sena-NCP-Congress Letter To Be Givern To Governor On Saturday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X