ಎಚ್‌ಡಿಕೆಯ ಬೆಳಗಾವಿ ಎರಡನೇ ರಾಜಧಾನಿ ಹೇಳಿಕೆಗೆ ಶಿವಸೇನೆ ತಕರಾರು

ಮುಂಬೈ, ಆಗಸ್ಟ್‌ 02: ಉತ್ತರ ಕರ್ನಾಟಕಕ್ಕೆ ಅನ್ಯಾವಾಗಿದೆ ಎಂಬ ಕೂಗು ಶಮನ ಮಾಡಲು ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದ ಕುಮಾರಸ್ವಾಮಿ ಹೇಳಿಕೆಗೆ ಶಿವಸೇನೆ ಆಕ್ಷೇಪ ವ್ಯಕ್ತಪಡಿಸಿದೆ.

ಕುಮಾರಸ್ವಾಮಿ ಅವರ ಈ ಹೇಳಿಕೆಯ ವಿರುದ್ಧ ಮಹಾರಾಷ್ಟ್ರ ಸರ್ಕಾರವು ಹೈಕೋರ್ಟ್‌ ಮೆಟ್ಟಿಲೇರಬೇಕು ಎಂದಿರುವ ಶಿವಸೇನೆ ಪಕ್ಷ, ಕುಮಾರಸ್ವಾಮಿ ಅವರಿಗೆ ನ್ಯಾಯಾಂಗ ನಿಂದನೆ ನೊಟೀಸ್ ಜಾರಿ ಮಾಡಬೇಕು ಎಂದು ಆಗ್ರಹಿಸಿದೆ.

ಬೆಳಗಾವಿಯು ಈ ಮುಂಚೆ ಮುಂಬೈ ಪ್ರಾಂಥದ ಭಾಗವಾಗಿತ್ತು ಹಾಗಾಗಿ ಅದು ಮಹರಾಷ್ಟ್ರಕ್ಕೆ ಸೇರಬೇಕು ಎಂಬುದು ಶಿವಸೇನೆಯ ವಾದ.

Shiv sena party oppose to make Belgavi as second capital of karnataka

ಬೆಳಗಾವಿಯ ವಿಚಾರವು ನ್ಯಾಯಾಲಯದಲ್ಲಿದ್ದಾಗ ಕುಮಾರಸ್ವಾಮಿ ಅವರು ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡುವ ಮಾಡಲು ಹೊರಟಿರುವುದು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಶಿವಸೇನೆ ಹೇಳಿದೆ.

ಕುಮಾರಸ್ವಾಮಿ ಅವರು ಬೆಳಗಾವಿಯನ್ನು ರಾಜಧಾನಿ ಮಾಡಲು ಹೊರಟಲ್ಲಿ ಶಿವಸೇನೆ ಹೋರಾಟ ಮಾಡುತ್ತದೆ ಎಂದು ಶಿವಸೇನೆ ಹೇಳಿದ್ದು, ಕುಮಾರಸ್ವಾಮಿ ಅವರ ಈ ಹೇಳಿಕೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಬಯಸುವವರ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ ಎಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+