ಅರೆರೆ.. 37 ಶಾಸಕರ ಬೆಂಬಲ ಪಡೆದುಬಿಟ್ಟರಾ ಏಕನಾಥ್ ಶಿಂಧೆ!?
ಮುಂಬೈ, ಜೂನ್ 22: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತೊಡೆ ತಟ್ಟಿರುವ ಏಕನಾಥ್ ಶಿಂಧೆ ತಮ್ಮ ಪರ ಬಹುಮತವಿದೆ ಎನ್ನುವ ವಾದ ಮಂಡಿಸಿದ್ದಾರೆ.
ಶಿವಸೇನೆಯ 55 ಶಾಸಕರ ಪೈಕಿ ಮೂರರ ಎರಡರಷ್ಟು ಶಾಸಕರು ತಮ್ಮ ಬೆಂಬಲಕ್ಕೆ ಇದ್ದಾರೆ ಎಂದು ಏಕನಾಥ್ ಶಿಂಧೆ ಹೇಳುತ್ತಿದ್ದಾರೆ. ಆ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.
ರಾಜ್ಯದಲ್ಲಿ ರಾಜಕೀಯ ಮೇಲಾಟಕ್ಕೆ ಕಾರಣವಾಗಿರುವ ಬೆಳವಣಿಗೆಗಳ ಮಧ್ಯೆ ಏಕನಾಥ್ ಶಿಂಧೆ ತಮ್ಮ ಬೆಂಬಲಿತ ಶಾಸಕೊಂದಿಗೆ ಗುಜರಾತ್ನಿಂದ ಅಸ್ಸಾಂನ ಗುವಾಹಟಿ ಕಡೆಗೆ ಹೊರಟಿದ್ದಾರೆ. ಗುವಾಹಟಿಗೆ ತೆರಳುವುದಕ್ಕೂ ಪೂರ್ವದಲ್ಲೇ ಶಿಂಧೆ ತಂಡವನ್ನು ಮತ್ತಿಬ್ಬರು ಶಾಸಕರು ಸೇರ್ಪಡೆ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂರರ ಎರಡರಷ್ಟು ಬೆಂಬಲದ ಹಿಂದಿನ ರಾಜಕೀಯ ಲೆಕ್ಕಾಚಾರವನ್ನು ಓದಿ ತಿಳಿಯಿರಿ.

ಏಕನಾಥ್ ಶಿಂಧೆಗೆ ಕಮಲ ವಲಯವೇ ಅಚ್ಚುಮೆಚ್ಚು
ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಕೆರಳಿ ಕೆಂಡವಾಗಿರುವ ಏಕನಾಥ್ ಶಿಂಧೆಗೆ ಕಮಲಯ ವಲಯ ಎಂದರೆ ಬಲು ಅಚ್ಚುಮೆಚ್ಚು. ಆದ್ದರಿಂದಲೇ ಬಿಜೆಪಿಯ ಜೊತೆಗೆ ಸೇರಿಕೊಂಡು ಸರ್ಕಾರವನ್ನು ಮುನ್ನೆಡೆಸಬೇಕು ಎನ್ನುವುದು ಅವರ ಪ್ರಸ್ತಾಪವಾಗಿದೆ. ಇದಕ್ಕೆ ಪೂರಕವಾಗಿ ಬಿಜೆಪಿಯ ಪರವಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಃ ಶಿವಸೇನೆ ಶಾಸಕರೇ ಅಡ್ಡ ಮತದಾನ ಮಾಡಿದ್ದಾರೆ.

ಏಕನಾಥ್ ಶಿಂಧೆ ಪರ 26 ಶಾಸಕರ ಬೆಂಬಲ
ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಬಾವುಟ ಹಾರಿಸಿದ ಏಕನಾಥ್ ಶಿಂಧೆಗೆ ಬೆಂಬಲ ವ್ಯಕ್ತಪಡಿಸಿರುವ 26 ಶಾಸಕರು ಯಾರು ಎಂಬುದನ್ನು ಈ ಕೆಳಗಿನ ಪಟ್ಟಿಯಲ್ಲಿ ತಿಳಿದುಕೊಳ್ಳೋಣ.
* ಏಕನಾಶ್ ಶಿಂಧೆ
* ತಾನಾಜಿ ಸಾವಂತ್
* ಬಾಲಾಜಿ ಕಲ್ಯಾಣ್ಕರ್
* ಪ್ರಕಾಶ್ ಆನಂದರಾವ್ ಅಬಿತ್ಕರ್
* ಅಬ್ದುಲ್ ಸತ್ತಾರ್
* ಸಂಜಯ್ ಪಾಂಡುರಂಗ
* ಶ್ರೀನಿವಾಸ್ ಒನೆಗಾ
* ಮಹೇಶ್ ಶಿಂಧೆ
* ಸಂಜಯ್ ರೈಮುಲ್ಕರ್
* ವಿಶ್ವನಾಥ್ ಭೋರ್
* ಸಂದೀಪನ್ ರಾವ್ ಭೂಮ್ರೆ
* ರಮೇಶ್ ಬೋರ್ನಾರೆ
* ಅನಿಲ್ ಬಾಬರ್
* ಚಿನ್ಮನರಾವ್ ಪಾಟೀಲ್
* ಶಂಭುರಾಜ್ ದೇಸಾಯಿ
* ಮಹೇಂದ್ರ ದಳವಿ
* ಶಹಾಜಿ ಪಾಟೀಲ್
* ಪ್ರದೀಪ್ ಜೈಸ್ವಾಲ್
* ಮಹೇಂದ್ರ ಥೋರ್ವೆ
* ಕಿಶೋರ್ ಪಾಟೀಲ್
* ಜ್ಞಾನರಾಜ್ ಚೌಗುಲೆ
* ಸಂಜಯ್ ಗಾಯಕವಾಡ್
* ಸುಹಾಸ್ ಕಾಂಡೆ

ಏಕನಾಥ್ ಶಿಂಧೆಗೆ ಯಾಕೆ ಬೇಕು 37 ಶಾಸಕರ ಬೆಂಬಲ?
ಮಹಾರಾಷ್ಟ್ರದಲ್ಲಿ ಶಿವಸೇನೆಯ ಒಟ್ಟು 55 ಶಾಸಕರಿದ್ದಾರೆ. ವಾಸ್ತವದಲ್ಲಿ ಏಕನಾಥ್ ಶಿಂಧೆ ಪರವಾಗಿ 26 ಶಾಸಕರ ಬೆಂಬಲವಿದೆ. ಅದಾಗ್ಯೂ, 37 ಶಾಸಕರು ತಮ್ಮ ಬೆಂಬಲಿದ್ದಾರೆ ಎಂಬುದಾಗಿ ಹೇಳಿಕೊಳ್ಳುತ್ತಿದ್ದಾರೆ. ಏಕೆಂದರೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಶಿವಸೇನೆಯಲ್ಲಿನ ಒಟ್ಟು ಶಾಸಕರಲ್ಲಿ ಮೂರರ ಎರಡರಷ್ಟು ಮಂದಿ ಬೆಂಬಲ ಪಡೆದಿರಬೇಕಾಗುತ್ತದೆ. ಅಂದರೆ ಒಟ್ಟು 55 ಶಾಸಕರಲ್ಲಿ ಕನಿಷ್ಠ 37 ಶಾಸಕರು ಬಿಜೆಪಿಯ ಜೊತೆ ಹೋಗುವುದಕ್ಕೆ ಸಹಮತ ಬೇಕಾಗುತ್ತದೆ.
ಸಾಮಾನ್ಯವಾಗಿ ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಪಕ್ಷದ ವಿರುದ್ಧ ಚಟುವಟಿಕೆಗಳಿಗೆ ಅನರ್ಹತೆಯ ಶಿಕ್ಷೆ ನೀಡಲಾಗುತ್ತದೆ. ಇಂಥ ಅನರ್ಹತೆಯ ಶಿಕ್ಷೆಯಿಂದ ಬಚಾವ್ ಆಗುವುದಕ್ಕೆ ಏಕನಾಥ್ ಶಿಂಧಗೆ 37 ಶಾಸಕರ ಬೆಂಬಲದ ಅನಿವಾರ್ಯವಾಗಿರುತ್ತದೆ. ಅಂದರೆ 37 ಮಂದಿ ಶಾಸಕರು ಒಮ್ಮತವನ್ನು ವ್ಯಕ್ತಪಡಿಸಿದರೆ, ಆಗ ಎಲ್ಲಾ ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ.

ಮಹಾರಾಷ್ಟ್ರದಲ್ಲಿ ಶಾಸಕರ ನಂಬರ್ ಗೇಮ್ ಹೇಗಿದೆ?
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಯಾವ ಪಕ್ಷವು ಎಷ್ಟು ಶಾಸಕರನ್ನು ಹೊಂದಿದೆ ಎಂಬುದರ ಮೇಲೆ ಮುಂದಿನ ಲೆಕ್ಕಾಚಾರಗಳನ್ನು ಹಾಕಿಕೊಳ್ಳಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಶಿವಸೇನೆ 55, NCP 53, ಕಾಂಗ್ರೆಸ್ 44 ಶಾಸಕರನ್ನು ಹೊಂದಿದೆ. ಈ ಮೂರು ಪಕ್ಷಗಳ ಸಮ್ಮಿಶ್ರ ಸರ್ಕಾರ ಮಹಾ ವಿಕಾಸ ಅಗಾಢಿಯು ಒಟ್ಟು 152 ಶಾಸಕರ ಬಲವನ್ನು ಹೊಂದಿದೆ. ಇನ್ನೊಂದು ಮಗ್ಗಲಿನಲ್ಲಿ ಬಿಜೆಪಿಯು 106 ಶಾಸಕರನ್ನು ಹೊಂದಿದ್ದರೆ, ಇತರೆ ಸಣ್ಣ ಪಕ್ಷಗಳು ಮತ್ತು ಪಕ್ಷೇತರ ಶಾಸಕರ ಸಂಖ್ಯೆಯು 29 ಆಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications