ಅಸ್ಸಾಂನಲ್ಲಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ; 5 ಸಂಗತಿಗಳು
ಮುಂಬೈ, ಜೂನ್ 22; ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಅಸ್ಸಾಂಗೆ ಸ್ಥಳಾಂತರಗೊಂಡಿದೆ. ಶಿವಸೇನೆಯ ಪ್ರಭಾವಿ ನಾಯಕ ಏಕನಾಥ ಶಿಂಧೆ ನೇತೃತ್ವದಲ್ಲಿ ಶಾಸಕರು ಸೂರತ್ನಿಂದ ಗುವಾಹಟಿಯ ಖಾಸಗಿ ಹೋಟೆಲ್ ತಲುಪಿದ್ದಾರೆ.
Recommended Video
ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ. ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದ ವಿರುದ್ಧ ಶಾಸಕರು ಬಂಡಾಯದ ಬಾವುಟ ಹಾರಿಸಿದ್ದಾರೆ.
ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಶಾಸಕರು, 7 ಪಕ್ಷೇತರ ಶಾಸಕರು ಬಂಡಾಯ ಎದ್ದಿದ್ದಾರೆ. ಸೂರತ್ನ ಹೋಟೆಲ್ನಲ್ಲಿದ್ದ ಏಕನಾಥ ಶಿಂಧೆ ಶಿವಸೇನೆಯ 55 ಶಾಸಕರಲ್ಲಿ 40 ಶಾಸಕರ ಬೆಂಬಲ ತಮಗೆ ಇದೆ ಎಂದು ಘೋಷಣೆ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ಮುಂದುವರೆಸಿದ್ದಾರೆ. ಮಂಗಳವಾರ ಅವರು ತಮ್ಮ ನಿವಾಸದಲ್ಲಿ ಶಿವಸೇನೆ ಶಾಸಕರ ಸಭೆ ನಡೆಸಿದರು. ಸಭೆ ಬಳಿಕ ಶಾಸಕರನ್ನು ಮುಂಬೈನ ಖಾಸಗಿ ಹೋಟೆಲ್ಗೆ ಕಳಿಸಿದ್ದಾರೆ. ಈ ಮೂಲಕ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ.

ಸಂಗತಿ 01; ಬಿಜೆಪಿ ಜೊತೆ ಸರ್ಕಾರ ರಚನೆ ಮಾಡಬೇಕು
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಮೈತ್ರಿ ಸರ್ಕಾರದಲ್ಲಿ ಶಿವಸೇನೆಯಲ್ಲಿ 55 ಶಾಸಕರಿದ್ದಾರೆ. ತಮಗೆ 40 ಶಾಸಕರ ಬೆಂಬಲವಿದೆ ಎಂದು ಏಕನಾಥ ಶಿಂಧೆ ಘೋಷಣೆ ಮಾಡಿದ್ದಾರೆ. 7 ಪಕ್ಷೇತರ ಶಾಸಕರು ಸಹ ಏಕನಾಥ ಶಿಂಧೆ ಜೊತೆಗಿದ್ದಾರೆ.
ಶಿವಸೇನೆ ಬಿಜೆಪಿ ಜೊತೆ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಬೇಕು ಎಂಬುದು ಬಂಡಾಯ ಎದ್ದಿರುವ ಶಾಸಕರ ಪ್ರಮುಖ ಬೇಡಿಕೆ ಎಂಬ ಸುದ್ದಿಗಳು ಹಬ್ಬಿವೆ. ಬಿಜೆಪಿ ರಾಜ್ಯದ ಮೈತ್ರಿ ಸರ್ಕಾರ ಪತನಗೊಳಿಸಲು ಪ್ರಯತ್ನ ನಡೆಸಿದೆ ಎಂಬುದು ವಿರೋಧ ಪಕ್ಷಗಳ ಆರೋಪವಾಗಿದೆ.

ಸಂಗತಿ 02; ಬಾಳ ಸಾಹೇಬ್ ಠಾಕ್ರೆಯ ಶಿವಸೇನೆ
ಸೂರತ್ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದ ಏಕನಾಥ ಶಿಂಧೆ ಮತ್ತು ಇತರ ಶಾಸಕರು ಬುಧವಾರ ಅಸ್ಸಾಂನ ಗುವಾಹಟಿ ತಲುಪಿದರು. ಸೂರತ್ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಏಕನಾಥ ಶಿಂಧೆ, "ನಾವು ಬಾಳ ಸಾಹೇಬ್ ಠಾಕ್ರೆಯ ಶಿವಸೇನೆ ತೊರೆದಿಲ್ಲ. ಠಾಕ್ರೆಯ ಹಿಂದುತ್ವವನ್ನು ನಾವು ಪಾಲಿಸುತ್ತಿದ್ದೇವೆ. ಮುಂದೆಯೂ ಸಹ ಪಾಲಿಸುತ್ತೇವೆ" ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಮಧ್ಯಾಹ್ನ 1 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದಿನ ರಾಜಕೀಯ ನಡೆ ಬಗ್ಗೆ ಮುಖ್ಯಮಂತ್ರಿಗಳು ಸಚಿವರ ಜೊತೆ ಮಹತ್ವದ ಚರ್ಚೆ ನಡೆಸುವ ನಿರೀಕ್ಷೆ ಇದೆ.

ಸಂಗತಿ 3; ಮಂಗಳವಾರದ ಮಾತುಕತೆ ವಿಫಲ
ಮಂಗಳವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಕನಾಥ ಶಿಂಧೆ ಜೊತೆ ದೂರವಾಣಿ ಮೂಲಕ ಮಾತಕತೆ ನಡೆಸಿದರು. ತಮ್ಮ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು ಮತ್ತು ಪಕ್ಷಕ್ಕೆ ವಾಪಸ್ ಆಗಬೇಕು ಎಂದು ಮನವಿ ಮಾಡಿದರು. ಆದರೆ ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಬೇಕು ಎಂಬ ಪ್ರಸ್ತಾವನೆಯನ್ನು ಉದ್ಧವ್ ಠಾಕ್ರೆ ತಳ್ಳಿಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಸೂರತ್ನ ಹೋಟೆಲ್ನಲ್ಲಿ ಹಲವಾರು ಬಿಜೆಪಿ ನಾಯಕರು ಏಕನಾಥ ಶಿಂಧೆ ಮತ್ತು ಇತರ ಶಾಸಕರನ್ನು ಭೇಟಿಯಾಗಿದ್ದಾರೆ. ಬುಧವಾರ ಸಂಜೆಯ ವೇಳೆಗೆ ಮಹಾರಾಷ್ಟ್ರ ರಾಜಕೀಯದ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.

ಸಂಗತಿ 4; ರಾಜಕೀಯ ಹೈಡ್ರಾಮ
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರಕ್ಕೆ ಎನ್ಸಿಪಿ ಬೆಂಬಲ ನೀಡಿದೆ. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯೆ ನೀಡಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, "ಇದು ಶಿವಸೇನೆ ಪಕ್ಷದ ಆತಂರಿಕ ವಿಚಾರ" ಎಂದು ಹೇಳಿದರು. "ಶಿವಸೇನೆ ಸರ್ಕಾರಕ್ಕೆ ಬೆಂಬಲ ಕೊಡುವ ವಿಚಾರದಲ್ಲಿ ಪಕ್ಷ ಸಂಪೂರ್ಣ ಬದ್ಧವಾಗಿದೆ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂಗತಿ 5; ರಾಜಕೀಯ ಹೈಡ್ರಾಮ
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಕನಾಥ ಶಿಂಧೆ ಜೊತೆ ಮಾತುಕತೆ ನಡೆಸಿದ ಬಳಿಕ ಸೂರತ್ನ ಹೋಟೆಲ್ನಿಂದ ಗುವಾಹಟಿಗೆ ಸ್ಥಳಾಂತರಗೊಳ್ಳುವ ತೀರ್ಮಾನ ಕೈಗೊಳ್ಳಲಾಯಿತು ಎಂಬ ಮಾಹಿತಿ ಇದೆ. ಈ ಮೂಲಕ ಮಹಾರಾಷ್ಟ್ರದ ರಾಜಕೀಯ ಹೈಡ್ರಾಮ ಬಿಜೆಪಿ ಆಡಳಿತ ಇರುವ ಮತ್ತೊಂದು ರಾಜ್ಯ ಅಸ್ಸಾಂಗೆ ಸ್ಥಳಾಂತರಗೊಂಡಿದೆ.
ಏಕನಾಥ ಶಿಂಧೆ ಹೋಟೆಲ್ನಲ್ಲಿ ಶಾಸಕರ ಜೊತೆ ಸಭೆ ನಡೆಸಿ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications