ಉಳಿದ ರಾಜ್ಯಗಳೇನು ಪಾಕಿಸ್ತಾನವೇ?: ಬಿಜೆಪಿಗೆ ಶಿವಸೇನಾ ಪ್ರಶ್ನೆ
ಮುಂಬೈ, ಅಕ್ಟೋಬರ್ 24: ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆಯನ್ನು ನೀಡುವುದಾಗಿ ಬಿಜೆಪ ಭರವಸೆ ನೀಡಿರುವುದು ವಿರೋಧಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಚುನಾವಣೆ ವೇಳೆ ಬಿಜೆಪಿಯು ಕೊಳಕು ಹಾಗೂ ಕೆಳಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಶಿವಸೇನಾ, ಇತರೆ ರಾಜ್ಯಗಳೇನೂ ಪಾಕಿಸ್ತಾನವಲ್ಲ ಎಂದು ಹೇಳಿದೆ.
'ಬಿಹಾರಕ್ಕೆ ಲಸಿಕೆ ಸಿಗಬೇಕು. ಆದರೆ ನಮ್ಮ ದೇಶದ ಉಳಿದ ರಾಜ್ಯಗಳೇನೂ ಪಾಕಿಸ್ತಾನವಲ್ಲ. ಬಿಹಾರವಷ್ಟೇ ಅಲ್ಲ, ವೈರಸ್ನಿಂದ ಇಡೀ ದೇಶವೇ ಕೆಟ್ಟದಾಗಿ ಸಂಕಷ್ಟ ಅನುಭವಿಸುತ್ತಿರುವಾಗ ಕೊರೊನಾ ವೈರಸ್ ಲಸಿಕೆ ವಿಚಾರವಾಗಿ ರಾಜಕೀಯವೇಕೆ? ಲಸಿಕೆ ಪಡೆದುಕೊಳ್ಳುವ ವಿಚಾರದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕಿದೆ' ಎಂದು ಶಿವಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ಕಿಡಿಕಾರಿದೆ.
'ಕೊರೊನಾ ವೈರಸ್ ಲಸಿಕೆಯು ಅಭಿವೃದ್ಧಿಯಾದ ಬಳಿಕ ಪ್ರತಿಯೊಬ್ಬರಿಗೂ ಸಮಾನವಾಗಿ ಹಂಚಲಾಗುತ್ತದೆಯೇ ಹೊರತು ಯಾವುದೇ ಜಾತಿ, ಧರ್ಮ ಅಥವಾ ರಾಜ್ಯದ ಆಧಾರದಲ್ಲಿ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಆದರೆ ಈಗ ಚುನಾವಣೆ ಹತ್ತಿರ ಬಂದಿರುವ ಬಿಹಾರದ ಜನತೆಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಾಗಿ ಭರವಸೆ ನೀಡಿದೆ' ಎಂದು ಟೀಕಿಸಿದೆ.

'ಬಿಜೆಪಿ ಪಕ್ಷಕ್ಕೆ ಮಾರ್ಗದರ್ಶನ ನೀಡುತ್ತಿರುವವರು ಯಾರು? ಅವರ ನಾಯಕತ್ವದಲ್ಲಿ ಸಮಸ್ಯೆ ಏನಾಗಿದೆ? ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾಗಿ ಲಸಿಕೆ ನೀಡುವುದಾಗಿ ತಿಳಿಸಿದ್ದ ಬಿಜೆಪಿ ಬಿಹಾರ ಚುನಾವಣೆ ಪ್ರಣಾಳಿಕೆಯ ಘೋಷಣೆಯಲ್ಲಿ ವಿಚಿತ್ರವಾಗಿರುವುದು ಸಂಭವಿಸಿದೆ' ಎಂದು ವಾಗ್ದಾಳಿ ನಡೆಸಿದೆ.
'ದೇಶದಲ್ಲಿ 75 ಲಕ್ಷಕ್ಕೂ ಹೆಚ್ಚು ಪ್ರಕರಣಗಳಿವೆ. ಆದರೆ ಬಿಜೆಪಿ ಈಗ ಬಿಹಾರದ ಮೇಲೆ ಮಾತ್ರ ಗಮನಹರಿಸಲು ಬಯಸಿದೆ. ಈಗ ಎಲ್ಲಿಯೂ ವಿಕಾಸವಿಲ್ಲ. ನಿರುದ್ಯೋಗ, ಆಹಾರದಂತಹ ಸಮಸ್ಯೆಗಳು ತೀವ್ರಗೊಂಡಿದೆ. ಏಕೆಂದರೆ ಬಿಜೆಪಿಗೆ ಉದ್ಯೋಗ ಸೃಷ್ಟಿ ಸಾಧ್ಯವಾಗುತ್ತಿಲ್ಲ. ಹಾಗಾಗಿಯೇ ಈ ಕೊರೊನಾ ವೈರಸ್ ಭೀತಿ ಬಿತ್ತುತ್ತಿದೆ' ಎಂದು ಆರೋಪಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications