ಇದೆಂಥಾ ಲೆಕ್ಕಾಚಾರ?:ಶಿವಸೇನೆ ಬೆಂಬಲಿಸುವುದು ದ್ರೌಪದಿಯನ್ನೇ ವಿನಃ, ಬಿಜೆಪಿಯನ್ನಲ್ಲ!
ಮುಂಬೈ, ಜುಲೈ 12: ಭಾರತದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅನ್ನು ಬೆಂಬಲಿಸುವುದಕ್ಕೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಕೋರ್ ಕಮಿಟಿ ನಿರ್ಧರಿಸಿದೆ.
ನಾವು ದ್ರೌಪದಿ ಮುರ್ಮು ಅನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ ಎಂದರೆ ಇದರ ಅರ್ಥ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ಅರ್ಥವಲ್ಲ ಅಂತಾ ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಮುಂಬೈನಲ್ಲಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ ಪಕ್ಷದ ಸಂಸದರು ರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅನ್ನು ಬೆಂಬಲಿಸಲು ವಿನಂತಿಸಿದ್ದಾರೆ. ಆ ಮೂಲಕ ಬಿಜೆಪಿಯ ಜೊತೆಗಿನ ಹೊಂದಾಣಿಕೆ ಬಾಗಿಲು ತೆರೆಯುವುದಕ್ಕೆ ಅನುವು ಮಾಡಿಕೊಂಡುವಂತೆ ಮನವಿ ಮಾಡಿಕೊಂಡಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಠಾಕ್ರೆ ಬಣವೂ ಸಹ NDA ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡಲು ನಿರ್ಧರಿಸಿದೆ.

ಬಿಜೆಪಿಗೆ ಬೆಂಬಲ ನೀಡುತ್ತಿಲ್ಲ ಎಂದ ಸಂಜಯ್ ರಾವತ್
ದೇಶದಲ್ಲಿ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅನ್ನು ಬೆಂಬಲಿಸುವುದಕ್ಕೆ ಶಿವಸೇನೆಯ 16 ಸಂಸದರು ಸಲಹೆ ನೀಡಿದ್ದಾರೆ. ಶಿವಸೇನೆ ಸಂಸದರ ಸಲಹೆಯ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮುಗೆ ಬೆಂಬಲ ನೀಡುವುದಕ್ಕೆ ನಾವು ನಿರ್ಧರಿಸಿದ್ದೇವೆ. ಅಂದ ಮಾತ್ರಕ್ಕೆ ನಾವು ಬಿಜೆಪಿಗೆ ಬೆಂಬಲಿಸುತ್ತೇವೆ ಎಂದರ್ಥವಲ್ಲ ಅಂತಾ ಶಿವಸೇನೆ ಮುಖಂಡ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ.

ಶಿವಸೇನೆ ಸಂಸದರಿಗೆ ವಿಪ್ ಜಾರಿಗೊಳಿಸಿಲ್ಲ
"ದೇಶದಲ್ಲಿ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈ ಸಂಬಂಧ ಶಿವಸೇನೆಯ ಯಾವುದೇ ಸಂಸದರಿಗೆ ವಿಪ್ ಜಾರಿಗೊಳಿಸಿಲ್ಲ. ಶಿವಸೇನೆ 16 ಸಂಸದರು ಪಕ್ಷದ ನಿರ್ಧಾರದಂತೆ ತಮ್ಮ ಮತವನ್ನು ಚಲಾಯಿಸಲಿದ್ದಾರೆ," ಎಂದು ಗಜಾನನ್ ಕೀರ್ತಿಕರ್ ಹೇಳಿದ್ದಾರೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆ ಆಗಿರುವ ದ್ರೌಪದಿ ಮುರ್ಮುರಿಗೆ ಶಿವಸೇನೆಯ 16 ಸಂಸದರು ಬೆಂಬಲ ನೀಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
"ಅವರು ಎನ್ಡಿಎ ಅಭ್ಯರ್ಥಿ ಆಗಿದ್ದರೂ, ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆಯಾಗಿದ್ದು, ನಾವು ಅವರಿಗೆ ನಮ್ಮ ಬೆಂಬಲ ನೀಡಬೇಕು. ಇದು ಪಕ್ಷದ ಎಲ್ಲಾ ಸಂಸದರ ಬೇಡಿಕೆಯಾಗಿತ್ತು. ಉದ್ಧವ್ ಠಾಕ್ರೆ ತಮ್ಮ ನಿರ್ಧಾರವನ್ನು ಒಂದು ಅಥವಾ ಎರಡು ದಿನಗಳಲ್ಲಿ ನಮಗೆ ತಿಳಿಸುತ್ತಾರೆ," ಎಂದು ಕೀರ್ತಿಕರ್ ಹೇಳಿದರು.

ಉದ್ಧವ್ ಠಾಕ್ರೆ ಕರೆದ ಸಭೆಯಲ್ಲಿ 16 ಸಂಸದರು
ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆದ ಮಹತ್ವದ ಸಭೆಯಲ್ಲಿ 18 ಸಂಸದರ ಪೈಕಿ 16 ಸಂಸದರು ಹಾಜರಾಗಿದ್ದರು. ಈ ವೇಳೆ ಇಬ್ಬರು ಸಂಸದರು ಗೈರು ಹಾಜರಾಗಿದ್ದು, ಈ ಸಭೆಯಲ್ಲಿ ಹಾಜರಾದ ಎಲ್ಲಾ 16 ಸಂಸದರು ದ್ರೌಪದಿ ಮುರ್ಮುಗೆ ಬೆಂಬಲಿಸುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಮಂಗಳವಾರದ ಸಭೆಯಲ್ಲಿ ಭಾವನಾ ಗವಾಲಿ ಮತ್ತು ಶ್ರೀಕಾಂತ್ ಶಿಂಧೆ ಗೈರಾಗಿದ್ದರು.

ದೇಶದ ರಾಷ್ಟ್ರಪತಿ ಚುನಾವಣೆ
ಭಾರತದ 16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ 14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮನಾಥ್ ಕೋವಿಂದ್ ಜುಲೈ 25, 2017 ರಂದು ಅಧಿಕಾರ ವಹಿಸಿಕೊಂಡಿದ್ದು, ಅವರ ಅವಧಿಯು ಜುಲೈ 24, 2022 ರಂದು ಕೊನೆಗೊಳ್ಳುತ್ತದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications