ಮಹಾರಾಷ್ಟ್ರ: ನಿವೃತ್ತ ನೌಕಾಧಿಕಾರಿ ಮೇಲೆ ಶಿವಸೇನಾ ಕಾರ್ಯಕರ್ತರಿಂದ ಹಲ್ಲೆ
ಮುಂಬೈ, ಸೆಪ್ಟೆಂಬರ್ 11: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕುರಿತಾದ ಕಾರ್ಟೂನ್ ಒಂದನ್ನು ವಾಟ್ಸಾಪ್ನಲ್ಲಿ ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಶಿವಸೇನಾದ ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದೆ.
ಪೂರ್ವ ಕೊಂಡಿವಳಿ ಪ್ರದೇಶದಲ್ಲಿ ನಡೆದ ಈ ಘಟನೆ ಸಂಬಂಧ ಶಿವ ಸೇನಾದ ಶಾಖಾ ಪ್ರಮುಖ್ ಕಮಲೇಶ್ ಕದಂ ಮತ್ತು ಪಕ್ಷದ ಮತ್ತೊಬ್ಬ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ಉದ್ಧವ್ ಠಾಕ್ರೆ ಅವರನ್ನು ಅಣಕಿಸುವಂತಹ ಕಾರ್ಟೂನ್ ಒಂದನ್ನು ಹಂಚಿಕೊಂಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ನೌಕಾಪಡೆಯ ನಿವೃತ್ತ ಅಧಿಕಾರಿ ಮದನ್ ಶರ್ಮಾ ಸಮ್ತಾ ನಗರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ತಮಗೆ ಬಂದಿದ್ದ ವಾಟ್ಸಾಪ್ ಸಂದೇಶದಲ್ಲಿದ್ದ ಕಾರ್ಟೂನ್ ಒಂದನ್ನು 62 ವರ್ಷದ ಮದನ್ ಶರ್ಮಾ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಹಂಚಿಕೊಂಡಿದ್ದರು. ಕೆಲವು ಸಮಯದ ಬಳಿಕ ಅವರಿಗೆ ಕರೆ ಮಾಡಿದ ಕೆಲವರು ನಿಮ್ಮ ಬಳಿ ಮಾತನಾಡಬೇಕು, ಮನೆಯಿಂದ ಹೊರಬನ್ನಿ ಎಂದು ಹೇಳಿದ್ದರು. ಅದರ ಅರಿವಿಲ್ಲದ ಮದನ್ ಶರ್ಮಾ, ತಮ್ಮ ನಿವಾಸದಿಂದ ಹೊರಗೆ ಬರುತ್ತಿದ್ದಂತೆಯೇ ಶಿವಸೇನಾದ ಸುಮಾರು ಆರು ಕಾರ್ಯಕರ್ತರು ಅವರನ್ನು ಅಟ್ಟಾಡಿಸಿ ಹೊಡೆದಿದ್ದಾರೆ. ಮದನ್ ಶರ್ಮಾ ಅವರ ಕೊರಳಪಟ್ಟಿ ಹಿಡಿದೆಳೆದು ಮುಖದ ಮೇಲೆ ಬಾರಿಸುವ ದೃಶ್ಯಗಳು ಸಿಸಿಟಿವಿ ವಿಡಿಯೋದಲ್ಲಿ ದಾಖಲಾಗಿದೆ.
ಘಟನೆಯಲ್ಲಿ ಹಲ್ಲೆಗೊಳಗಾದ ಮದನ್ ಶರ್ಮಾ ಅವರನ್ನೇ ಐಟಿ ಕಾಯ್ದೆಯಡಿ ಅವಹೇಳನಾಕಾರಿ ಸಂದೇಶ ರವಾನಿಸಿದ ಆರೋಪದಡಿ ಬಂಧಿಸಲು ಪೊಲೀಸರು ಮುಂದಾಗಿದ್ದರು ಎಂದೂ ಆರೋಪಿಸಲಾಗಿದೆ.
ಈ ಘಟನೆ ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ವಿರುದ್ಧದ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
'ತೀವ್ರ ಖೇದನೀಯ ಮತ್ತು ಆಘಾತಕಾರಿ ಘಟನೆ. ನಿವೃತ್ತ ನೌಕಾಧಿಕಾರಿಯನ್ನು ವಾಟ್ಸಾಪ್ ಫಾರ್ವರ್ಡ್ ಕಾರಣಕ್ಕಾಗಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಈ ಗೂಂಡಾರಾಜ್ಅನ್ನು ದಯವಿಟ್ಟು ನಿಲ್ಲಿಸಿ ಉದ್ಧವ್ ಠಾಕ್ರೆ. ಈ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಹಾಗೂ ಶಿಕ್ಷೆಗೆ ಒತ್ತಾಯಿಸುತ್ತೇವೆ' ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಟ್ವೀಟ್ ಮಾಡಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications