ಹೈವೇಯಲ್ಲಿ ಗನ್ ಹಿಡಿದು ಬೆದರಿಸಿದ ಶಿವಸೇನಾ ಕಾರ್ಯಕರ್ತರು
ಮುಂಬೈ, ಜನವರಿ 30: ಮುಂಬೈ-ಪುಣೆ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವಾಹನವೊಂದಲ್ಲಿ ತೆರಳುತ್ತಿದ್ದ ಶಿವಸೇನಾ ಕಾರ್ಯಕರ್ತರ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಇನ್ನೊಂದು ಬದಿಯಲ್ಲಿ ತಮಗೆ ದಾರಿ ಮಾಡಿಕೊಡುವಂತೆ ಗನ್ ತೋರಿಸುವುದು ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ವಿರೋಧಪಕ್ಷಗಳಿಗೆ ಅಸ್ತ್ರವಾಗಿ ದೊರಕಿದೆ.
ವೈರಲ್ ಆದ ವಿಡಿಯೋದ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಪ್ಪಿತಸ್ಥರನ್ನು ಗುರುತಿಸಲಾಗಿದ್ದು, ಅವರನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
'ಇದು ಮಹಾರಾಷ್ಟ್ರದ ಪುಣೆ-ಮುಂಬೈ ಎಕ್ಸ್ಪ್ರೆಸ್ ವೇದಲ್ಲಿನ ವಿಡಿಯೋ. ಆ ವಾಹನದಲ್ಲಿರುವ ಚಿಹ್ನೆಯೇ ಎಲ್ಲವನ್ನೂ ಹೇಳುತ್ತದೆ. ಶಿವಸೈನಿಕರು ಶುಕ್ರವಾರ ರಾತ್ರಿ ತಮ್ಮ ವಾಹನಕ್ಕೆ ದಾರಿ ಮಾಡಿಸಿಕೊಳ್ಳಲು ರಿವಾಲ್ವರ್ಗಳನ್ನು ತೋರಿಸಿದ್ದಾರೆ. ಗೃಹ ಸಚಿವರು ಅಥವಾ ಪೊಲೀಸರು ಈ ಕಾನೂನು ವಿರೋಧಿ ಕೃತ್ಯವನ್ನು ಗಮನಿಸುತ್ತಾರೆಯೇ?' ಎಂದು ಔರಂಗಾಬಾದ್ನ ಎಐಎಂಐಎಂ ಸಂಸದ ಇಮ್ತಿಯಾಜ್ ಜಲೀಲ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಕೂಡ ಶಿವಸೇನಾ ವಿರುದ್ಧ ಕಿಡಿಕಾರಲು ಈ ಅವಕಾಶವನ್ನು ಬಳಸಿಕೊಂಡಿದೆ. 'ರಾಜ್ಯದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಇಲ್ಲ. ಸೇನಾದ ಕಾರ್ಯಕರ್ತರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡಿರುವುದು ಕಾಣಿಸುತ್ತದೆ ಎಂದು ಬಿಜೆಪಿ ನಾಯಕ ರಾಮ್ ಕದಂ ಟೀಕಿಸಿದ್ದಾರೆ.
महाराष्ट्र में देखे #शिवसेना के लोग मुंबई पुणे हाय वे रोड पर शुक्रवार देर रात हाथ में रिव्हॉल्वर लेकर लोगों को धमकाते हुए किस प्रकार से कानून व्यवस्था की धजीया उडा रहे है. अतीत में भीदेखा है , शिवसेना के लोग किस तरह से फौज के लोगो के घर पर जाकर पिटाई कर रहे है . महाराष्ट्र के pic.twitter.com/igK4U9xSMa
— Ram Kadam - राम कदम (@ramkadam) January 30, 2021
'ಸಾಧುಗಳಿರಲಿ, ಸೈನಿಕರಿರಲಿ. ರಾಜ್ಯದಲ್ಲಿ ಯಾರೂ ಸುರಕ್ಷಿತರಾಗಿಲ್ಲ. ಹೈವೇಯಲ್ಲಿ ಈಗ ಸೇನಾ ಕಾರ್ಯಕರ್ತರು ಗನ್ ಹಿಡಿದು ಜನರನ್ನು ಬೆದರಿಸುತ್ತಿದ್ದಾರೆ. ಈ ಸರ್ಕಾರ ಪ್ರಗತಿಪರ ಅಲ್ಲ, ಆದರೆ ಗೂಂಡಾಗಳ ಪಡೆಯಾಗಿದೆ' ಎಂದು ರಾಮ್ ಕದಂ ವಾಗ್ದಾಳಿ ನಡೆಸಿದ್ದಾರೆ. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಲು ಶಿವಸೇನಾ ನಾಯಕರು ನಿರಾಕರಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications