Breaking; ಶಿವಸೇನೆ ನಾಯಕ ಸಂಜಯ್ ರಾವತ್ 4 ದಿನ ಇಡಿ ವಶಕ್ಕೆ
ಮುಂಬೈ, ಆಗಸ್ಟ್ 01; ಶಿವಸೇನೆ ನಾಯಕ ಸಂಜಯ್ ರಾವತ್ರನ್ನು 4 ದಿನಗಳ ಕಾಲ ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಭಾನುವಾರ ಸಂಜಯ್ ರಾವತ್ ನಿವಾಸದ ಮೇಲೆ ಇಡಿ ದಾಳಿ ನಡೆದಿತ್ತು, ಬಳಿಕ ಅವರನ್ನು ಬಂಧಿಸಲಾಗಿತ್ತು.
ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಂಬೈ ಕೋರ್ಟ್ಗೆ ಸಂಜಯ್ ರಾವತ್ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಕೋರ್ಟ್ ಆಗಸ್ಟ್ 4ರ ತನಕ ಇಡಿ ವಶಕ್ಕೆ ನೀಡಿದೆ.
ಪಾತ್ರಾ ಚಾವ್ಲ್ ಹಗರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ರನ್ನು ಇಡಿ ವಿಚಾರಣೆ ನಡೆಸುತ್ತಿದೆ. ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದಾಗ ಸಂಜಯ್ ರಾವತ್ ಹಾಜರಾಗಿರಲಿಲ್ಲ. ಆದ್ದರಿಂದ ಭಾನುವಾರ ಇಡಿ ಅವರ ಮುಂಬೈ ನಿವಾಸದ ಮೇಲೆ ದಾಳಿ ಮಾಡಿತ್ತು.

ಮುಂಬೈ ಕೋರ್ಟ್ನಲ್ಲಿ ಸಂಜಯ್ ರಾವತ್ ಪರ ವಕೀಲ ಅಶೋಕ ಮುಂಡರಗಿ ವಾದ ಮಂಡಿಸಿದರು, "ಸಂಜಯ್ ರಾವತ್ ಬಂಧನ ರಾಜಕೀಯ ಪ್ರೇರಿತ. ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಅವರ ಬಳಲುತ್ತಿದ್ದಾರೆ" ಎಂದರು.
"ಸಂಜಯ್ ರಾವತ್ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿದೆ. ಇದರ ಕುರಿತ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿದೆ" ಎಂದು ವಾದ ಮಂಡಿಸಿದರು. ಆದರೆ ಇಡಿ ವಾದವನ್ನು ಒಪ್ಪಿದ ಕೋರ್ಟ್ 4 ದಿನಗಳ ಕಾಲ ಸಂಜಯ್ ರಾವತ್ರನ್ನು ಇಡಿ ವಶಕ್ಕೆ ನೀಡಿದೆ.
ಇಡಿ ಅಧಿಕಾರಿಗಳು ಸೋಮವಾರ ಬೆಳಗ್ಗೆ ಸಂಜಯ್ ರಾವತ್ರನ್ನು ಜೆಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿದರು. ಸಂಜಯ್ ರಾವತ್ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ 11.50 ಲಕ್ಷ ರೂ. ಹಣ ಸಿಕ್ಕಿದೆ ಎಂಬ ವರದಿಗಳಿವೆ.
ಜೂನ್ 28ರಂದು ಸಂಜಯ್ ರಾವತ್ಗೆ ಇಡಿ ವಿಚಾರಣೆಗೆ ಆಗಮಿಸುವಂತೆ ಸಮನ್ಸ್ ನೀಡಲಾಗಿತ್ತು. ಪಾತ್ರಾ ಚಾವ್ಲ್ ಹಗರಣದಲ್ಲಿ 1034 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪವಿದ್ದು, ಇಡಿ ಈ ಕುರಿತು ತನಿಖೆ ಮಾಡುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications