ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯೇಟು ಕೊಡ್ಬೇಕೆನಿಸಿದೆ : ಉದ್ಧವ್ ಠಾಕ್ರೆ
ಮುಂಬೈ, ಮೇ 27: ಛತ್ರಪತಿ ಶಿವಾಜಿ ಮಹಾರಾಜ್ ಅವರ ಚಿತ್ರಕ್ಕೆ ಮಾಲಾರ್ಪಣೆ ಮಾಡುವ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಾದರಕ್ಷೆ ತೊಟ್ಟು ಅವಮಾನ ಮಾಡಿದ್ದಾರೆ. ಆದಿತ್ಯನಾಥ್ ಗೆ ಚಪ್ಪಲಿಯೇಟು ಕೊಡಬೇಕಿನಿಸುತ್ತದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಶಿವಸೇನಾದ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಉದ್ಧವ್, ಆತ ಯೋಗಿಯಲ್ಲ, ಭೋಗಿ ಎಂದು ಜರೆದಿದ್ದಾರೆ. ಮಹಾರಾಷ್ಟ್ರದ ಪಲ್ಘರ್ ಲೋಕಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದರು. ಭಾರತೀಯ ಜನತಾ ಪಕ್ಷ(ಬಿಜೆಪಿ) ಹಾಗೂ ಶಿವಸೇನಾ ನಡುವೆ ಮಹಾರಾಷ್ಟ್ರದಲ್ಲಿ ಮೈತ್ರಿ ಇದ್ದೂ ಇಲ್ಲದ್ದಂತಾಗಿರುವ ಪರಿಸ್ಥಿತಿಯಲ್ಲಿ ಯೋಗಿ ಅವರ ಭೇಟಿ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಪ್ರಮಾದವನ್ನು ಉಲ್ಲೇಖಿಸಿ, ಟೀಕಿಸಲಾಗಿದೆ.

ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಶಿವಸೇನಾ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಜಿದ್ದಾಜಿದ್ದಿಯ ಹೋರಾಟ ನಿರೀಕ್ಷಿಸಲಾಗಿದೆ.
ಉದ್ಧವ್ ಠಾಕ್ರೆ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಯೋಗಿ, ಆತನಿಗೆ ಸತ್ಯ ಗೊತ್ತಿಲ್ಲ, ನಾನು ಉದ್ಧವ್ ಠಾಕ್ರೆಯಿಂದ ಸಂಸ್ಕಾರ ಕಲಿಯಬೇಕಾಗಿಲ್ಲ, ನಾನು ಆತನಿಗಿಂತ ಸಂಸ್ಕಾರವಂತ, ಗೌರವ ಸಲ್ಲಿಸುವುದು ಹೇಗೆ ಎಂಬುದನ್ನು ಅವರಿಂದ ಅರಿಯಬೇಕಿಲ್ಲ ಎಂದಿದ್ದಾರೆ.
ಮೇ 28ರಂದು ನಡೆಯಲಿರುವ ಚುನಾವಣೆಗಾಗಿ ಪ್ರಚಾರ ನಡೆಸುವ ವೇಳೆಯಲ್ಲಿ ಉದ್ಧವ್, "ತಮ್ಮದೇ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಗೆಲ್ಲಲಾರದವರನ್ನು ಇಲ್ಲಿಗೆ ಕರೆಸಿ ಪ್ರಚಾರ ಮಾಡಿಸುತ್ತಾರೆ," ಎಂದು ಬಿಜೆಪಿಯನ್ನು ಅಪಹಾಸ್ಯ ಮಾಡಿದರು. ಪೂಜ್ಯ ಸ್ಥಳಗಳಲ್ಲಿ ಚಪ್ಪಲಿ ತೆಗೆದು ಹೋಗುವುದು ಹಿಂದೂಗಳ ಸಂಪ್ರದಾಯ. ಆದರೆ, ಯೋಗಿ ದುರಹಂಕಾರದಿಂದ ವರ್ತಿಸಿದ್ದಾರೆ. ಮರಾಠ ಚಕ್ರವರ್ತಿಗೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications