ಹಳೆದೋಸ್ತಿ - ಹೊಸಮೈತ್ರಿ; ಬಿಜೆಪಿ ಸಭೆಯಲ್ಲಿ ಇವರೆಲ್ಲ ಕಾಣಿಸಿಕೊಂಡಿದ್ದಾರೆ; ಅಲ್ಲಿಗೆ ಮುಗಿಯಿತಾ ಕಥೆ?
ಮುಂಬೈ, ನವೆಂಬರ್.06: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯೇ ಬಿಕ್ಕಟ್ಟಿಗೆ ಸಿಲುಕಿದೆ. ಇದರ ಮಧ್ಯೆ ಅಚ್ಚರಿಯ ರಾಜಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದ ಸಭೆಯಲ್ಲಿ ಶಿವಸೇನೆ ನಾಯಕರು ಕಾಣಿಸಿಕೊಂಡಿದ್ದು, ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಎಡೆ ಮಾಡಿಕೊಟ್ಟಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಕೈ ಜೋಡಿಸಲು ಶಿವಸೇನೆ ಹಿಂದು-ಮುಂದು ನೋಡುತ್ತಿದೆ. ಸರ್ಕಾರ ರಚನೆಗೆ 50-50 ಷರತ್ತು ವಿಧಿಸಿದೆ. ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಇದು ಒಪ್ಪಲಾಗದ ಅಂಶವಾಗಿದ್ದು, ಮೈತ್ರಿ ಸರ್ಕಾರ ರಚಿಸಬೇಕೋ ಬೇಡವೋ ಎಂಬುದೇ ಗೊಂದಲವಾಗಿದೆ. ಇದರ ಮಧ್ಯೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದ ಸಭೆಯಲ್ಲಿ ಏಕನಾಥ್ ಶಿಂಧೆ, ರಾಮದಾಸ್ ಕದಮ್ ಸೇರಿದಂತೆ ಆರು ಮಂದಿ ಶಿವಸೇನೆಯ ಶಾಸಕರು ಕಾಣಿಸಿಕೊಂಡಿದ್ದಾರೆ.
ಕೃಷಿ ವಲಯದ ಬಿಕ್ಕಟ್ಟು ನಿವಾರಣೆಗೆ ಸಂಬಂಧಿಸಿದಂತೆ ಚರ್ಚಿಸಲು ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಶಿವಸೇನೆ ನಾಯಕ ರಾಮ ಏಕನಾಥ್ ಶಿಂಧೆ ಸೇರಿದಂತೆ ಆರು ಮಂದಿ ಶಿವಸೇನೆ ಶಾಸಕರು ಭಾಗಿಯಾಗಿದ್ದರು. ನಂತರ ಶಿವಸೇನೆ ನಾಯಕ ರಾಮದಾಸ್ ಕದಮ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದರು. ಇಂದಿನ ಸಭೆಯಲ್ಲಿ ರಾಜ್ಯದ ರೈತರ ಸಮಸ್ಯೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಶಿವಸೇನೆ ಪಕ್ಷದ ಪ್ರತಿನಿಧಿಯಾಗಿ ನಾನು ಭಾಗಿಯಾಗಿದ್ದೆ. ಮುಂದೆ ರೈತರ ಸಮಸ್ಯೆ ಬಂದಾಗ ಶಿವಸೇನೆ ನಾಯಕರು ದೂರ ಉಳಿದರು ಎಂದು ಯಾರೂ ಬೊಟ್ಟು ಮಾಡಿ ತೋರಿಸಬಾರದು. ಹೀಗಾಗಿ ಇಂದಿನ ಸಭೆಯಲ್ಲಿ ನಾನು ಹಾಜರಾಗಿದ್ದೆ. ಇದರಲ್ಲಿ ಯಾವುದೇ ರಾಜಕೀಯ ವಿಚಾರಗಳ ಚರ್ಚೆ ಆಗಲಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಒಂದು ಎಕರೆಗೆ 25 ಸಾವಿರ ರೂಪಾಯಿ ಬೆಳೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಈಗಾಗ್ಲೆ ರಾಜ್ಯ ಸರ್ಕಾರ ನೆರೆ ಹಾವಳಿಗೆ ಹಾಳಾದ ಬೆಳೆಗೆ ಪರಿಹಾರವಾಗಿ 10 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ.
ಕಳೆದ ಬಾನುವಾರವಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ನೆರೆ ಹಾವಳಿಗೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅಕೋಲಾ ಜಿಲ್ಲೆಯ ಲಖನವಾಡ, ಚಿಕ್ಕಲ್ಗಾವ್, ಮೈಸ್ ಪುರ್ ಸೇರಿದಂತೆ ಹಲವು ಗ್ರಾಮಗಳಲ್ಲಿ ದೇವೇಂದ್ರ ಫಡ್ನವೀಸ್ ಪರಿಶೀಲನೆ ನಡೆಸಿದ್ದರು. ಮಳೆ ಆರ್ಭಟಕ್ಕೆ ಬೆಳೆದ ಬೆಳೆಯಲ್ಲ ಹಾಳಾಗಿದ್ದು, ಸರ್ಕಾರದಿಂದ ರೈತರಿಗೆ ನೆರವು ನೀಡುವ ಭರವಸೆಯನ್ನು ನೀಡಿದ್ದರು. ಜೊತೆಗೆ ಆದಷ್ಟು ಬೇಗ ವಿಮೆ ಕಂಪನಿಗಳಿಂದ ರೈತರಿಗೆ ಪರಿಹಾರ ಕೊಡಿಸುವುದಾಗಿ ಫಡ್ನವೀಸ್ ತಿಳಿಸಿದ್ದರು. ಅದರಂತೆ ಇಂದು ಸಭೆ ನಡೆಸಿ ಪರಿಹಾರ ಘೋಷಣೆ ಕುರಿತದಂತೆ ನಾಯಕರ ಜೊತೆ ಚರ್ಚೆ ನಡೆಸಲಾಯಿತು. ಆದರೆ, ಇದರ ಮಧ್ಯೆ ಶಿವಸೇನೆ ನಾಯಕರು ಸಭೆಗೆ ಹಾಜರಾಗಿದ್ದೇ ಹೈಲೇಟ್ ಆಗಿ ಕಂಡು ಬಂತು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications