ಶಿವಸೇನಾ-ಎನ್ಸಿಪಿ ಭೇಟಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ
ಮುಂಬೈ, ಮೇ 26: ಕೊರೊನಾ ವೈರಸ್ ನಿಯಂತ್ರಿಸುವ ವಿಚಾರದಲ್ಲಿ ಮಹಾರಾಷ್ಟ್ರ ನಿಯಂತ್ರಣ ತಪ್ಪಿದೆ. ಪರಿಸ್ಥಿತಿಯನ್ನು ಠಾಕ್ರೆ ಸರ್ಕಾರ ಸರಿಯಾಗಿ ನಿಭಾಯಿಸುತ್ತಿಲ್ಲ. ಬಹುಶಃ ಮಹಾ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಬಹುದು ಎಂಬ ಮಾತುಗಳು ಕೇಳಿಬರುತ್ತಿದೆ.
Recommended Video
ಆದರೆ, ಮಹಾರಾಷ್ಟ್ರದಲ್ಲಿ ಯಾವ ಕಾರಣಕ್ಕೂ ರಾಷ್ಟ್ರಪತಿ ಆಡಳಿತ ಬರುವ ಸಾಧ್ಯತೆಯೇ ಇಲ್ಲ. ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ. ಸುಭದ್ರವಾಗಿ ಸರ್ಕಾರ ಪೂರ್ಣಾವಧಿ ಮುಗಿಸಲಿದೆ ಎಂದು ಶಿವಸೇನಾ ಹಿರಿಯ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ನಿನ್ನೆಯಷ್ಟೆ ಮಹಾರಾಷ್ಟ್ರ ಸಿಎಂ ಮತ್ತು ಎನ್ಸಿಪಿ ಪಕ್ಷದ ಅಧ್ಯಕ್ಷ ಶರದ್ ಪವರ್ ಹಾಗೂ ಶಿವಸೇನಾ ಹಿರಿಯ ನಾಯಕ ಸಂಜಯ್ ರಾವತ್ ಭೇಟಿ ಮಾಡಿ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಸುಮಾರು ಒಂದೂವರೆ ಗಂಟೆಗೂ ಅಧಿಕ ಸಮಯ ಮಾತುಕತೆ ನಡೆದಿದ್ದು, ಈ ವೇಳೆ ರಾಷ್ಟ್ರಪತಿ ಆಡಳಿತ ಬಗ್ಗೆ ಯಾವ ಚರ್ಚೆಯೂ ಆಗಿಲ್ಲ ಎಂದು ಸಂಜಯ್ ರಾವತ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಜೊತೆಯೂ ನಾವು ಸಂಪರ್ಕದಲ್ಲಿದ್ದೇವೆ. ನಿತಿನ್ ಗಡ್ಕರಿ ಹಾಗೂ ಅಮಿತ್ ಶಾ ಅವರಿಂದಲೂ ಈ ಬಗ್ಗೆ ಮಾತುಕತೆ ಆಗಿಲ್ಲ. ಆದರೂ ಇಂತಹ ಸುದ್ದಿಗಳು ಹೇಗೆ ಹರಿದಾಡುತ್ತಿದೆ ಎಂದು ಸಂಜಯ್ ರಾವತ್ ಪ್ರಶ್ನಿಸಿದ್ದರು.
ಕಾಂಗ್ರೆಸ್, ಶಿವಸೇನಾ ಮತ್ತು ಎನ್ಸಿಪಿ ಪಕ್ಷಗಳು ಸೇರಿ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ರಚಿಸಿದೆ. ಸಿಎಂ ಉದ್ಧವ್ ಠಾಕ್ರೆ ಇತ್ತೀಚಿಗಷ್ಟೆ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications