ಅಯ್ಯಯ್ಯೋ, ಮಮತಾರನ್ನೇ ಮರೆತರಾ ಶಿವಸೇನೆ ನಾಯಕರು?
ಮುಂಬೈ, ನವೆಂಬರ್.28: ಮಹಾರಾಷ್ಟ್ರದಲ್ಲಿ ನಡೆದ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪಟ್ಟಾಭಿಷೇಕ ಕಾರ್ಯಕ್ರಮ ಅದ್ಧೂರಿಯಾಗಿ ಏನೋ ನಡೆಯಿತು. ಶಿವಸೇನೆ ಆಚರಿಸಿದ ಹಬ್ಬದಲ್ಲಿ ಘಟಾನುಘಟಿ ನಾಯಕರೇ ಭಾಗವಹಿಸಿದ್ದರು. ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿದರೂ ಒಬ್ಬ ಆಪ್ತರನ್ನೇ ಶಿವಸೇನೆ ಮರೆತು ಬಿಟ್ಟಿದೆ.
ಹೌದು, ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಪ್ತ ನಾಯಕಿಯನ್ನೇ ಶಿವಸೇನೆ ಆಹ್ವಾನಿಸಿರಲಿಲ್ಲವಂತೆ. ಇದನ್ನು ಸ್ವತಃ ಆ ಪಕ್ಷದ ಸದಸ್ಯರೇ ಹೇಳಿಕೊಂಡಿದ್ದಾರೆ. ನಮ್ಮ ಪಕ್ಷದ ಮುಖ್ಯಸ್ಥರನ್ನು ಆಹ್ವಾನಿಸಿದ್ದರೆ ಖಂಡಿತವಾಗಿಯೂ ಅವರು ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಆದರೆ, ಆ ಕಡೆಯಿಂದ ಯಾವುದೇ ಆಹ್ವಾನ ಬಂದಿರಲಿಲ್ಲ ಎಂದು ಹೇಳಿದ್ದಾರೆ.
ಅಷ್ಟಕ್ಕೂ ಶಿವಸೇನೆ ಮರೆತಿದ್ದು ಯಾವುದೋ ಸಣ್ಣ ಪಾರ್ಟಿ ಮುಖಂಡರನ್ನು ಅಲ್ಲವೇ ಅಲ್ಲ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲಕ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು. ಹೌದು, ಈ ಬಗ್ಗೆ ಟಿಎಂಸಿಯ ರಾಜ್ಯಸಭಾ ಮುಖಂಡ ದೇರೆಕ್ ಒಬ್ರಿಯನ್ ಹೇಳಿಕೆ ನೀಡಿದ್ದಾರೆ.

ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ನವೆಂಬರ್.28ರಂದು ನಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆಹ್ವಾನ ನೀಡಿರಲಿಲ್ಲ ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ದೇರೆಕ್ ಒಬ್ರಿಯನ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟ್ ಬ್ಯಾನ್ ನೀತಿ ವಿರೋಧಿಸುವಲ್ಲಿ ಶಿವಸೇನೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬೆಂಬಲ ಸೂಚಿಸಿದ್ದರು. ಸಾಕಷ್ಟು ವಿಷಯಗಳಲ್ಲಿ ಶಿವಸೇನೆ ಜೊತೆಗೆ ದೀದಿ ಉತ್ತಮ ಬಾಂಧವ್ಯ ಹೊಂದಿದ್ದರು. ಅಲ್ಲದೇ, ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಮಮತಾ ಬ್ಯಾನರ್ಜಿ ಟ್ವಿಟರ್ ನಲ್ಲಿ ಶುಭಾಷಯವನ್ನು ಸಹ ಕೋರಿದ್ದಾರೆ ಎಂದು ಓಬ್ರಿಯನ್ ಹೇಳಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications