ಲೈಂಗಿಕ ಕಿರುಕುಳ, ಜನಪ್ರಿಯ ಕಿರುತೆರೆ ನಟ ಬಂಧನ
ಮುಂಬೈ ಜುಲೈ 16: ಗ್ರಾಮೀಣ ಭಾಗದ ದಾಸ್ಯ, ಜೀತದಾಳುಗಳ ಕರುಣಾಜನಕ ಕಥೆ ಹೇಳುವ 'ಉಡಾನ್' ಧಾರಾವಾಹಿಯ ಜನಪ್ರಿಯ ನಟ ಕಮಲ್ ನಾರಾಯಣ್ ರಾಜವಂಶಿ ಬಂಧನವಾಗಿದೆ. ರಾಜವಂಶಿ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರೆಸಿ ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕಮಲ್ ನಾರಾಯಣ್ ರಾಜವಂಶಿ ಅಲಿಯಾಸ್ ಸಾಯಿ ಬಲ್ಲಾಳ್ ಅವರು ತಮ್ಮ ಧಾರಾವಾಹಿಯಲ್ಲಿ ನಟಿಸುವ ಸಹ ನಟಿ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಿಂದ ಈ ದುಷ್ಕೃತ್ಯವನ್ನು ಎಗ್ಗಿಲ್ಲದೆ ನಡೆಸಿಕೊಂಡ ಆರೋಪವನ್ನು ರಾಜವಂಶಿ ಮೇಲೆ ಹೊರೆಸಲಾಗಿದೆ.
ಬಂಧಿತ ರಾಜವಂಶಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354 ಎ, 354 ಬಿ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಕಾಯಿದೆ ಸೆಕ್ಷನ್ 67- ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮುಂಬೈ ಮಿರರ್ ವರದಿ ಮಾಡಿದೆ.

ಸಹನಟಿಗೆ ನಿರಂತರವಾಗಿ ಅಶ್ಲೀಲ ಸಂದೇಶ, ಚಿತ್ರ, ವಿಡಿಯೋಗಳನ್ನು ಕಳಿಸುತ್ತಿದ್ದ ರಾಜವಂಶಿ, ಆಕೆಯನ್ನು ದೈಹಿಕವಾಗಿ ಹಿಂಸಿಸಿದ ಆರೋಪ ಹೊತ್ತಿದ್ದಾರೆ. ಧಾರಾವಾಹಿಯ ಪ್ರೊಡಕ್ಷನ್ ಹೌಸ್ ಮುಖ್ಯಸ್ಥರಿಗೆ ಈ ಬಗ್ಗೆ ಆ ನಟಿ ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ದೂರು ನೀಡಿದ ತಪ್ಪಿಗೆ ಆಕೆಯನ್ನು ಧಾರಾವಾಹಿಯಿಂದಲೇ ಹೊರಕ್ಕೆ ಹಾಕಲಾಯಿತು.
ಸಿನಿ ಅಂಡ್ ಟಿವಿ ಕಲಾವಿದರ ಅಸೋಸಿಯೇಷನ್ (CINTAA) ದೂರು ನೀಡಿದ ಮೇಲೆ ಪ್ರಕರಣ ಪೊಲೀಸರ ತನಕ ಮುಟ್ಟಿತು. ಇಲ್ಲದಿದ್ದರೆ, ವಿಷಯ ಬೆಳಕಿಗೆ ಬರುತ್ತಿರಲಿಲ್ಲ. ಬೋರಿವಿಲಿ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡರು.
ಬಲ್ಲಾಳ್ ಕಳಿಸಿದ ಸಂದೇಶ ಹಾಗೂ ವಿಡಿಯೋಗಳನ್ನು ಸಾಕ್ಷಿಯಾಗಿ ಪರಿಗಣಿಸಿ ಆತನ ಮೇಲೆ ಮೇಲ್ಕಂಡ ಐಪಿಸಿ ಸೆಕ್ಷನ್ ಹಾಗೂ ಐಟಿ ಕಾಯ್ದೆ ನಿಯಮಗಳಂತೆ ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ಹಾಕಿದ್ದಲ್ಲದೆ ತಕ್ಷಣವೇ ರಾಜವಂಶಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications