ಲೈಂಗಿಕ ಕಿರುಕುಳ, ಜನಪ್ರಿಯ ಕಿರುತೆರೆ ನಟ ಬಂಧನ
ಮುಂಬೈ ಜುಲೈ 16: ಗ್ರಾಮೀಣ ಭಾಗದ ದಾಸ್ಯ, ಜೀತದಾಳುಗಳ ಕರುಣಾಜನಕ ಕಥೆ ಹೇಳುವ 'ಉಡಾನ್' ಧಾರಾವಾಹಿಯ ಜನಪ್ರಿಯ ನಟ ಕಮಲ್ ನಾರಾಯಣ್ ರಾಜವಂಶಿ ಬಂಧನವಾಗಿದೆ. ರಾಜವಂಶಿ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರೆಸಿ ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕಮಲ್ ನಾರಾಯಣ್ ರಾಜವಂಶಿ ಅಲಿಯಾಸ್ ಸಾಯಿ ಬಲ್ಲಾಳ್ ಅವರು ತಮ್ಮ ಧಾರಾವಾಹಿಯಲ್ಲಿ ನಟಿಸುವ ಸಹ ನಟಿ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಿಂದ ಈ ದುಷ್ಕೃತ್ಯವನ್ನು ಎಗ್ಗಿಲ್ಲದೆ ನಡೆಸಿಕೊಂಡ ಆರೋಪವನ್ನು ರಾಜವಂಶಿ ಮೇಲೆ ಹೊರೆಸಲಾಗಿದೆ.
ಬಂಧಿತ ರಾಜವಂಶಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354 ಎ, 354 ಬಿ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಕಾಯಿದೆ ಸೆಕ್ಷನ್ 67- ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮುಂಬೈ ಮಿರರ್ ವರದಿ ಮಾಡಿದೆ.

ಸಹನಟಿಗೆ ನಿರಂತರವಾಗಿ ಅಶ್ಲೀಲ ಸಂದೇಶ, ಚಿತ್ರ, ವಿಡಿಯೋಗಳನ್ನು ಕಳಿಸುತ್ತಿದ್ದ ರಾಜವಂಶಿ, ಆಕೆಯನ್ನು ದೈಹಿಕವಾಗಿ ಹಿಂಸಿಸಿದ ಆರೋಪ ಹೊತ್ತಿದ್ದಾರೆ. ಧಾರಾವಾಹಿಯ ಪ್ರೊಡಕ್ಷನ್ ಹೌಸ್ ಮುಖ್ಯಸ್ಥರಿಗೆ ಈ ಬಗ್ಗೆ ಆ ನಟಿ ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ದೂರು ನೀಡಿದ ತಪ್ಪಿಗೆ ಆಕೆಯನ್ನು ಧಾರಾವಾಹಿಯಿಂದಲೇ ಹೊರಕ್ಕೆ ಹಾಕಲಾಯಿತು.
ಸಿನಿ ಅಂಡ್ ಟಿವಿ ಕಲಾವಿದರ ಅಸೋಸಿಯೇಷನ್ (CINTAA) ದೂರು ನೀಡಿದ ಮೇಲೆ ಪ್ರಕರಣ ಪೊಲೀಸರ ತನಕ ಮುಟ್ಟಿತು. ಇಲ್ಲದಿದ್ದರೆ, ವಿಷಯ ಬೆಳಕಿಗೆ ಬರುತ್ತಿರಲಿಲ್ಲ. ಬೋರಿವಿಲಿ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡರು.
ಬಲ್ಲಾಳ್ ಕಳಿಸಿದ ಸಂದೇಶ ಹಾಗೂ ವಿಡಿಯೋಗಳನ್ನು ಸಾಕ್ಷಿಯಾಗಿ ಪರಿಗಣಿಸಿ ಆತನ ಮೇಲೆ ಮೇಲ್ಕಂಡ ಐಪಿಸಿ ಸೆಕ್ಷನ್ ಹಾಗೂ ಐಟಿ ಕಾಯ್ದೆ ನಿಯಮಗಳಂತೆ ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ಹಾಕಿದ್ದಲ್ಲದೆ ತಕ್ಷಣವೇ ರಾಜವಂಶಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications