ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೊಳ್ ಬಂಧನ
ಮುಂಬೈ, ಸೆ. 18: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿನಯದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ನಿರ್ಮಿಸಿ, ಹೊಸ ಇತಿಹಾಸ ಸೃಷ್ಟಿಸಿದ ಆನಂದ್ ಅಪ್ಪುಗೋಳ್ ಅವರು ಈಗ ಪೊಲೀಸರ ಅತಿಥಿ.
ಆನಂದ್ ಅವರು ವ್ಯವಸ್ಥಾಪಕ ನಿರ್ದೇಶಕರಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆಯಲ್ಲಿ ಹಣ ತೊಡಗಿಸಿರುವ ಗ್ರಾಹಕರು ಹಣ ವಾಪಸ್ ಮಾಡುವಂತೆ ದುಂಬಾಲು ಬಿದ್ದು, ಪ್ರತಿಭಟನೆ ನಡೆಸಿದ ಸುದ್ದಿ ಈ ಮುಂಚೆ ಓದಿರುತ್ತೀರಿ.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಬೆಳಗಾವಿಯಿಂದ ನಾಪತ್ತೆಯಾಗಿದ್ದ ಆನಂದ್ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಸೋಮವಾರದಂದು ಬಂಧಿಸಿ, ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.
ಸರಿ ಸುಮಾರು 300 ಕೋಟಿ ರು ಮೊತ್ತವನ್ನು ಹಿಂತಿರುಗಿಸಲಾಗದೆ ಆನಂದ್ ಪರದಾಡುತ್ತಿದ್ದಾರೆ. 'ಅಪನಗದೀಕರಣದ ನಂತರ ಆಸ್ತಿ ಮಾರಲು ಸಾಧ್ಯವಾಗಿಲ್ಲ. ಎಲ್ಲವನ್ನು ವೈಟ್ ನಲ್ಲೆ ತೋರಿಸಬೇಕಂತೆ, ಅದರಿಂದ ನನಗೆ ನಷ್ಟವಾಗಿದೆ. ಎರಡರಿಂದ ಮೂರು ತಿಂಗಳಲ್ಲಿ ಗ್ರಾಹಕರಿಗೆ ಹಣ ಸಂದಾಯ ಮಾಡುತ್ತೇನೆ. ಗ್ರಾಹಕರು ಯಾರೂ ಧೃತಿಗೆಡಬೇಕಾಗಿಲ್ಲ' ಎಂದು ಆನಂದ್ ಭರವಸೆ ನೀಡಿದ್ದರು. ಆದರೆ, ಅನಂದ್ ಸೇರಿದಂತೆ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿತ್ತು.
ದರ್ಶನ್ ಅಭಿನಯದ ರಾಜ್ಯ ಪ್ರಶಸ್ತಿ ವಿಜೇತ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಚಿತ್ರದ ನಿರ್ಮಾಪಕರಾದ ಆನಂದ್ ಅವರ ಈ ಸಹಕಾರಿ ಬ್ಯಾಂಕ್ 15ಕ್ಕೂ ಅಧಿಕ ವರ್ಷಗಳಿಂದ 40ಕ್ಕೂ ಅಧಿಕ ಬ್ರ್ಯಾಂಚ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಕೆಲ ತಿಂಗಳುಗಳಿಂದ ಬ್ಯಾಂಕ್ ತನ್ನ ವಹಿವಾಟು ಸ್ಥಗಿತಗೊಳಿಸಲಾಗಿದ್ದು, ಹಣವನ್ನು ಆನಂದ್ ಅವರು ಬೇರೆ ವ್ಯವಹಾರಕ್ಕೆ ಬಳಸಿರುವ ಬಗ್ಗೆ ಮಾಹಿತಿ ಬಹಿರಂಗವಾದ ಹಿನ್ನಲೆಯಲ್ಲಿ ಗ್ರಾಹಕರ ಆತಂಕಕ್ಕೆ ಒಳಗಾಗಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications