ಸಿಂಧುರತ್ನ ದುರಂತ: ಇಬ್ಬರು ಅಧಿಕಾರಿಗಳ ಶವ ಪತ್ತೆ
ಮುಂಬೈ, ಫೆ.27: ಐಎನ್ಎಸ್ ಸಿಂಧುರಕ್ಷಕ್ ಜಲಾಂತರ್ಗಾಮಿ ಅವಘಡದ ಬೆನ್ನಲ್ಲೇ ಇಲ್ಲಿನ ಕರಾವಳಿ ಜಲಾಂತರ್ಗಾಮಿ ಐಎನ್ಎಸ್ ಸಿಂಧುರತ್ನ ಬುಧವಾರ ದುರಂತಕ್ಕೀಡಾಗಿತ್ತು. ಈ ದುರ್ಘಟನೆಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ನೌಕಾಪಡೆ ಅಧಿಕಾರಿಗಳ ಶವ ಗುರುವಾರ ಪತ್ತೆಯಾಗಿದೆ. ಈ ಘಟನೆಯಲ್ಲಿ ಗಾಯಗೊಂಡಿರುವ ಏಳು ಅಧಿಕಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಭಾರತೀಯ ನೌಕಾಪಡೆಗೆ ಸೇರಿರುವ ಸಿಂಧುರತ್ನದಲ್ಲಿ ಸಂಭವಿಸಿದ ದುರಂತದ ಹೊಣೆ ಹೊತ್ತ ಅಡ್ಮಿರಲ್ ಡಿಕೆ ಜೋಶಿ ಅವರು ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಭಾರತೀಯ ಜಲಸೇನೆಯ ಇನ್ನಷ್ಟು ಹಿರಿಯ ಅಧಿಕಾರಿಗಳು ಹುದ್ದೆ ತೊರೆಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
''ಬ್ಯಾಟರಿ ಭಾಗದಲ್ಲಿ ದಟ್ಟ ಹೊಗೆ ಕಾಣಿಸಿತು. ಇದರಿಂದಾಗಿ ಐವರು ನೌಕಾ ಸಿಬ್ಬಂದಿ ಉಸಿರಾಟ ತೊಂದರೆಯಿಂದ ಬಳಲಿದರು. ಪ್ರಜ್ಞೆ ಕಳೆದುಕೊಂಡು ಅಸ್ವಸ್ಥರಾಗಿದ್ದ ಸಿಬ್ಬಂದಿಯನ್ನು ಮುಂಬಯಿನ ನೌಕಾ ಆಸ್ಪತ್ರೆ ಐಎನ್ ಎಸ್ ಅಶ್ವಿನಿಗೆ ದಾಖಲಿಸಲಾಗಿದೆ,'' ಎಂದು ನೌಕಾಪಡೆ ತಂಡದ ಸದಸ್ಯರು ಹೇಳಿದ್ದಾರೆ.

ಭಾರತೀಯ ನೌಕಾಪಡೆಗೆ ಸಂಬಂಧಿಸಿದಂತೆ ಇದು 10ನೇ ದುರಂತವಾಗಿದೆ. ಕಳೆದ ಏಳು ತಿಂಗಳ ಅವದಿಯಲ್ಲಿ ಅವಘಡಕ್ಕೀಡಾಗುತ್ತಿರುವ ಮೂರನೇ ಜಲಾಂತರ್ಗಾಮಿ ಇದಾಗಿದೆ. ಮುಂಬಯಿ ಬಂದರು ಸಮೀಪದ ಜಲಾಂತರ್ಗಾಮಿಯ ದಕ್ಷತಾ ಪರೀಕ್ಷೆ ವೇಳೆ ಅವಘಡ ಸಂಭವಿಸಿದೆ. ಇದರಿಂದಾಗಿ ಜಲಾಂತರ್ಗಾಮಿ ಗುಣಮಟ್ಟ ಮತ್ತು ಸುಧಾರಣೆ ಪ್ರಕ್ರಿಯೆಯನ್ನು ಪ್ರಶ್ನಿಸುವಂತಾಗಿದೆ.
ನೌಕಾಪಡೆಯ ಪಶ್ಚಿಮ ಕಮಾಂಡ್ನಲ್ಲಿ ಪದೇಪದೆ ಸಂಭವಿಸುತ್ತಿರುವ ದುರಂತಗಳಿಂದ ನೌಕಾಪಡೆಗೆ ಕಳವಳ ತಂದಿವೆ. ಭಾರತದ ಜಲಾಂತರ್ಗಾಮಿಗಳು ಪದೇಪದೆ ತೊಡಕಿಗೆ ಒಳಗಾಗುತ್ತಿದ್ದು, ಅವುಗಳ ಗುಣಮಟ್ಟ ಮತ್ತು ಸುರಕ್ಷತೆಯ ಆತಂಕ ತಲೆದೋರಿದೆ. ಇತ್ತ ಚೀನಾ ಬಳಿ 45 ಜಲಾಂತರ್ಗಾಮಿಗಳಿದ್ದು, ಇನ್ನೂ 15 ಜಲಾಂತರ್ಗಾಮಿಗಳನ್ನು ಹೊಂದಲು ಪ್ರಯತ್ನ ನಡೆಸಿದೆ.
ಐಎನ್ ಎಸ್ ಸಿಂಧುರತ್ನ: ರಷ್ಯಾ ಮೂಲದ ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿಯಾದ ಸಿಂಧುರತ್ನದ ತೂಕ ಸುಮಾರು 3 ಸಾವಿರ ಟನ್. 238 ಅಡಿ ಉದ್ದದ ಇದರ ವೇಗ ನೀರಿನಾಳದಲ್ಲಿ ಗಂಟೆಗೆ 31 ಕಿ.ಮೀ. ದುರಂತ ಸಂಭವಿಸಿದಾಗ ಮುಂಬೈ ಬಂದರಿನಿಂದ 100 ನಾಟಿಕಲ್ ಮೈಲಿಗಳನ್ನು ದಾಟಿತ್ತು ಎಂದು ತಿಳಿದು ಬಂದಿದೆ. ಘಟನೆಯಿಂದ ನಾಪತ್ತೆಯಾಗಿದ್ದ ಡೆಪ್ಯುಟಿ ಎಲೆಕ್ಟ್ರಿಕಲ್ ಅಧಿಕಾರಿ(ಲೆಪ್ಟಿನೆಂಟ್ ಕಮಾಂಡರ್), ನಿಗಾ ಅಧಿಕಾರಿ(ಲೆಪ್ಟಿನೆಂಟ್) ಅವರ ಶವ ಪತ್ತೆಯಾಗಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications