ಸೋನು ನಿಗಮ್ ಗೆ ಉಗ್ರರಿಂದ ಜೀವ ಬೆದರಿಕೆ
ಮುಂಬೈ, ಫೆಬ್ರವರಿ 05: ಬಾಲಿವುಡ್ಡಿನ ಜನಪ್ರಿಯ ಗಾಯಕ ಸೋನು ನಿಗಮ್ ಅವರಿಗೆ ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ ಬಂದಿದೆ. ಗಾಯಕ ಸೋನು ನಿಗಮ್ ಹಾಗೂ ಇಬ್ಬರು ಬಿಜೆಪಿ ನಾಯಕರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಮುಂಬೈ ಪೊಲೀಸರು ಸೋಮವಾರ ಪ್ರಕಟಿಸಿದ್ದಾರೆ.
ಕೆಲ ಮೂಲಭೂತವಾದಿ ಸಂಘಟನೆಗಳು ಸೋನು ಹತ್ಯೆಗೆ ಸಂಚು ರೂಪಿಸಿವೆ, ಹೀಗಾಗಿ, ಹೆಚ್ಚಿನ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಮಹಾರಾಷ್ಟ್ರದ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.

ಹೀಗಾಗಿ ಸೋನು ನಿಗಮ್ ಹಾಗೂ ಮಹಾರಾಷ್ಟ್ರ ಬಿಜೆಪಿಯ ಫೈರ್ ಬ್ರಾಂಡ್ ಶಾಸಕರಾದ ರಾಮ್ ಕದಂ ಹಾಗೂ ಆಶೀಶ್ ಶೆಲಾರ್ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.
ಮುಸ್ಲಿಮರ ಅಜಾನ್ ಪ್ರಾರ್ಥನೆಯಿಂದ ಬೆಳಗ್ಗೆ ನಿದ್ದೆ ಹಾಳಾಗುತ್ತಿದೆ ಎಂದು ಈ ಹಿಂದೆ ಸೋನು ನಿಗಮ್ ಟ್ವೀಟ್ ಮಾಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದರ ಪರ ವಿರೋಧ ಚರ್ಚೆಗಳು ನಡೆದಿತ್ತು. ಇದಲ್ಲದೆ, ರಾಷ್ಟ್ರಗೀತೆ ಬಗ್ಗೆ ಸೋನು ನೀಡಿದ್ದ ಹೇಳಿಕೆ ಕೂಡಾ ಹಲವರ ಕಣ್ಣು ಕೆಂಪಗೆ ಮಾಡಿತ್ತು.
'ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ನಾನು ಮುಸ್ಲಿಂ ಅಲ್ಲ, ನಾನ್ಯಾಕೆ ಆಜಾನ್ ಗೆ ಎಚ್ಚರಗೊಳ್ಳಲಿ?' ಈ ಒತ್ತಾಯ ಪೂರ್ವಕ ಮತ ಪದ್ಧತಿ ಭಾರತದಲ್ಲಿ ಕೊನೆಗೊಳ್ಳಲಿದೆ. ಎಂದು ಸೋನು ನಿಗಂ ಟ್ವೀಟ್ ಮಾಡಿದ್ದರು.
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications