ತುರ್ತು ಪರಿಸ್ಥಿತಿಗಿಂತ ಕೆಟ್ಟ ಸ್ಥಿತಿ ಮೋದಿ ಆಡಳಿತದಲ್ಲಿದೆ: ಶೌರಿ
ಮುಂಬೈ, ನವೆಂಬರ್ 19: ಇಂದಿರಾ ಗಾಂಧಿ ಸಮಯದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಗಿಂತ ಅಪಾಯಕಾರಿ ಸ್ಥಿತಿಯಲ್ಲಿ ಮೋದಿ ಆಡಳಿತದಲ್ಲಿ ಇದೆ ಎಂದು ಬಿಜೆಪಿ ಮಾಜಿ ಸಚಿವ ಅರುಣ್ ಶೌರಿ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ಟಾಟಾ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಹೇರಿದ ಬಗ್ಗೆ ಇಂದಿರಾ ಗಾಂಧಿ ಅವರಿಗೆ ಪಶ್ಚಾತಾಪವಿತ್ತು. ಆದರೆ ಈಗಿನ ಪರಿಸ್ಥಿತಿ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಅವರು ಹೇಳಿದರು.
ಇಂದಿರಾ ಗಾಂಧಿ ಅವರಿಗೂ ಮೋದಿ ಅವರಿಗೂ ಬಹಳ ಅಂತರ ಇದೆ. ಇಂದಿರಾ ಗಾಂಧಿ 1.75 ಲಕ್ಷ ಜನರನ್ನು ಜೈಲಿಗೆ ಅಟ್ಟಿದ್ದರೂ ಸಹ ಅವರಿಗೆ ತಮ್ಮ ಮಿತಿಯ ಅರಿವಿತ್ತು, ಪಶ್ಚಾತಾಪವೂ ಇತ್ತು. ಆದರೆ ಮೋದಿಗೆ ಅದ್ಯಾವುದೂ ಇಲ್ಲ ಎಂದು ಅವರು ಹೇಳಿದರು.

2014ರಲ್ಲಿ ಮೋದಿ ಅವರ ಪರ ಭಾರಿ ಅಲೆ ಇದ್ದರೂ ಸಹ ಅವರು ಗಳಿಸಿದ್ದು 31% ಮತಗಳಷ್ಟೆ. ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಗಟ್ಟಿಯಾದರೆ ಬಿಜೆಪಿ ಸೋಲು ಖಚಿತ ಎಂದು ಶೌರಿ ಹೇಳಿದರು.
ವಿರೋಧ ಪಕ್ಷಗಳು ಒಂದಾದರೆ 2019 ರ ಚುನಾವಣೆಯಲ್ಲಿ ಮೋದಿ ಅವರನ್ನು ತಡೆಯಬಹುದು. ಪ್ರತಿ ಬಿಜೆಪಿ ಅಭ್ಯರ್ಥಿಯ ಎದುರು ಒಬ್ಬ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತಂತ್ರ ಅನುಸರಿಸಬೇಕು ಎಂದು ಅವರು ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications