ಡಿಸೆಂಬರ್ 11ರವರೆಗೆ ತೃಪ್ತಿ ದೇಸಾಯಿಗೆ ಶಿರಡಿ ಪ್ರವೇಶ ನಿರ್ಬಂಧ
ಶಿರಡಿ, ಡಿಸೆಂಬರ್ 09: ಡಿಸೆಂಬರ್ 11ರವರೆಗೆ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿಗೆ ಶಿರಡಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಭಕ್ತರಿಗೆ ಸಾಂಪ್ರದಾಯಿಕ ಉಡುಪು ಧರಿಸುವಂತೆ ಕೋರಿ ದೇವಾಲಯದ ಅಧಿಕಾರಿಗಳು ಹಾಕಿದ ಬೋರ್ಡ್ಗಳನ್ನು ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರಿಗೆ ಡಿಸೆಂಬರ್ 11 ರವರೆಗೆ ಶಿರಡಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ, ದೇಸಾಯಿ ಅವರಿಗೆ ಮಂಗಳವಾರ ಸಿಆರ್ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಡಿಸೆಂಬರ್ 11 ರವರೆಗೆ ಶಿರಡಿ ಪುರಸಭೆಯ ವ್ಯಾಪ್ತಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಶಿಂಧೆ ಹೇಳಿದರು.

ಕಾನೂನು ಸುವ್ಯವಸ್ಥೆ ಸ್ಥಿತಿಯನ್ನು ಉಲ್ಲೇಖಿಸಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗೋವಿಂದ್ ಶಿಂಧೆ ದೇಸಾಯಿ ಅವರಿಗೆ ನೋಟಿಸ್ ನೀಡಿದ್ದು, ಡಿಸೆಂಬರ್ 8 ಮಧ್ಯರಾತ್ರಿಯಿಂದ ಡಿಸೆಂಬರ್ 11 ಮಧ್ಯರಾತ್ರಿಯವರೆಗೆ.ಅಹ್ಮದ್ನಗರ ಜಿಲ್ಲೆಯಲ್ಲಿರುವ ಶಿರಡಿಗೆ ಪ್ರವೇಶಿಸದಂತೆ ಹೇಳಲಾಗಿದೆ.
ಆಕ್ಷೇಪಾರ್ಹ ಉಡುಪು ಧರಿಸಿಕೆಲವರು ದೇಗುಲಕ್ಕೆ ಬರುತ್ತಾರೆ ಎಂಬ ದೂರುಗಳ ಹಿನ್ನೆಲೆ ಟ್ರಸ್ಟ್ ದೇವಾಲಯದ ಆವರಣದ ಹೊರಗೆ ಬೋರ್ಡ್ಗಳನ್ನು ಹಾಕಿದ್ದು ಭಕ್ತರನ್ನು ಸುಸಂಸ್ಕೃತ ರೀತಿಯಲ್ಲಿ ಅಥವಾ ಭಾರತೀಯ ಸಂಸ್ಕೃತಿಯ ಪ್ರಕಾರ ಉಡುಪು ಧರಿಸಿ ಬನ್ನಿ ಎಂದು ಮನವಿ ಮಾಡಿತು. ಆದಾಗ್ಯೂ, ಟ್ರಸ್ಟ್ನ ಹಿರಿಯ ಅಧಿಕಾರಿಯೊಬ್ಬರು ತಾವು ಯಾವುದೇ ಡ್ರೆಸ್ ಕೋಡ್ ಅನ್ನು ಭಕ್ತರಿಗೆ ವಿಧಿಸಿಲ್ಲ ಅಲ್ಲದೆ ಹಾಕಿರುವ ಸಂದೇಶವು ಕೇವಲ ಮನವಿಯಾಗಿದೆ ಎಂದು ಸ್ಪಷ್ಟಪಡಿಸಿದರು.
ಭಕ್ತರಿಗೆ ಸಾಂಪ್ರದಾಯುಕ ರೀತಿಯಲ್ಲಿ ಉಡುಗೆ ತೊಟ್ಟು ಬರುವಂತೆ ಮನವಿ ಮಾಡಿರುವ ಬಗ್ಗೆ ಶಿರಡಿ ಸಾಯಿಬಾಬಾ ಟೆಂಪಲ್ ಟ್ರಸ್ಟ್ಗೆ ಎಚ್ಚರಿಕೆ ನೀಡಿರುವ ತೃಪ್ತಿ ದೇಸಾಯಿ ವಿವಾದಾತ್ಮಕ ಸಂದೇಶವನ್ನು ಹೊತ್ತ ಬೋರ್ಡ್ಗಳನ್ನು ತೆಗೆದುಹಾಕದಿದ್ದರೆ ಡಿಸೆಂಬರ್ 10 ರಂದು ತಾನು ಹಾಗೂ ಇತರ ಕಾರ್ಯಕರ್ತರು ಶಿರಡಿಗೆ ಬಂದು ಅದನ್ನು ತೆರವು ಮಾಡುವುದಾಗಿ ಹೇಳಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications