ದೆಹಲಿಯಲ್ಲಿ ಯುಪಿಎಯನ್ನು ಬಲಿಷ್ಠಗೊಳಿಸಬೇಕು: ಸಂಜಯ್ ರಾವತ್
ಮುಂಬೈ, ಮಾರ್ಚ್ 26: ದೆಹಲಿಯಲ್ಲಿ ಯುಪಿಎಯನ್ನು ಬಲಿಷ್ಠಗೊಳಿಸಬೇಕು, ಆಗ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ತೃತೀಯ, ನಾಲ್ಕನೇ ಅಥವಾ ಐದನೇ ರಂಗ ರಚಿಸುವ ನಾಟಕಗಳು ಇಲ್ಲಿಯವರೆಗೆ ವಿಫಲವಾಗಿದೆ, ಹೀಗಾಗಿ ಈಗಿರುವ ಯುಪಿಎ ಮೈತ್ರಿಕೂಟವನ್ನು ಬಲಪಡಿಸಬೇಕು ಎಂದಿದ್ದಾರೆ.
ದೆಹಲಿಯಲ್ಲಿರುವ ಕೆಲವರು ಯುಪಿಎ-2 ರಚಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾನು ಕಾಳಜಿಯಿಂದ ಈ ಮಾತುಗಳನ್ನು ಹೇಳುತ್ತಿದ್ದೇನೆ. ಯುಪಿಎ-1ನ್ನು ಬಲಪಡಿಸಬೇಕಿದೆ ಎಂದು ಯಾರ ಹೆಸರನ್ನೂ ಹೇಳದೆ ಸೂಚ್ಯವಾಗಿ ಹೇಳಿದ್ದಾರೆ.

ಯುಪಿಎ-2 ರಚನೆಯಾದರೆ ಈಗಿರುವ ಯುಪಿಎ ಮೈತ್ರಿಕೂಟ ತನ್ನ ಪ್ರಾಮುಖ್ಯತೆಯನ್ನು ಕಳೆದುಕೊಳ್ಳಲಿದೆ. ವಿರೋಧ ಪಕ್ಷಗಳಿಗೆ ಏನೂ ಇಲ್ಲದಂತಾಗುತ್ತದೆ ಎಂದು ರಾವತ್ ಕಳವಳ ವ್ಯಕ್ತಪಡಿಸಿದ್ದಾರೆ.
ಯುನೈಟೆಡ್ ಪ್ರೊಗ್ರೆಸಿವ್ ಅಲೈಯನ್ಸ್(ಯುಪಿಎ) ನ್ನು ಎನ್ ಸಿಪಿ ನಾಯಕ ಶರದ್ ಪವಾರ್ ಮುನ್ನಡೆಸಬೇಕು ಎಂದಿದ್ದಾರೆ. ನಿನ್ನೆ ಕೂಡ ಸಂಜಯ್ ರಾವತ್ ಕಾಂಗ್ರೆಸ್ ಬದಲಿಗೆ ಎನ್ ಸಿಪಿ ಯುಪಿಎಯನ್ನು ಮುನ್ನಡೆಸಬೇಕೆಂದು ಹೇಳಿದ್ದರು.
ಮಾರ್ಚ್ 25 ರಂದು ರಾವತ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರ ಕಾಂಗ್ರೆಸ್, ಶಿವಸೇನೆ ಯುಪಿಎ ಭಾಗವಾಗಿಲ್ಲದಿರುವುದರಿಂದ ಸಂಜಯ್ ರಾವತ್ ಅವರು ಇಂತಹ ಹೇಳಿಕೆ ನೀಡದಂತೆ ಒತ್ತಾಯಿಸಿದೆ.
ಶರದ್ ಪವಾರ್ ಅವರ ವಕ್ತಾರರೇ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಕೇಳಿದ್ದು, ಅದಕ್ಕೆ ಸಂಜಯ್ ರಾವತ್, ಆಗಿರಬಹುದು, ಶರದ್ ಪವಾರ್ ಅವರು ದೇಶದ ನಾಯಕರು. ಉದ್ಧವ್ ಠಾಕ್ರೆ ಏನು, ಶರದ್ ಪವಾರ್ ಅವರು ಏನು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಶಿವಸೇನೆ ಪ್ರತಿಕ್ರಿಯೆ ನೀಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications