ಠಾಕ್ರೆ ಮುಖದಲ್ಲಿ ನಗು, ರಾವತ್ ಥಮ್ಸ್ ಅಪ್! ನಾಳೆಯೇ ಮಹಾ ಸರ್ಕಾರ?
ಮುಂಬೈ, ನವೆಂಬರ್ 22: ಗುರುವಾರ ರಾತ್ರಿ ಮುಂಬೈಯಲ್ಲಿರುವ ಶರದ್ ಪವಾರ್ ನಿವಾಸ 'ಸಿಲ್ವರ್ ಓಕ್' ಎದುರು ಕುತೂಹಲದಿಂದ ನೆರೆದಿದ್ದ ಪತ್ರಕರ್ತರಿಗೆ ಸಿಕ್ಕಿದ್ದು ಉದ್ಧವ್ ಠಾಕ್ರೆ ಅವರ ನಗು, ಸಂಜಯ್ ರಾವತ್ ಅವರ ಥಮ್ಸ್ ಅಪ್!
ಮಹಾರಾಷ್ಟ್ರ ರಾಜಕೀಯದಲ್ಲಿ ಮುಂದೇನು ಎಂಬ ಪ್ರಶ್ನೆಯನ್ನು ಹಿಡಿದು ಹೋಗಿದ್ದ ಪತ್ರಕರ್ತರಿಗೆ ಇಬ್ಬರು ನಾಯಕರ ಈ 'ಗೆಸ್ಚರ್' ನಲ್ಲೇ ಉತ್ತರವೂ ಇತ್ತು! ಆದರೆ ಅದನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು ಎಂಬುದು ತಿಳಿಯಲಿಲ್ಲವಷ್ಟೆ!
ಗುರುವಾರ ರಾತ್ರಿ ಪವಾರ್ ಅವರ 'ಸಿಲ್ವರ್ ಓಕ್' ನಲ್ಲಿ ಶಿವಸೇನೆ ಮುಖಮಡರಾದ ಉದ್ಧವ್ ಠಾಕ್ರೆ, ಪುತ್ರ ಆದಿತ್ಯ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಎನ್ ಸಿಪಿ ಮುಖಂಡರಾದ ಶರದ್ ಪವಾರ್, ಅವರ ಪುತ್ರಿ ಸುಪ್ರಿಯಾ ಸುಳೆ, ಅಳಿಯ ಅಜಿತ್ ಪವಾರ್ ಅವರೊಂದಿಗೆ ನಡೆಸಿದ ಸಭೆಯ ಬಳಿಕ ಒಂದು ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ನಡುವೆ ನಡೆದ ಮಾತುಕತೆಗೆ ಸಂಬಂಧಿಸಿದಂತೆ ಶರದ್ ಪವಾರ್ ಶಿವಸೇನೆ ಬಳಿ ಚರ್ಚೆ ನಡೆಸಿದ್ದು, ಉದ್ಧವ್ ಠಾಕ್ರೆ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಎನ್ ಸಿಪಿ ಎಂದಿಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿರಲಿಲ್ಲ ಎಂದೂ ಅವರು ಹೇಳಿದ್ದಾರೆ ಎನ್ನಲಾಗಿದೆ.
ಆದರೆ ಸಭೆಯ ನಡೆದ ಮಾತುಕತೆಯ ಬಗ್ಗೆ ಯಾವ ನಾಯಕರೂ ನಿಖರ ಮಾಹಿತಿ ನೀಡಿಲ್ಲ. ಆದರೆ ಶಿವಸೇನೆ ಮತ್ತು ಎನ್ ಸಿಪಿ ಮೂಲಗಳು ಮಾತ್ರ ಸರ್ಕಾರ ರಚನೆಯ ಕುರಿತು ಅಂತಿಮ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದಿವೆ. ಎಲ್ಲವೂ ಅಂದುಕೊಂಡಂತೇ ಆದರೆ ಶನಿವಾರ ಎನ್ ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದು ಸರ್ಕಾರ ರಚನೆಯಾಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications