ಸರ್ಕಾರ ಉರುಳಿಸಲು ದಂಗೆಗೆ ಸಂಚು: ಸ್ಟಾನ್ ಸ್ವಾಮಿಗೆ ಜಾಮೀನು ನಿರಾಕರಣೆ
ಮುಂಬೈ, ಮಾರ್ಚ್ 23: ಎಲ್ಗರ್ ಪರಿಷದ್- ಮಾವೊವಾದಿ ನಂಟಿನ ಪ್ರಕರಣದಲ್ಲಿ 83 ವರ್ಷದ ಹೋರಾಟಗಾರ ಸ್ಟಾನ್ ಸ್ವಾಮಿಗೆ ವಿಶೇಷ ಎನ್ಐಎ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ದೇಶದಲ್ಲಿ ಗಲಭೆ ಸೃಷ್ಟಿಸಲು ಮತ್ತು ಸರ್ಕಾರವನ್ನು ಉರುಳಿಸಲು ನಿಷೇಧಿತ ಮಾವೊವಾದಿ ಸಂಘಟನೆಯ ಸದಸ್ಯರ ಜತೆಗೆ ಸ್ಟಾನ್ ಸ್ವಾಮಿ ಗಂಭೀರ ಸಂಚಿನಲ್ಲಿ ತೊಡಗಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಕೋರ್ಟ್ ಹೇಳಿದೆ.
ವಿಶೇಷ ನ್ಯಾಯಾಧೀಶ ಡಿಇ ಕೊಥಾಲಿಕರ್ ಅವರು ಸ್ಟಾನ್ ಸ್ವಾಮಿಯ ಜಾಮೀನು ಅರ್ಜಿಯನ್ನು ಸೋಮವಾರ ವಜಾಗೊಳಿಸಿದರು. ದಾಖಲೆಗಳ ಪ್ರಕಾರ ಸ್ಟಾನ್ ಸ್ವಾಮಿ ನಿಷೇಧಿತ ಮಾವೋವಾದಿ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಅವರು ತೀರ್ಪಿನಲ್ಲಿ ಹೇಳಿದರು.
'ಸ್ಟಾನ್ ಸ್ವಾಮಿ ಮತ್ತು ಅವರ ಸಹ ಆರೋಪಿಗಳ ನಡುವೆ 140 ಇ-ಮೇಲ್ಗಳು ರವಾನೆಯಾಗಿವೆ. ಸ್ವಾಮಿ ಹಾಗೂ ಇತರರು ತಮ್ಮ ಸಂವಹನದಲ್ಲಿ 'ಕಾಮ್ರೇಡ್' ಎಂದು ಉಲ್ಲೇಖಿಸಿದ್ದಾರೆ. ಮಾವೋವಾದಿ ಚಟುವಟಿಕೆಗಳನ್ನು ಮುಂದುವರಿಸಿದ್ದಕ್ಕಾಗಿ ಸ್ವಾಮಿಗೆ 'ಕಾಮ್ರೇಡ್ ಮೋಹನ್' ಕಡೆಯಿಂದ ಎಂಟು ಲಕ್ಷ ರೂಪಾಯಿ ಸಂದಾಯವಾಗಿದೆ ಎಂದು ಎನ್ಐಎ ವರದಿಯಲ್ಲಿ ತಿಳಿಸಿದೆ.

'ಅರ್ಜಿದಾರ ಹಾಗೂ ನಿಷೇಧಿತ ಸಂಘಟನೆಯ ಇತರೆ ಸದಸ್ಯರು ತೋಳ್ಬಲವನ್ನು ಬಳಸಿಕೊಂಡು ರಾಜಕಿಯವಾಗಿ ಸರ್ಕಾರವನ್ನು ಉರುಳಿಸಲು ಹಾಗೂ ಇಡೀ ದೇಶಾದ್ಯಂತ ಉದ್ವಿಗ್ನತೆ ಸೃಷ್ಟಿಸಲು ಗಂಭೀರ ಸಂಚು ರೂಪಿಸಿದ್ದರು ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ' ಎಂದು ನ್ಯಾಯಾಧೀಶರು ಹೇಳಿದರು.
ಸ್ಟಾನ್ ಸ್ವಾಮಿಯನ್ನು 2020ರ ಅಕ್ಟೋಬರ್ನಲ್ಲಿ ಬಂಧಿಸಲಾಗಿತ್ತು. ಅಂದಿನಿಂದಲೂ ಅವರು ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications