ಸಹನಟಿಯನ್ನು ರೇಪ್ ಮಾಡಿ ಪರಾರಿಯಾದ ಟಿವಿ ನಟ
ಮುಂಬೈ, ನ.25: ಸಹನಟಿಯನ್ನು ಅತ್ಯಾಚಾರ ಮಾಡಿ ಕಿರುತೆರೆ ನಟನೊಬ್ಬ ಪರಾರಿಯಾಗಿರುವ ಘಟನೆ ನಡೆದಿದೆ. ಎಂಟಿವಿಯ ಜನಪ್ರಿಯ ರಿಯಾಲಿಟಿ ಶೋ splitsvilla 8ನೇ ಆವೃತ್ತಿಯಲ್ಲಿದ್ದ ನಟ ಯಶ್ ಪಂಡಿತ್ ಅವರು ಲವ್ ಸೆಕ್ಸ್ ದೋಖಾ ಪ್ರಕರಣದಲ್ಲಿ ಸಿಕ್ಕಿದ್ದಾರೆ.
ಸ್ಪ್ಲಿಟ್ಸ್ ವಿಲ್ಲಾ 8ನೇ ಸೀಸನ್ ನ ಸ್ಪರ್ಧಿಯಾಗಿದ್ದ ಯಶ್ ಪಂಡಿತ್ ಅವರು ಸಹನಟಿಯೊಬ್ಬರ ಮೇಲೆ ಮೋಹಗೊಂಡಿದ್ದಾನೆ. ಆಕೆಯೊಡನೆ ಸ್ನೇಹ ಬೆಳೆಸಿಕೊಂಡು ಮಂಚಕ್ಕೆ ಎಳೆದಿದ್ದಾನೆ. ಬಲವಂತವಾಗಿ ಹಲವು ಬಾರಿ ಬಲಾತ್ಕಾರ ಮಾಡಿದ್ದಾನೆ. ಪ್ರೇಮಿಸುವಾಗ ನೀಡಿದ್ದ ಭರವಸೆಯಂತೆ ಮದುವೆಯಾಗು ಎಂದರೆ ಪರಾರಿಯಾಗಿದ್ದಾನೆ. ನಾಪತ್ತೆಯಾದ ನಟನ ಸುಳಿವು ಪತ್ತೆ ಹಚ್ಚಲು ಮುಂಬೈ ಪೊಲೀಸರು ಮುರ್ನಾಲ್ಕು ತಂಡವನ್ನು ರಚಿಸಿದ್ದಾರೆ.

ಸೆಪ್ಟೆಂಬರ್ 2015ರಲ್ಲಿ ಆಕೆಯನ್ನು ಭೇಟಿ ಮಾಡಿ ಗೆಳೆತನ ಬೆಳೆಸಿಕೊಂಡ ಯಶ್ ನಂತರ ತನ್ನ ಜುಹು ಅಪಾರ್ಟ್ಮೆಂಟ್ ಗೆ ಆಕೆಯನ್ನು ಕರೆದಿದ್ದಾನೆ. ಆಕೆ ಬರಲು ಒಪ್ಪದಿದ್ದಾಗ, ನನ್ನ ಪೋಷಕರೊಡನೆ ಮದುವೆ ವಿಷಯ ಮಾತನಾಡುವಿಯಂತೆ ಬಾ ಎಂದಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹಲವು ಬಾರಿ ಅತ್ಯಾಚಾರ ಎಸಗಿರುವುದು ತಿಳಿದು ಬಂದಿದೆ.
ಈ ಘಟನೆ ಬಳಿಕ ಮದುವೆ ಬಗ್ಗೆ ಮಾತೆತ್ತಿದ್ದರೆ ದೂರ ಓಡುತ್ತಿದ್ದ ಯಶ್ ಈಗ ತಲೆಮರೆಸಿಕೊಂಡಿದ್ದಾನೆ. ಯಶ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
'ಕ್ಯೂಂಕಿ ಸಾಸ್ ಭಿ ಕಭಿ ಬಹೂ ಥಿ' ಧಾರಾವಾಹಿಯಲ್ಲಿ ಲಕ್ಷ್ಯ ವಿರಾಣಿ ಪಾತ್ರದಲ್ಲಿ ಯಶ್ ಪಂಡಿತ್ ಮಿಂಚಿದ್ದನ್ನು ಇಲ್ಲಿ ಸ್ಮರಿಸಬಹುದು. (ಒನ್ ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications