ಸ್ಟಾರ್ ಇಂಡಿಯಾ ಮಾಜಿ ಸಿಇಒ ಪತ್ನಿ ಕೊಲೆ ಕೇಸಲ್ಲಿ ಬಂಧನ
ಮುಂಬೈ, ಆಗಸ್ಟ್ 25: ಸ್ಟಾರ್ ಇಂಡಿಯಾ ಚಾನೆಲ್ ನ ಮಾಜಿ ಸಿಇಒ ಪೀಟರ್ ಮುಖರ್ಜಿ ಅವರ ಪತ್ನಿ ಇಂದ್ರಾಣಿ ಮುಖರ್ಜಿಯಾ ಅವರನ್ನು 2012ರ ಕೊಲೆ ಕೇಸಲ್ಲಿ ಬಂಧಿಸಲಾಗಿದೆ. ಇಂದ್ರಾಣಿ ಅವರನ್ನು ತಮ್ಮ ಸೋದರಿಯನ್ನು ಕೊಂದ ಆರೋಪದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಖಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಡಿಸಿಪಿ ಧನಂಜಯ್ ಕುಲಕರ್ಣಿ ಹೇಳಿದ್ದಾರೆ.
2012ರಲ್ಲಿ ಇಂದ್ರಾಣಿ ಸಹೋದರಿ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಾಣಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆ.31ರವರೆಗೆ ಪೊಲೀಸ್ ವಶಕ್ಕೊಪ್ಪಿಸಿ ಆದೇಶ ಹೊರಡಿಸಿದೆ ಎಂದು ಕುಲಕರ್ಣಿ ಹೇಳಿದರು.

2012ರಲ್ಲಿ ಇಂದ್ರಾಣಿ ಅವರ ಸಹೋದರಿ ಶೀನಾ ಬೋರಾ ಕೊಲೆಯಾಗಿತ್ತು. ಅದರೆ, ಕೊಲೆಗಾರರ ಸುಳಿವು ಇನ್ನೂ ಸಿಕ್ಕಿಲ್ಲ. ಮಹಾರಾಷ್ಟ್ರದ ರಾಯಗಢದಲ್ಲಿ ಬೋರಾ ಅವರ ಶವ ಹೂತಿರುವ ಜಾಗವನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಸಂಬಂಧ ಇಂದ್ರಾಣಿ ಅವರ ಕಾರು ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಮೃತ ವ್ಯಕ್ತಿಯ ಡಿಎನ್ ಎ ಸ್ಯಾಂಪಲ್ ವರದಿ ಇನ್ನೂ ಬಹಿರಂಗವಾಗಿಲ್ಲ. ಕಾರು ಚಾಲಕನ ಹೇಳಿಕೆ ಆಧಾರದ ಮೇಲೆ ಇಂದ್ರಾಣಿ ಅವರನ್ನು ಪ್ರಶ್ನಿಸಲು ಬಂಧಿಸಲಾಗಿದೆ. ಇದು ತನಿಖೆಯ ಭಾಗವಾಗಿದೆ. ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮಾರಿಯಾ ಅವರೇ ಇಂದ್ರಾಣಿ ಅವರ ವಿಚಾರಣೆ ನಡೆಸಿದ್ದು ವಿಶೇಷವಾಗಿತ್ತು.
ಇಂದ್ರಾಣಿ ಹಾಗೂ ಕಾರು ಚಾಲಕನನ್ನು ಶವ ಪತ್ತೆಯಾದ ಜಾಗಕ್ಕೆ ಕರೆದೊಯ್ದು ಹೆಚ್ಚಿನ ವಿಚಾರಣೆ ನಡೆಸಲು ತನಿಖಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. 9x ಮಾಧ್ಯಮ ಸಂಸ್ಥೆ ಸ್ಥಾಪಕಿ ಇಂದ್ರಾಣಿ ಅವರ ಬಂಧನ ಸುದ್ದಿಯನ್ನು ಕೇಳಿಸಿಕೊಳ್ಳಿ:
(ಪಿಟಿಐ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications