ಧರ್ಮ ಸಂಸತ್ನ ಹೇಳಿಕೆಗಳು ಹಿಂದುತ್ವ ಅಲ್ಲ: ಮೋಹನ್ ಭಾಗವತ್
ನಾಗ್ಪುರ, ಫೆಬ್ರವರಿ 7: ಧರ್ಮ ಸಂಸದ್ಹೆಸರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಲಾದ ಹೇಳಿಕೆಗಳು ಹಿಂದುತ್ವ ಅಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಈ ಹೇಳಿಕೆಗಳನ್ನು ಹಿಂದುತ್ವವನ್ನು ಆಚರಿಸುವವರು ಆ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಆರ್ ಎಸ್ ಎಸ್ ಮುಖ್ಯಸ್ಥರು, ಸಾವರ್ಕರ್ ಸಹ ಹಿಂದೂ ಸಮುದಾಯ ಒಗ್ಗೂಡಬೇಕು, ಸಂಘಟಿತವಾಗಬೇಕು ಎಂದು ಹೇಳಿದ್ದರೆ, ಅದು ಭಗವದ್ಗೀತೆಯ ಬಗ್ಗೆ ಮಾತಾಡುತ್ತದೆಯೇ ಹೊರತು ಮತ್ತೋರ್ವರನ್ನು ಹಿಂಸಿಸುವ ಬಗ್ಗೆಯಲ್ಲ ಎಂದು ಮೋಹನ್ ಭಾಗ್ವತ್ ತಿಳಿಸಿದ್ದಾರೆ.
ಇನ್ನು ಇದೇ ವೇಳೆ ಭಾರತ ಹಿಂದೂ ರಾಷ್ಟ್ರವಾಗುವ ಹಾದಿಯಲ್ಲಿದೆಯೇ? ಎಂಬ ಬಗ್ಗೆಯೂ ಮಾತನಾಡಿರುವ ಅವರು, "ಹಿಂದೂ ರಾಷ್ಟ್ರವೆಂಬುದು ಸೃಷ್ಟಿಸುವುದಲ್ಲ. ಯಾರು ಒಪ್ಪಲಿ, ಬಿಡಲಿ ಹಿಂದೂ ರಾಷ್ಟ್ರ ಇದ್ದೇ ಇದೆ" ಎಂದು ಹೇಳಿದ್ದಾರೆ.

ಲೋಕಮಾತ್ ಮೀಡಿಯಾ ಸಮೂಹದ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಹಿಂದುತ್ವ ಹಾಗೂ ರಾಷ್ಟ್ರೀಯ ಸಮಗ್ರತೆ ಎಂಬ ವಿಷಯದ ಬಗ್ಗೆ ಮಾತನಾಡಿರುವ ಮೋಹನ್ ಭಾಗವತ್, ಇತ್ತೀಚೆಗಷ್ಟೇ ಧರ್ಮ ಸಂಸದ್ ನಲ್ಲಿ ಬಂದ ಹೇಳಿಕೆಗಳು ಹಿಂದೂಗಳ ಶಬ್ದಗಳಲ್ಲ. ಯಾರಾದರೂ ಕೋಪದಲ್ಲಿ ಏನಾದರೂ ಹೇಳಿದರೆ ಅದು ಹಿಂದುತ್ವವಲ್ಲ. ಆರ್ ಎಸ್ಎಸ್ ಅಥವಾ ಹಿಂದುತ್ವವನ್ನು ಪಾಲಿಸುವ ಯಾರೇ ಆಗಿರಲಿ ಅದರಲ್ಲಿ ನಂಬಿಕೆ ಹೊಂದಿರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಚತ್ತೀಸ್ ಗಢದಲ್ಲಿ ನಡೆದ ಧರ್ಮ ಸಂಸದ್ ನಲ್ಲಿ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರು ಮಹಾತ್ಮ ಗಾಂಧಿ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿ ನಾಥುರಾಮ್ ಗೋಡ್ಸೆ ಅವರನ್ನು ಸ್ತುತಿಸುತ್ತಿದ್ದ ಪ್ರಕರಣ ಹಾಗೂ ಉತ್ತರಾಖಂಡ್ ನಲ್ಲಿ ಡಿಸೆಂಬರ್ ನಲ್ಲಿ ನಡೆದ ಧರ್ಮ ಸಂಸದ್ ನಲ್ಲಿ ಭಾಗವಹಿಸಿದ್ದವರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದಿಸುವ ಭಾಷಣ ಮಾಡಿದ್ದರ ಪ್ರಕರಣಗಳ ಬಗ್ಗೆ ಮೋಹನ್ ಭಾಗ್ವತ್ ತಮ್ಮ ಅಭಿಪ್ರಾಯವನ್ನು ಭಾಷಣದಲ್ಲಿ ವ್ಯಕ್ತಪಡಿಸಿದ್ದಾರೆ.
ಸಂಘವು ಜನರನ್ನು ವಿಭಜಿಸುವುದರಲ್ಲಿ ಅಲ್ಲ, ಅವರ ಭಿನ್ನಾಭಿಪ್ರಾಯಗಳನ್ನು ದೂರ ಮಾಡುವುದರಲ್ಲಿ ನಂಬಿಕೆ ಇಟ್ಟಿದೆ. ಇದರಿಂದ ಒಗ್ಗಟ್ಟು ಮತ್ತಷ್ಟು ಗಟ್ಟಿಯಾಗುತ್ತದೆ, ನಾವು ಹಿಂದುತ್ವ ಮೂಲಕ ಈ ಕೆಲಸವನ್ನು ಮಾಡಲು ಬಯಸುತ್ತೇವೆ ಎಂದರು.
2018ರಲ್ಲಿ ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಬಗೆಗಿನ ನೆನಪು ಮೆಲುಕು ಹಾಕಿದ ಅವರು, ಆ ಸಮಯದಲ್ಲಿ ಘರ್ ವಾಪಸಿ ವಿಷಯವು ತುಂಬಾ ಚರ್ಚೆಯಲ್ಲಿತ್ತು. ಸಂಸತ್ನಲ್ಲಿಯೂ ಗದ್ದಲವೆದ್ದಿತ್ತು ಎಂದರು.
Recommended Video
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications