ನಟಿ ಜಿಯಾ ಖಾನ್ ಸಾವಿನ ತನಿಖೆ ಬಗ್ಗೆ ಸ್ವಾಮಿ ಟ್ವೀಟ್
ಮುಂಬೈ, ಆ. 23: ಬಾಲಿವುಡ್ ನಟಿ ಜಿಯಾ ಖಾನ್ ಅವರ ಸಾವು ಆತ್ಮಹತ್ಯೆಯಿಂದ ಸಂಭವಿಸಿದ್ದು, ಕೊಲೆಯಾಗಿಲ್ಲ ಎಂದು ಸಿಬಿಐ ಕೇಸ್ ಮುಕ್ತಾಯಗೊಳಿಸಿದ್ದು ನೆನಪಿರಬಹುದು. ಈಗ ಎಲ್ಲೆಡೆ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸಿನದ್ದೇ ಸುದ್ದಿ. ಸುಶಾಂತ್ ಪ್ರಕರಣದ ಪರ ಬಹಿರಂಗವಾಗಿ ವಕಾಲತ್ತು ವಹಿಸಿದ್ದ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಈಗ ಜಿಯಾ ಖಾನ್ ಪ್ರಕರಣದ ಪರ ಟ್ವೀಟ್ ಮಾಡಿದ್ದಾರೆ.
ಜಿಯಾ ಖಾನ್ ತಾಯಿ ರಬಿಯಾ ಆವರು ತಮ್ಮ ಮಗಳ ಸಾವಿನ ಬಗ್ಗೆ ಬ್ರಿಟಿಷ್ ವಿಧಿ ವಿಜ್ಞಾನ ಇಲಾಖೆ ತಜ್ಞರೊಬ್ಬರ ಅಭಿಪ್ರಾಯ ಕೇಳಿ, ಜಿಯಾ ಖಾನ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ವರದಿ ಪಡೆದುಕೊಂಡಿದ್ದರು. ಆದರೆ ನಂತರ ಯಾವುದೇ ಬೆಳವಣಿಗೆಯಾಗಿರಲಿಲ್ಲ.
ಈಗ ಸುಶಾಂತ್ ಸಿಂಗ್ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಕಾಣಿಸುತ್ತಿದ್ದು, ಸಿಬಿಐ ಮೂಲಕ ಪ್ರಕರಣಕ್ಕೆ ಸರಿಯಾದ ಅಂತ್ಯ ಸಿಗಲಿದೆ ಎಂದು ಸ್ವಾಮಿ ಕೂಡಾ ಪ್ರತಿಪಾದಿಸಿದ್ದರು. ಈಗ 2013ರ ಜಿಯಾಖಾನ್ ನಿಗೂಢ ಆತ್ಮಹತ್ಯೆ ಪ್ರಕರಣದ ಬಗ್ಗೆ ಸ್ವಾಮಿ ಟ್ವೀಟ್ ಮಾಡಿದ್ದು, ಜಿಯಾಖಾನ್ ಕೇವಲ ಆತ್ಮಹತ್ಯೆಯಿಂದ ಸತ್ತದ್ದು ಎಂದರೆ ಅದು ಬೋಗಸ್ ಎಂದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವರದಿ, 2018ರಲ್ಲಿ ಕೋರ್ಟ್ ಆದೇಶ ನೋಡಿದ್ದೇನೆ. ಆ ಕುಟುಂಬದ ಪರ ಯಾರು ವಾದಿಸಿದ್ದು? ಎಂದು ಸ್ವಾಮಿ ಪ್ರಶ್ನಿಸಿದ್ದಾರೆ.
I find from records with CBI and also according a 2018 Court decision that Actress Jiah, a talented actress is an unresolved case for prosecution. Simple suicide is bogus. Who was the lawyer for the family?
— Subramanian Swamy (@Swamy39) August 22, 2020
ಜಿಯಾಖಾನ್ ತಾಯಿ ರಬಿಯಾ ಕೂಡಾ ಸುಶಾಂತ್ ಹಾಗೂ ಜಿಯಾ ಇಬ್ಬರಿಗೂ ಇಂಡಸ್ಟ್ರಿಯಲ್ಲಿ ಸುಳ್ಳು ಪ್ರೇಮ, ಪ್ರೀತಿಯ ಜಾಲದಲ್ಲಿ ಸಿಲುಕಿಸಲಾಗಿತ್ತು. ಇಬ್ಬರನ್ನು ತಮ್ಮ ಕುಟುಂಬದಿಂದ ದೂರ ಇಡಲಾಗಿತ್ತು.ದೈಹಿಕ, ಮಾನಸಿಕ ಹಿಂಸೆ ನೀಡಿ ಅವರ ಜೀವನವನ್ನು ಅಂತ್ಯಗೊಳಿಸಲಾಯಿತು ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications