ಪ್ರತ್ಯೂಷಾ ಬಾಯ್ ಫ್ರೆಂಡ್ ಗೆ ಜಾಮೀನು ಮಂಜೂರು!
ಮುಂಬೈ, ಏಪ್ರಿಲ್ 26: ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಬಾಲಿಕಾ ವಧು' ಖ್ಯಾತಿಯ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಆದರೆ, ಆಕೆ ಬಾಯ್ ಫ್ರೆಂಡ್ ರಾಹುಲ್ ರಾಜ್ ಸಿಂಗ್ ಗೆ ಮಂಗಳವಾರ (ಏಪ್ರಿಲ್ 26) ನಿರೀಕ್ಷಣಾ ಜಾಮೀನು ದೊರೆತಿದೆ.
24 ವರ್ಷ ವಯಸ್ಸಿನ ನಟಿ ಪ್ರತ್ಯೂಷಾ ಅವರು ಗರ್ಭಿಣಿಯಾಗಿದ್ದರು ಎಂಬ ಅನುಮಾನ ಈಗ ನಿಜವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಜಸ್ಟೀಸ್ ಮೃದುಲಾ ಭಟ್ಕರ್ ಅವರು ಪ್ರಕರಣದ ವಿಚಾರಣೆ ನಡೆಸಿ, ಜಾಮೀನು ನೀಡಿದ್ದಾರೆ. ['ಬಾಲಿಕಾ ವಧು' ಪ್ರತ್ಯೂಷಾ ಆತ್ಮಹತ್ಯೆಗೆ ಏನು ಕಾರಣ?]

ಪ್ರತ್ಯೂಷಾ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಫೋನ್ ಮಾಡಿ ಮಾತನಾಡಿದ ಕರೆ ಪಟ್ಟಿ ವಿವರ, ಆಡಿಯೋ ಕ್ಲಿಪ್ಪಿಂಗ್ ಆಲಿಸಿದ ನ್ಯಾಯಾಲಯ, ಆರೋಪಿ ರಾಹುಲ್ ವಿರುದ್ಧ ಸರಿಯಾದ ಸಾಕ್ಷಿ ಸಿಗದ ಕಾರಣ ನಿರೀಕ್ಷಣಾ ಜಾಮೀನು ನೀಡಿದೆ.
ಬಂಗೂರು ಪೊಲೀಸ್ ಠಾಣೆಗೆ ವಾರಕ್ಕೆ ಮೂರು ಬಾರಿ ಭೇಟಿ ನೀಡಬೇಕು. ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.
ಬಾಲಿಕಾ ವಧು ಧಾರಾವಾಹಿಯ ಆನಂದಿ ಪಾತ್ರಧಾರಿ ಪ್ರತ್ಯೂಷಾಮುಂಬೈನ ಕಂಡಿವಿಲಿಯ ಬಂಗೂರ್ ನಗರ್ ನ ಫ್ಲಾಟ್ ನಲ್ಲಿ ನೇಣು ಬಿಗಿದುಕೊಂಡು ಶುಕ್ರವಾರ(ಏಪ್ರಿಲ್ 01) ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೂಷಾ ಅವರ ಗೆಳೆಯ ರಾಹುಲ್ ಸಿಂಗ್ ರನ್ನು ವಶಕ್ಕೆ ಪಡೆದು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದರು
ಬಾಲಿಕಾ ವಧು ಧಾರಾವಾಹಿಯ ಆನಂದಿ ಪಾತ್ರದ ಮೂಲಕ ಮನೆ ಮಾತಾಗಿದ್ದ ಪ್ರತ್ಯೂಷಾ ಅವರು ಕೆಲಕಾಲದಿಂದ ಮಾನಸಿಕ ಖಿನ್ನತ ಅನುಭವಿಸುತ್ತಿದ್ದರು. ಇದಲ್ಲದೆ ಆಕೆಯ ತನ್ನ ಬಾಯ್ ಫ್ರೆಂಡ್ ರಾಹುಲ್ ರಾಜ್ ಸಿಂಗ್ ಜೊತೆ ಮನಸ್ತಾಪ ಮಾಡಿಕೊಂಡಿದ್ದರು
ವೈದ್ಯಕೀಯ ವರದಿಯ ಅನ್ವಯ ಆಕೆಯ ಗುಪ್ತಾಂಗದಲ್ಲಿ ಬಿಳಿದ್ರವ ಪತ್ತೆಯಾಗಿದ್ದು, ಆಕೆ ಸಾಯುವುದಕ್ಕೂ ಮುನ್ನ ಗರ್ಭಿಣಿಯಾಗಿದ್ದರೆ? ಎಂಬ ಪ್ರಶ್ನೆಗೆ histopathology ಪರೀಕ್ಷೆಯಿಂದ ಉತ್ತರ ಸಿಕ್ಕಿತ್ತು. ಆದರೆ, ಆಕೆ ಸಾವಿಗೆ ರಾಹುಲ್ ಕಾರಣ ಎನ್ನುವುದಕ್ಕೆ ಯಾವುದೇ ಪುರಾವೆ ಇನ್ನೂ ಸಿಕ್ಕಿಲ್ಲ. (ಒನ್ ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications