ನಟ ಸುಶಾಂತ್ ಸಿಂಗ್ ಸಾವಿಗೆ 'Asphyxia' ಕಾರಣ ಎಂದ ಮರಣೋತ್ತರ ಪರೀಕ್ಷೆ ವರದಿ
ಮುಂಬೈ, ಜೂನ್ 15: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಭಾನುವಾರ ಮುಂಬೈನ ಬಾಂದ್ರಾದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
Recommended Video
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡುಬಂದಿತ್ತಾದರೂ ಅದಕ್ಕೆ ಖಚಿತ ಸಾಕ್ಷಿ ಸಿಕ್ಕಿರಲಿಲ್ಲ. ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ 'ಡೆತ್ ನೋಟ್' ಸಹ ಇರಲಿಲ್ಲ. ಸಹಜವಾಗಿ ಆ ಸಾವಿನ ಮೇಲೆ ಸ್ವಲ್ಪ ಮಟ್ಟಿಗೆ ಅನುಮಾನ ಇತ್ತು.
ಹಾಗಾಗಿ, ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದರು. ನಿರೀಕ್ಷೆಯಂತೆ ವರದಿ ಪೊಲೀಸರ ಕೈ ಸೇರಿದ್ದು ಸಾವಿಗೆ ನಿಜವಾದ ಕಾರಣ ಬಹಿರಂಗವಾಗಿದೆ. ಮುಂದೆ ಓದಿ...

'ಆತ್ಮಹತ್ಯೆ' ಎಂದ ಮರಣೋತ್ತರ ಪರೀಕ್ಷೆಯ ವರದಿ
ಬಾಲಿವುಡ್ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿರುವುದು ಸತ್ಯ ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳಿದೆ. ಜುಹುದಲ್ಲಿನ ಕೂಪರ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆದಿದ್ದು, ಸುಮಾರು ಎರಡು ಗಂಟೆ ಬಳಿಕ ವರದಿ ನೀಡಿದ್ದಾರೆ ವೈದ್ಯರು. ಈ ವರದಿಯಲ್ಲಿ ಸುಶಾಂತ್ ಸಾವಿಗೆ 'asphyxia' ಕಾರಣ ಎಂದಿದ್ದಾರೆ.

ಏನಿದು 'asphyxia' ?
ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಖಚಿತಪಡಿಸಿರುವ ವೈದ್ಯರು ಆತನ ಸಾವಿಗೆ asphyxia ಅಂದರೆ 'ಉಸಿರುಗಟ್ಟುವಿಕೆ' ಪ್ರಮುಖ ಕಾರಣ ಎಂದಿದ್ದಾರೆ. ಸಹಜವಾಗಿ ನೇಣು ಬಿಗಿದುಕೊಂಡಾಗ ಉಸಿರಾಟ ತೊಂದರೆ ಉಂಟಾಗಿ ಉಸಿರುಗಟ್ಟುತ್ತೆ. ಈ ಸಮಯದಲ್ಲಿ ದೇಹಕ್ಕೆ ಆಕ್ಸಿಜನ್ ಕೊರತೆ ಉಂಟಾಗುತ್ತೆ. ದೇಹಕ್ಕೆ ಆಮ್ಲಜನಕ ಸಿಗದೇ ಇದ್ದಾಗ ಆತ ಪ್ರಜ್ಞೆ ಕಳೆದುಕೊಳ್ಳಬಹುದು ಅಥವಾ ಸಾವನ್ನಪ್ಪಬಹುದು. ಆದ್ದರಿಂದಲೇ ನಟ ಸುಶಾಂತ್ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಮರಣೋತ್ತರ ಪರೀಕ್ಷೆಯಲ್ಲಿ ತಿಳಿಸಿದ್ದಾರೆ.

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಟ
ಸುಶಾಂತ್ ಸಿಂಗ್ ದೈಹಿಕವಾಗಿ ತುಂಬಾ ಆರೋಗ್ಯವಾಗಿದ್ದರು. ಆದರೆ, ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಮೂಲಗಳು ಹೇಳಿದೆ. ಕಳೆದ 6 ತಿಂಗಳಿನಿಂದ ಸುಶಾಂತ್ ಒತ್ತಡ ಮತ್ತು ಖಿನ್ನತೆಗೆ ಒಳಗಾಗಿದ್ದರು. ಆದರೆ, ಯಾವ ವಿಚಾರಕ್ಕಾಗಿ ಎನ್ನುವುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಸುಶಾಂತ್ ನಿವಾಸದಿಂದ ಪೊಲೀಸರು ಕೆಲವು ವೈದ್ಯಕೀಯ ವರದಿಗಳನ್ನು ಸಹ ವಶಕ್ಕೆ ಪಡೆದುಕೊಂಡಿದ್ದಾರೆ.

ಕೊವಿಡ್ ಪರೀಕ್ಷೆ ಆಗಿತ್ತು
ಸುಶಾಂತ್ ಸಿಂಗ್ ಕೊರೊನಾ ವೈರಸ್ ಪರೀಕ್ಷೆಗೂ ಒಳಪಟ್ಟಿದ್ದರು. ಅದರಲ್ಲಿ ಫಲಿತಾಂಶ ನೆಗಿಟಿವ್ ಬಂದಿತ್ತು. ಆದರೂ ಹೆಚ್ಚಿನ ಪರೀಕ್ಷೆಗಾಗಿ ಮತ್ತೊಮ್ಮೆ ಸುಶಾಂತ್ ಸಿಂಗ್ ಮಾದರಿಯನ್ನು ಪರೀಕ್ಷೆಗಾಗಿ ಲ್ಯಾಬ್ಗೆ ಕಳುಹಿಸಿಕೊಡಲಾಗಿದೆ. ಈ ನಡುವೆ ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣವೂ ತನಿಖೆಯಲ್ಲಿದೆ. ಅದರಲ್ಲಿ ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದು ನಿಜಕ್ಕೂ ಅನುಮಾನ ಮೂಡಿಸಿದೆ.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications