ಸುಶಾಂತ್ ಸಿಂಗ್ ಆತ್ಮಹತ್ಯೆ: ಪೊಲೀಸರ ಮುಂದೆ ಹಾಜರಾದ ಸಂಜಯ್ ಲೀಲಾ ಬನ್ಸಾಲಿ
ಮುಂಬೈ, ಜುಲೈ 6: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಇಂದು ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ಹೇಳಿಕೆ ನೀಡುವಂತೆ ಬನ್ಸಾಲಿಗೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದರು. ಹೀಗಾಗಿ, ಇಂದು ಮಧ್ಯಾಹ್ನ 12.30ರ ಸಮಯಕ್ಕೆ ಬನ್ಸಾಲಿ ಪೊಲೀಸ್ ಠಾಣೆಗೆ ಆಗಮಿಸಿದರು.
ಬನ್ಸಾಲಿ ಜೊತೆ ವಕೀಲ ಹಾಗೂ ಇಬ್ಬರು ಸಿಬ್ಬಂದಿ ಸಹ ಜೊತೆಯಲ್ಲಿ ಬಂದಿದ್ದರು. ರಜನಪೂತ್ ಜೊತೆ ಸಿನಿಮಾಗೆ ಸಂಬಂಧಪಟ್ಟಂತೆ ಒಪ್ಪಂದ ಮಾಡಿಕೊಂಡಿದ್ದರು. ಹಾಗಾಗಿ, ಸುಶಾಂತ್ ಮತ್ತು ಬನ್ಸಾಲಿ ನಡುವೆ ವ್ಯವಹಾರದ ಕುರಿತು ವಿವರಣೆ ಪಡೆಯಲಿದ್ದಾರೆ.

ಈಗಾಗಲೇ ಸುಶಾಂತ್ ಸಿಂಗ್ ಆತ್ಮಹತ್ಯೆ ಕೇಸ್ನಲ್ಲಿ 30 ಜನರನ್ನು ವಿಚಾರಣೆ ಮಾಡಲಾಗಿದೆ. ಸುಶಾಂತ್ ಕುಟುಂಬಸ್ಥರು, ಗೆಳತಿ ರಿಯಾ ಚಕ್ರವರ್ತಿ, ಕಾಸ್ಟಿಂಗ್ ನಿರ್ದೇಶಕ ಮುಖೇಶ್, ಯಶ್ ರಾಜ್ ಬ್ಯಾನರ್ ನ ಕಾಸ್ಟಿಂಗ್ ನಿರ್ದೇಶಕ ಸೇರಿಸಂತೆ ಹಲವರ ಹೇಳಿಕೆ ಪಡೆಯಲಾಗಿದೆ.
ಅಂದ್ಹಾಗೆ, ಸುಶಾಂತ್ ಸಿಂಗ್ ಜೂನ್ 14 ರಂದು ಬಾಂದ್ರಾದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಪ್ರಾಥಮಿಕ ವರದಿ ಹಾಗೂ ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿರುವ ಕಾರಣ ಬಾಲಿವುಡ್ ಸೆಲೆಬ್ರಿಟಿಗಳು ವಿಚಾರಣೆ ಮಾಡಲಾಗುತ್ತಿದೆ.
ಇನ್ನು ಸುಶಾಂತ್ ಸಾವಿನ ಹಿನ್ನೆಲೆ ಪಾಟ್ನಾದ ನ್ಯಾಯಾಲಯದಲ್ಲಿ ಸಲ್ಮಾನ್ ಖಾನ್, ಸಂಜಯ್ ಲೀಲಾ ಬನ್ಸಾಲಿ, ಕರಣ್ ಜೋಹರ್ ಸೇರಿದಂತೆ ಹಲವು ಜನರ ಮೇಲೆ ಕೇಸ್ ದಾಖಲಾಗಿದೆ. ನಟಿ ಹಾಗೂ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧವೂ ದೂರು ದಾಖಲಾಗಿದೆ.
-
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್












Click it and Unblock the Notifications