Breaking: ಮಹಾರಾಷ್ಟ್ರ; ಭಾರಿ ಶಸ್ತ್ರಾಸ್ತ್ರಸಹಿತ ಬೋಟ್ ಪತ್ತೆ
ಮುಂಬೈ, ಆಗಸ್ಟ್ 18: ಮಹಾರಾಷ್ಟ್ರದ ಹರಿಹರೇಶ್ವರ ಬೀಚ್ ಮತ್ತು ರಾಯಗಢದ ಕರಾವಳಿಯ ಭಾರದ್ಖೋಲ್ನಲ್ಲಿ ಅಪರಿಚಿತ ಬೋಟ್ಗಳು ಪತ್ತೆಯಾಗಿವೆ. ಹರಿಹರೇಶ್ವರ ಬೀಚ್ನಲ್ಲಿ ಪತ್ತೆಯಾದ ಬೋಟ್ನಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿದೆ.
ಬೋಟ್ನಲ್ಲಿ ಮೂರು ಆಕ್ರಮಣಕಾರಿ ರೈಫಲ್ಗಳು, ಎಕೆ -47 ಮತ್ತು 1 0 ಜೀವಂತ ಮದ್ದುಗುಂಡುಗಳ ಪೆಟ್ಟಿಗೆಗಳು ಪತ್ತೆಯಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಶಂಕಿತ ದೋಣೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ರಾಯಗಢ ಜಿಲ್ಲೆ ಮತ್ತು ಸಮೀಪದ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ತನಿಖೆ ನಡೆಯುತ್ತಿದೆ.

"ಲೈಫ್ ಬೋಟ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪತ್ತೆಯಾದಾಗ ಎರಡೂ ಹಡಗುಗಳಲ್ಲಿ ಮನುಷ್ಯರು ಇರಲಿಲ್ಲ. ಕೋಸ್ಟ್ ಗಾರ್ಡ್ ಮತ್ತು ಮಹಾರಾಷ್ಟ್ರ ಕಡಲು ಮಂಡಳಿಗೆ ಈ ಬಗ್ಗೆ ತಿಳಿಸಲಾಗಿದೆ. ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿ ದೋಣಿ ಪತ್ತೆಯಾಗಿದೆ. ಇದನ್ನು ಮೊದಲು ಸ್ಥಳೀಯರು ಗಮನಿಸಿದ್ದು, ನಂತರ ಬೋಟ್ ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

"ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಯಗಡದ ಶ್ರೀವರ್ಧನ್ನ ಹರಿಹರೇಶ್ವರ ಮತ್ತು ಭಾರದ್ಖೋಲ್ನಲ್ಲಿ ಶಸ್ತ್ರಾಸ್ತ್ರಗಳು ಮತ್ತು ದಾಖಲೆಗಳನ್ನು ಹೊಂದಿರುವ ಕೆಲವು ದೋಣಿಗಳು ಪತ್ತೆಯಾಗಿವೆ. ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಎಟಿಎಸ್ ಅಥವಾ ರಾಜ್ಯ ಏಜೆನ್ಸಿಯ ಎಸ್ಪಿಎಲ್ ತಂಡವನ್ನು ತುರ್ತಾಗಿ ನೇಮಿಸುವಂತೆ ನಾನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದೇನೆ" ಎಂದು ಸ್ಥಳೀಯ ಶ್ರೀವರ್ಧನ್ (ರಾಯಗಡ) ಶಾಸಕಿ ಅದಿತಿ ತಟ್ಕರೆ ತಿಳಿಸಿದರು.
"ನಾಳೆ ದಹಿ ಹಂಡಿ ಹಬ್ಬವಿದೆ. ಗಣೇಶೋತ್ಸವಕ್ಕೆ ಕೇವಲ 10 ದಿನಗಳು ಮಾತ್ರ ಇವೆ. ಈ ಹಬ್ಬಗಳ ಸಂದರ್ಭದಲ್ಲಿ ಜನರು ಇಲ್ಲಿಗೆ ಹೆಚ್ಚಿಗೆ ಬರುತ್ತಾರೆ. ಭದ್ರತೆಯು ಒಂದು ಪ್ರಮುಖ ವಿಷಯವಾಗಿದೆ" ಎಂದು ಶಾಸಕಿ ಹೇಳಿದರು.
'ಭಯೋತ್ಪಾದನೆ ಅಂಶಕ್ಕೆ ಯಾವುದೇ ದೃಢೀಕರಣವಿಲ್ಲ. ಬೋಟ್ಗಳು ದೊರಕಿವೆ. ನಾವು ಯಾವುದನ್ನು ಸುಮ್ಮನೆ ತಳ್ಳಿಹಾಕುವುದಿಲ್ಲ, ಎಲ್ಲಾ ಅಂಶಗಳನ್ನು ತನಿಖೆ ಮಾಡುತ್ತೇವೆ. ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ' ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು.
Recommended Video
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications