ರಾಜಪಕ್ಸೆ ಪರ ಪ್ರಚಾರ, ಸಲ್ಲೂ ವಿರುದ್ಧ ತಮಿಳರ ಪ್ರತಿಭಟನೆ
ಮುಂಬೈ, ಜ.4: ಶ್ರೀಲಂಕಾದ ಅಧ್ಯಕ್ಷ ಮಹೀಂದ್ರ ರಾಜಪಕ್ಸೆ ಪರ ಚುನಾವಣೆಯಲ್ಲಿ ಪ್ರಚಾರ ನಡೆಸಿದ ಬಾಲಿವುಡ್ ನಟ ಸಲ್ಮಾನ್ಖಾನ್ ವಿರುದ್ಧ ತಮಿಳರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿನಲ್ಲಿ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮುಂಬೈನ ಸಲ್ಮಾನ್ ನಿವಾಸದ ಎದುರು ತಮಿಳು ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ತಮಿಳುನಾಡಿನ ವಿವಿಧ ರಾಜಕೀಯ ಪಕ್ಷಗಳು ಪಕ್ಷಭೇದ ಮರೆತು ಸಲ್ಮಾನ್ಖಾನ್ ವಿರುದ್ಧ ಕಿಡಿಕಾರಿವೆ. ತಕ್ಷಣವೇ ಅವರ ವಿರುದ್ಧ ಕೇಂದ್ರ ಸರ್ಕಾರ ಕಾನೂನು ಕ್ರಮ ಜರುಗಿಸಬೇಕೆಂದು ಅನೇಕ ಪಕ್ಷಗಳ ಮುಖಂಡರು ಒತ್ತಾಯಿಸಿದ್ದಾರೆ. [ಜಾಕ್ವಲಿನ್ ಜೊತೆ ಸಲ್ಲೂ ಸುತ್ತಾಟವೇಕೆ?]
ತಮಿಳುನಾಡಿನಾದ್ಯಂತ ಭಾರೀ ಪ್ರತಿಭಟನೆ ನಡೆಸಿದ ವರದಿಗಳು ಬಂದಿವೆ. ಇದರ ಬೆನ್ನಲ್ಲೇ ಮುಂಬೈನಲ್ಲಿ ಸಲ್ಮಾನ್ ನಿವಾಸದ ಎದುರು ಪ್ರತಿಭಟನೆ ಆರಂಭವಾಗಿತ್ತು. ಅದರೆ, ಸಲ್ಮಾನ್ ನಿವಾಸಕ್ಕೆ ಪೊಲೀಸರು ಭಾರೀ ಭದ್ರತೆ ಒದಗಿಸಿ, ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಸಲ್ಮಾನ್ಖಾನ್ಗೆ ತಮಿಳರಿಂದ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಭದ್ರತೆಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ತಿಳಿಸಿದ್ದಾರೆ. ಚೆನ್ನೈ ಸೇರಿದಂತೆ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಸಲ್ಮಾನ್ಖಾನ್ ವಿರುದ್ಧ ಪ್ರತಿಭಟನೆ ಜೋರಾಗಿದೆ. ಅವರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು.
Protests outside #salman khan's house in Mumbai. Tamil group protesting against the actor. pic.twitter.com/vuAmhr33Ya
— Rohit Khilnani (@rohitkhilnani) January 4, 2015 ತಕ್ಷಣವೇ ಸಲ್ಮಾನ್ಖಾನ್ ಅವರು ಬಹಿರಂಗ ಕ್ಷಮೆ ಯಾಚಿಸಬೇಕು. ಇನ್ನು ಮುಂದೆ ಶ್ರೀಲಂಕಾದಲ್ಲಿ ಪ್ರಚಾರ ನಡೆಸುವುದಿಲ್ಲ ಎಂದು ವಾಗ್ದಾನ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಕೊಲಂಬೋದಲ್ಲಿ ಸಲ್ಮಾನ್ಖಾನ್ ರಾಜಪಕ್ಸೆ ಪರ ಪ್ರಚಾರ ನಡೆಸಿದ್ದರು. ಇದು ತಮಿಳರ ಕೆಂಗಣ್ಣಿಗೆ ಗುರಿಯಾಗಿತ್ತು.
ಜಾಫ್ನಾದಲ್ಲಿ ಎಲ್ಟಿಟಿಇ ಉಗ್ರರ ಮೇಲೆ ದಾಳಿ ನಡೆಸಿದಾಗ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ. ತಮಿಳರನ್ನು ನಿಕೃಷ್ಟವಾಗಿ ರಾಜಪಕ್ಸೆ ನಡೆಸಿಕೊಂಡಿದ್ದಾರೆ ಎಂಬ ಆರೋಪ ಹೊತ್ತಿದ್ದಾರೆ. ಶ್ರೀಲಂಕಾ ಭೇಟಿ ಬಗ್ಗೆ ಟ್ವೀಟ್ ಮಾಡಿದ್ದ ಸಲ್ಮಾನ್ ಖಾನ್, ರಾಜಪಕ್ಸೆ ಪರ ಪ್ರಚಾರ ಮಾಡಿದ್ದರ ಬಗ್ಗೆ ಏನು ಹೇಳಿರಲಿಲ್ಲ ಎಂಬುದು ಗಮನಾರ್ಹ.
4/4 : its worth a visit . i'm surely going back for more .
— Salman Khan (@BeingSalmanKhan) December 31, 2014 ಸಲ್ಮಾನ್ ಖಾನ್ ಅಲ್ಲದೆ ಬಿಜೆಪಿ ಸಾಮಾಜಿಕ ಮಾಧ್ಯಮಗಳ ತಜ್ಞ ಅರವಿಂದ್ ಗುಪ್ತ ಅವರು ಕೂಡಾ ರಾಜಪಕ್ಸೆ ಜನಪ್ರಿಯತೆ ಹೆಚ್ಚಿಸಲು ನೆರವಾಗುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಜ.8 ರಂದು ಚುನಾವಣೆ ನಡೆಯಲಿದೆ.
ರಾಜಪಕ್ಸೆ ಅವರ ಮಗ ನಮಲ್ ರಾಜಪಕ್ಸೆ ಹಾಗೂ ನೆಚ್ಚಿನ ನಟಿ ಜಾಕ್ವಲೀನ್ ಫರ್ನಾಂಡೀಸ್ ಅವರ ಕೋರಿಕೆಯ ಮೇರೆಗೆ ಸಲ್ಮಾನ್ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು.(ಪಿಟಿಐ)
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications